ಆನ್‌ಲೈನ್‌ ಕಂಪೆನಿಗಳಿಂದ ಸಮಸ್ಯೆ: ಮೊಬೈಲ್‌ ವ್ಯಾಪಾರಿಗಳ ಆತಂಕ


Team Udayavani, Aug 26, 2020, 12:43 AM IST

ಆನ್‌ಲೈನ್‌ ಕಂಪೆನಿಗಳಿಂದ ಸಮಸ್ಯೆ: ಮೊಬೈಲ್‌ ವ್ಯಾಪಾರಿಗಳ ಆತಂಕ

ಉಡುಪಿ: ಇತ್ತೀಚೆಗೆ ತಲೆಎತ್ತಿರುವ ಆನ್‌ಲೈನ್‌ ಕಂಪೆನಿಗಳಿಂದಾಗಿ ಹಲವಾರು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಎಲ್ಲ ಚೈನೀಸ್‌ ಮೊಬೈಲ್‌ ಕಂಪೆನಿಗಳು ಸಾಥ್‌ ನೀಡುತ್ತಿವೆ. ಇದು ಹೀಗೆಯೇ ಮುಂದುವರಿದರೆ ವ್ಯಾಪಾರ ಅವನತಿಯತ್ತ ಸಾಗುವುದರಲ್ಲಿ ಸಂಶಯವಿಲ್ಲ ಎಂದು ದ.ಕ., ಉಡುಪಿ ಮೊಬೈಲ್‌ ರಿಟೈಲರ್ ಅಸೋಸಿಯೇಶನ್‌ ಕಾರ್ಯದರ್ಶಿ ಮುನೀರ್‌ ಹೇಳಿದರು.

ಕರಾವಳಿ ಬೈಪಾಸ್‌ ಬಳಿಯ ಮಣಿಪಾಲ ಇನ್‌ಹೊಟೇಲ್‌ನಲ್ಲಿ ಮಂಗಳವಾರ ನಡೆದ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೊಬೈಲ್‌ ರಿಟೈಲರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. ಆನ್‌ಲೈನ್‌ ಮೊಬೈಲ್‌ ಕಂಪೆನಿಗಳು ಮತ್ತು ಮೊಬೈಲ್‌ ಕಂಪೆನಿಗಳಿಂದ ನ್ಯಾಯ ಸಿಗಬೇಕಾದರೆ ಪ್ರತಿಯೊಬ್ಬ ಮೊಬೈಲ್‌ ವ್ಯಾಪಾರಸ್ಥರು ಎಐಎಂಆರ್‌ಎ ಯೊಂದಿಗೆ ಕೈಜೋಡಿಸಬೇಕು. ಟ್ವಿಟರ್‌ ಮೂಲಕ ನಿರಂತರ ಟ್ವೀಟ್‌ ಮಾಡಬೇಕು. ಈ ಮೂಲಕ ಸರಕಾರಕ್ಕೆ ನಮ್ಮ ಕೂಗು ಕೇಳಿಸಿಕೊಳ್ಳಬೇಕು ಎಂದರು. ಆನ್‌ಲೈನ್‌ ಹಿಂದೆ ಹೋದರೆ ಅಂಗಡಿ ಸಿಬಂದಿ, ಡಿಸ್ಟ್ರಿಬ್ಯೂಟರ್‌ಗಳು, ಎಎಸ್‌ಎಂ, ಆರ್‌ಎಸ್‌ಎಂಗಳು ಬೀದಿಗೆ ಬರಲಿದ್ದಾರೆ. ಈ ಬಗ್ಗೆ ಸರಕಾರ ಕೂಡ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಅನ್ಯಾಯವಾಗದಿರಲಿ
ಎಐಎಂಆರ್‌ಎ ಉಡುಪಿಯ ಕಾರ್ಯದರ್ಶಿ ವಿವೇಕ ಜಿ. ಸುವರ್ಣ (ವಿಕ್ಕಿ) ಮಾತನಾಡಿ, ಆನ್‌ಲೈನ್‌ ಕಂಪೆನಿಗಳು ಮತ್ತು ಮೊಬೈಲ್‌ ಕಂಪೆನಿಗಳಿಂದ ನ್ಯಾಯ ಸಿಗಬೇಕಾದರೆ ಪ್ರತಿಯೊಬ್ಬ ಮೊಬೈಲ್‌ ವ್ಯಾಪಾರಸ್ಥರು ಆಲ್‌ ಇಂಡಿಯಾ ಮೊಬೈಲ್‌ ರಿಟೈಲರ್ಸ್‌ ಅಸೋಸಿಯೇಶನ್‌(ಎಐಎಂಆರ್‌ಎ)ನೊಂದಿಗೆ ಕೈಜೋಡಿಸಬೇಕು. ಮೊಬೈಲ್‌ ಉದ್ಯೋಗದಲ್ಲಿ ಯುವಜನರೇ ಅಧಿಕವಾಗಿದ್ದು, ಸರಕಾರದ ಯಾವುದೇ ಸೌಲಭ್ಯ ಪಡೆಯದೆ ಸೊದ್ಯೋಗದಲ್ಲಿ ತೊಡಗಿರುವುದಲ್ಲದೆ ಅನೇಕ ಮಂದಿಗೆ ಉದ್ಯೋಗ ಕೊಟ್ಟು ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ಸ್ಥಳೀಯ ವ್ಯಾಪಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಕೂಡಲೇ ಪರಿಹರಿಸಬೇಕು ಎಂದರು.

ದ.ಕ., ಉಡುಪಿ ಮೊಬೈಲ್‌ ರಿಟೈಲರ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಅಬ್ದುಲ್‌ ಸಲೀಂ, ಉಪಾಧ್ಯಕ್ಷ ಅಝರ್‌, ಎಐಎಂಆರ್‌ಎ ಉಡುಪಿ ಅಧ್ಯಕ್ಷ ಸುಹಾಸ್‌ ಕಿಣಿ ಉಪಸ್ಥಿತರಿದ್ದರು. ವಿವೇಕ ಜಿ. ಸುವರ್ಣ(ವಿಕ್ಕಿ) ಸ್ವಾಗತಿಸಿ, ನಿರ್ವಹಿಸಿದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.