ಎರಡನೇ ಪತ್ನಿ ಜೊತೆ ಸೇರಿ ಹೆತ್ತ ಮಗಳನ್ನೇ ಕೊಲೆ ಮಾಡಿದ ಅಪ್ಪ!


Team Udayavani, Aug 26, 2020, 12:43 AM IST

ಎರಡನೇ ಪತ್ನಿ ಜೊತೆ ಸೇರಿ ಹೆತ್ತ ಮಗಳನ್ನೇ ಕೊಲೆ ಮಾಡಿದ ಅಪ್ಪ!

ಗುಂಡ್ಲುಪೇಟೆ (ಚಾಮರಾಜನಗರ): ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ತನ್ನ ಮೊದಲ ಪತ್ನಿಯಲ್ಲಿ ತನಗೆ ಜನಿಸಿದ ಸ್ವಂತ ಮಗಳನ್ನೇ ಕೊಲೆ ಮಾಡಿರುವ ಅಮಾನುಷ ಘಟನೆ ವರದಿಯಾಗಿದೆ.

ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ. ಈ ಘಟನೆ ತಾಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ.

ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ ಪುತ್ರಿ ಮಹಾಲಕ್ಷ್ಮಿ(5) ಕೊಲೆಯಾದ ದುರ್ದೈವ ಬಾಲಕಿ.

ಘಟನೆಯ ವಿವರ: ಸೋಮಹಳ್ಳಿ ಗ್ರಾಮದ ಮಹೇಶ ತನ್ನ ಮೊದಲನೇ ಹೆಂಡತಿ ಗೌರಮ್ಮಳಿಗೂ ಎದುರು ಮನೆಯ ಮಹದೇವಸ್ವಾಮಿ ಎಂಬಾತನಿಗೂ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿ ಕಳೆದ ಆರು ವರ್ಷಗಳ ಹಿಂದೆಯೇ ಊರಿನ ಮುಖಂಡರ ಸಮ್ಮುಖದಲ್ಲಿ ನ್ಯಾಯಪಂಚಾಯಿತಿ ನಡೆಸಿ ಆಕೆಯಿಂದ ದೂರವಾಗಿದ್ದ.

ನಂತರ ಮಹೇಶ ರತ್ನಮ್ಮ ಎಂಬಾಕೆಯನ್ನು ಮದುವೆಯಾಗಿದ್ದರೂ ಇವರಿಗೆ ಮಕ್ಕಳಾಗಿರಳಿಲ್ಲ.   ಈ ನಡುವೆ ಈ ದಂಪತಿ ಸೋಮವಾರ ಗೌರಮ್ಮಳ ಪುಟ್ಟ ಮಗಳು ಮಹಾಲಕ್ಷಿಯನ್ನು ಅಪಹರಿಸಿ ತಮ್ಮ ಮನೆಗೆ ಕರೆದೊಯ್ದು  ಹಿತ್ತಿಲಿನಲ್ಲಿದ್ದ ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಸಾಯಿಸಿದ್ದಾರೆ. ಆ ಬಳಿಕ ಬಾಲಕಿಯ ಮೃತ ದೇಹವನ್ನು ಪ್ಲಾಸ್ಟಿಕ್ ಚೀಲಕ್ಕೆ ತುಂಬಿ ದೇವರ ಮನೆಯಲ್ಲಿ ಬಚ್ಚಿಟ್ಟಿದ್ದಾರೆ.


ಇತ್ತ, ಎಷ್ಟೇ ಹುಡುಕಾಟ ನಡೆಸಿದರೂ ಮಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ ಗೌರಮ್ಮ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದರು. ಕೂಡಲೇ ಗ್ರಾಮಕ್ಕೆ ತೆರಳಿದ ಪಿಎಸ್‌ಐ ರಾಧಾ ಬರುತ್ತಿದ್ದಂತೆ ರತ್ನಮ್ಮ ಓಡಿಹೋಗಿ ಮನೆಯ ಬಾಗಿಲು ಮುಚ್ಚಿಕೊಂಡಳು.

ಇದರಿಂದ ಅನುಮಾನಗೊಂಡ ಪೊಲೀಸರು ಮನೆಯಲ್ಲಿ ಹುಡುಕಾಟ ನಡೆಸಿದಾಗ ದೇವರ ಮನೆಯಲ್ಲಿ ಅನುಮಾನಾಸ್ಪದವಾಗಿಟ್ಟಿದ್ದ ಚೀಲವನ್ನು ಬಿಚ್ಚಿದಾಗ ಅದರಲ್ಲಿ ಮಹಾಲಕ್ಷ್ಮಿಯ ಮೃತದೇಹ ಪತ್ತೆಯಾಗಿದೆ.

ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಮಗುವಿನ ಮೃತ ದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪಾಲಕರ ವಶಕ್ಕೆ ನೀಡಿದ್ದಾರೆ.

ಸ್ಥಳಕ್ಕೆ ಎಎಸ್‌ಪಿ ಅನಿತಾ, ಡಿವೈಎಸ್‌ಪಿ ಮೋಹನ್, ಸರ್ಕಲ್ ಇನ್‌ಸ್ ಪೆಕ್ಟರ್ ಮಹದೇವಸ್ವಾಮಿ ತೆರಳಿ ಪರಿಶೀಲಿಸಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.