ಸ್ಮಾರ್ಟ್‌ ಅಂಗನವಾಡಿ: ಜಿಲ್ಲೆಗೆ 1,239 ಫೋನ್

ಸಿಮ್‌ ಕಾರ್ಡ್‌ ಸಿಗದ ಹಿನ್ನೆಲೆ ವಿತರಣೆಗೆ ಹಿನ್ನಡೆ

Team Udayavani, Aug 26, 2020, 6:15 AM IST

ಸ್ಮಾರ್ಟ್‌ ಅಂಗನವಾಡಿ: ಜಿಲ್ಲೆಗೆ 1,239 ಫೋನ್

ಉಡುಪಿ: ಅಂಗನವಾಡಿ ಕೇಂದ್ರಗಳ ದೈನಂದಿನ ಕಾರ್ಯ ಚಟುವಟಿಕೆಗಳನ್ನು ಡಿಜಿಟಲ್‌ ಮಾಡುವ ನಿಟ್ಟಿನಲ್ಲಿ ಪೋಷಣ್‌ ಅಭಿಯಾನದಡಿಯಲ್ಲಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗಾಗಿ 1,239 ಸ್ಮಾರ್ಟ್‌ಫೋನ್‌ ಮುಂಜೂರಾಗಿವೆ. ಆದರೆ ಇನ್ನೂ ಸಿಮ್‌ ಕಾರ್ಡ್‌ ಸಿಗದೆ ವಿತರಣೆಯಾಗಿಲ್ಲ.

ಅಂಗನವಾಡಿ ಆನ್‌ಲೈನ್‌ ವ್ಯಾಪ್ತಿಗೆ
ಕೇಂದ್ರ ಸರಕಾರವು ಪೋಷಣ್‌ ಅಭಿಯಾನ ಯೋಜನೆಯಡಿಯಲ್ಲಿ ಅಂಗನವಾಡಿ ಕೇಂದ್ರ ಗಳನ್ನು ಆನ್‌ಲೈನ್‌ ವ್ಯಾಪ್ತಿಗೆ ತರಲು ಯೋಜನೆ ಸಿದ್ಧಪಡಿಸಿ, ಸ್ನೇಹಾ ಆ್ಯಪ್‌ ರೂಪಿಸಿದೆ. ಇಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌), ಮಾತೃಪೂರ್ಣ, ಮಾತೃ ವಂದನ, ಮಾತೃಶ್ರೀ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಕೇಂದ್ರದ ಪ್ರತಿನಿತ್ಯದ ಆಗುಹೋಗುಗಳ ಕುರಿತ ಸುಮಾರು 40 ಬಗೆಯ ಕಡತಗಳನ್ನು ಈ ಆ್ಯಪ್‌ ಮೂಲಕ ನಿರ್ವಹಣೆ ಮಾಡಬಹುದಾಗಿದೆ. ಕಾರ್ಯಕರ್ತೆ ಯರು ಸ್ಮಾರ್ಟ್‌ಫೋನ್‌ ಮೂಲಕ ದಾಖಲಿಸುವ ಪ್ರತಿ ವಿವರವು ಇಲಾಖೆಯ ಕೇಂದ್ರ ಕಚೇರಿಯ ಸರ್ವರ್‌ನಲ್ಲಿ ಅಡಕವಾಗುತ್ತವೆ. ಈ ದತ್ತಾಂಶವನ್ನು ರಾಜ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಕುಳಿತಲ್ಲೇ ಪರಾಮರ್ಶಿಸಬಹುದು.

1,239 ಸ್ಮಾರ್ಟ್‌ ಫೋನ್‌
ಉಡುಪಿ ಜಿಲ್ಲೆಯಲ್ಲಿ 1,191 ಕಾರ್ಯಕರ್ತೆಯರು, 48 ಮಂದಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 1,239 ಮಂದಿಗೆ ಸ್ಮಾರ್ಟ್‌ಫೋನ್‌ ಸಿಗಲಿದೆ. ಇಂಟರ್‌ನೆಟ್‌ ಸೇವಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,108 ಕಾರ್ಯಕರ್ತೆಯರು, 83 ಮಂದಿ ಮೇಲ್ವಿಚಾರಕರಿಗೆ ಸ್ಮಾರ್ಟ್‌ಫೋನ್‌ ಸಿಗಲಿದೆ.

