ಅರಣ್ಯದಲ್ಲಿ ಅಕ್ರಮವಾಗಿ ಮಾಕಳಿ ಬೇರು ಸಂಗ್ರಹಿಸುತಿದ್ದ 6 ಮಂದಿ ಬಂಧನ
Team Udayavani, Aug 25, 2020, 5:53 PM IST
ಹನೂರು( ಚಾಮರಾಜನಗರ): ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮಾಕಳಿ ಬೇರು ಸಂಗ್ರಹಿಸುತ್ತಿದ್ದ 2 ಮಹಿಳೆಯರು, 4 ಪುರುಷರು ಸೇರಿ ಒಟ್ಟು 6 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸುವಲ್ಲಿ ಕಾವೇರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲೂಕಿನ ಆಲಂಬಾಡಿ ಗ್ರಾಮದ ಕುಟ್ಟಿ, ಬಿಳಿಗುಂಡ್ಲುವಿನ ಅರುಳ್, ಚಾರ್ಲಿಸ್, ಬಾಲ, ಆರೋಗ್ಯಮೇರಿ ಮತ್ತು ತೆರೆಸಾ ಎಂಬುವರೇ ಬಂಧಿತ ಆರೋಪಿಗಳಾಗಿದ್ದು, ಈ 6 ಜನರ ತಂಡ ಕಾವೇರಿ ವನ್ಯಜೀವಿ ವಲಯ ಕೌದಳ್ಳಿ ವಿಭಾಗದ ಬಿಜ್ಜಲಾನೆ ಗಸ್ತುವಿನ ಎರಮೋಡ್ ಎಂಬುವಲ್ಲಿ ಅಕ್ರಮವಾಗಿ ಮಾಕಳಿ ಬೇರನ್ನು ಸಂಗ್ರಹಿಸುತ್ತಿದ್ದರು. ಈ ಸಂಬಂಧ ದೊರೆತ ಮಾಹಿತಿ ಮೇರೆಗೆ ಡಿಎಫ್ಓ ರಮೇಶ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿ 6 ಜರನ್ನು ಬಂಧಿಸಿ ಬಂಧಿತರಿಂದ 2 ಚೀಲದಲ್ಲಿ ಅಂಗ್ರಹಿಸಿದ್ದ 35 ಕೆ.ಜಿ ಮಾಕಳಿ ಬೇರು ಮತ್ತು2 ಉರುಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಾಳಿಯಲ್ಲಿ ಉಪವಲಯ ಅರಣ್ಯಾಧಿಕಾರಿ ಕನಕರಾಜ, ಅರಣ್ಯ ರಕ್ಷಕ ಮಲ್ಲಿಕಾರ್ಜುನ ಈರಪ್ಪ, ಮಂಜುನಾಥ ಬಿಜ್ಜರಗಿ, ಪಿ.ಸಿ.ಪಿ ನೌಕರರಾದ ಮಹದೇವ, ಚಿಕ್ಕನಾಗಶೆಟ್ಟಿ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!