ವಿತರಣೆಗೆ ಹಿನ್ನಡೆ
ಸ್ಮಾರ್ಟ್‌ಫೋನ್‌ ಬಂದು 15 ದಿನಗಳು ಕಳೆದಿವೆ. ಈ ಯೋಜನೆಯಡಿ ಸರಕಾರ ಉಚಿತವಾಗಿ ವಿತರಿಸುವ ಸಿಮ್‌ಕಾರ್ಡ್‌ ಇಲಾಖೆಯ ಕೈಸೇರದ ಕಾರಣದಿಂದ ಸ್ಮಾರ್ಟ್‌ಫೋನ್‌ ವಿತರಣೆಯ ಕೆಲಸ ಆರಂಭವಾಗಿಲ್ಲ.

ನೆಟ್‌ವರ್ಕ್‌ ಸಮಸ್ಯೆ ಇರದು!
ಈಗಾಗಲೇ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೆಟ್‌ವರ್ಕ್‌ಗಳ ಸರ್ವೇ ನಡೆಸಿ, ಯಾವ ನೆಟ್‌ವರ್ಕ್‌ ಅಗತ್ಯವಿದೆ ಎನ್ನುವ ಮಾಹಿತಿ ಸಂಗ್ರಹಿಸಿ ನಿರ್ದಿಷ್ಟ ನೆಟ್‌ವರ್ಕ್‌ ಸಿಮ್‌ ನೀಡಲು ನಿರ್ಧರಿಸಲಾಗಿದೆ. ಇದರಿಂದ ನೆಟ್‌ವರ್ಕ್‌ ಸಮಸ್ಯೆ ಇರದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2,382 ನೌಕರರು
ಉಡುಪಿ ತಾಲೂಕಿನಲ್ಲಿ 274, ಕುಂದಾಪುರ ತಾಲೂಕಿನಲ್ಲಿ 412, ಬ್ರಹ್ಮಾವರ ತಾಲೂಕಿನಲ್ಲಿ 275, ಕಾರ್ಕಳ ತಾಲೂಕಿನಲ್ಲಿ 230 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,191 ಅಂಗನವಾಡಿ ಕೇಂದ್ರಗಳಿವೆ. ಕಾರ್ಯಕರ್ತೆಯರು ಹಾಗೂ ಸಹಾಯಕ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 2,382 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ.

ಕ್ರಮ ಅಗತ್ಯ
ಅಂಗನವಾಡಿ ಮತ್ತು ಮೇಲ್ವಿಚಾರಕರಿಗೆ ಸ್ಮಾರ್ಟ್‌ಫೋನ್‌ ಮಂಜೂರಾದರೂ ಸಿಮ್‌ಕಾರ್ಡ್‌ ವಿತರಣೆಯಲ್ಲಾದ ವಿಳಂಬದಿಂದ ತುಸು ಹಿನ್ನಡೆಯಾಗಿದೆ.

ಸಿಮ್‌ಕಾರ್ಡ್‌ ದೊರೆತ ತತ್‌ಕ್ಷಣ ವಿತರಣೆ
ಪೋಷಣ್‌ ಅಭಿಯಾನದಡಿ 3ನೇ ಹಂತದಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಸ್ಮಾರ್ಟ್‌ಫೋನ್‌ಗಳು ಬಂದಿವೆ. ಸಿಮ್‌ ಕಾರ್ಡ್‌ ದೊರೆತ ತತ್‌ಕ್ಷಣ ವಿತರಣೆ ಕೆಲಸ ಆರಂಭವಾಗಲಿದೆ.
– ಆರ್‌. ಸೇಸಪ್ಪ , ಉಪನಿರ್ದೇಶಕರು, ಮಹಿಳಾ ಮತ್ತು  ಮಕ್ಕಳ ಇಲಾಖೆ, ಉಡುಪಿ

ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸ್ನೇಹಾ ಆ್ಯಪ್‌ ಬಳಕೆಗೆ ಪ್ರತ್ಯೇಕ ಯೂಸರ್‌ ನೇಮ್‌ ಮತ್ತು ಪಾಸ್‌ವರ್ಡ್‌ ನೀಡಲಾಗುತ್ತದೆ. ಮುಂದಿನ ಕೆಲವೇ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರು ಸ್ಮಾರ್ಟ್‌ ಫೋನ್‌ ಮೂಲಕವೇ ಮಕ್ಕಳ ಆಧಾರ್‌ ಸಂಖ್ಯೆ ಜೋಡಣೆ ಹಾಗೂ ಅಂಗನವಾಡಿಗಳನ್ನು ಜಿಪಿಎಸ್‌ ಜಾಲಕ್ಕೆ ಸಂಪರ್ಕಿಸುವ ಕಾರ್ಯ ಆರಂಭವಾಗಲಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ತಲುಪಿದ್ದು, ಕಾರ್ಯ ಚಟುವಟಿಕೆ ಆರಂಭವಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.