ಮುಂದಿನ ಪೀಳಿಗೆಗೆ ಪ್ರಕೃತಿ ಉಳಿಸುವುದು ಜವಾಬ್ದಾರಿ


Team Udayavani, Aug 26, 2020, 1:40 PM IST

Mandya-tdy-1

ಮಂಡ್ಯ: ಮುಂದಿನ ಪೀಳಿಗೆ ಭವಿಷ್ಯದ ದೃಷ್ಟಿ ಯಿಂದ ಪ್ರಕೃತಿ ಉಳಿಸಿ ಬೆಳೆಸಬೇಕೇ ವಿನಃ ವ್ಯವಹಾರಿಕ ಕಾರಣಕ್ಕಾಗಿ ಪ್ರಾಕೃತಿಕ ನಾಶಕ್ಕೆ ಮುಂ ದಾಗಬಾರದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎನ್‌.ಶಿವಣ್ಣತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಾಮಾಜಿಕ ಅರಣ್ಯ ವಿಭಾಗ, ಹನಕೆರೆ ಎಂ. ಶ್ರೀನಿವಾಸ ಪ್ರತಿಷ್ಠಾನ, ಚಂದಗಾಲು ಗ್ರಾಮ ಪಂಚಾಯಿತಿ, ಅನನ್ಯ  ಸಾಮಾಜಿಕ ಸಾಂಸ್ಕೃತಿಕ ಕಲ್ಯಾಣ ಟ್ರಸ್ಟ್‌ ವತಿಯಿಂದ ತಾಲೂಕಿನ ದೊಡ್ಡಕೊತ್ತಗೆರೆ ಗ್ರಾಮದಲ್ಲಿ ನಡೆದ ವನಸಿರಿ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು. ಇಂದು ನಾವು ಪ್ರಕೃತಿಯನ್ನು ಎಷ್ಟು ನಾಶ ಮಾಡಿದ್ದೇವೆ ಎಂಬುದನ್ನು ಅರಿತುಕೊಳ್ಳ ಬೇಕು. ಮುಂದಿನ ಪೀಳಿಗೆಗೆ ಅರಣ್ಯವೇ ಇಲ್ಲದಂಥ ವಾತಾವರಣ ಸೃಷ್ಟಿಯಾಗಲಿದೆ ಎಂದು ಎಚ್ಚರಿಸಿದರು.

ಮಕ್ಕಳಿಗೆ ಪ್ರಕೃತಿ ಅರಿವು ಅಗತ್ಯ: ಮಕ್ಕಳಿಗೆ ಪ್ರಕೃತಿ ಬಗ್ಗೆ ತಿಳಿಸಿಕೊಡುವ ಅಗತ್ಯತೆ ಇದೆ. ಪ್ರತಿಯೊಂದು ಮಗುವಿಗೂ ಒಂದೊಂದು ಗಿಡನೆಟ್ಟು ಬೆಳೆಸಲು  ಪ್ರೇರೇಪಿ ಸಬೇಕು. ಮರ ಬೆಳೆಸುವ ಮಗುವಿಗೆ ಪ್ರಕೃತಿ ಆರಾಧಿಸುವುದನ್ನು ಕಲಿಯುತ್ತಾ ಹೋಗುತ್ತದೆ. ಆಗ ಪ್ರಕೃತಿ ನಾಶಕ್ಕೆ ಮುಂದಾಗುವುದಿಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತೀ ಗ್ರಾಮಗಳಲ್ಲೂ ಹಸಿರೀಕರಣ ಮಾಡಬೇಕು. ಆಗ ಎಲ್ಲರೂ ಊರಿನ ಬಗ್ಗೆ ಹೆಮ್ಮೆ ಪಡುವ ವಾತಾವರಣ ಇರುತ್ತದೆ ಎಂದು ಹೇಳಿದರು. ಪ್ರಕೃತಿ ವಿಕೋಪ: ಉಪ ಅರಣ್ಯ ಸಂರಕ್ಷ ಣಾಧಿಕಾರಿ ಟಿ.ವೆಂಕಟೇಶ್‌ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿನಡೆಯುತ್ತಿರುವ ಪ್ರಕೃತಿ ನಾಶದಿಂದಾಗಿ ಇಂದು ದೇವರ  ನಾಡು, ಸ್ವರ್ಗದ ಬೀಡು ಎಂದು ಕರೆಸಿಕೊಳ್ಳುತ್ತಿದ್ದ ಕೇರಳ ಮತ್ತು ಕೊಡಗಿನ ಪರಿಸ್ಥಿತಿ ಏನಾಗಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕಿದೆ ಎಂದು ತಿಳಿಸಿದರು.

ಕೇರಳ ಮತ್ತು ಕೊಡಗಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮರಗಳ ಹನನದಿಂದಾಗಿ ಪ್ರಕೃತಿ ವಿಕೋಪಗಳು ಎದುರಾಗುತ್ತಿವೆ. ಮಾನವ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಹಾಳು ಮಾಡುತ್ತಿರುವುದು ಇಂಥ ಘಟನೆಗಳಿಗೆ ಸಾಕ್ಷಿಯಾಗಿವೆ ಎಂದು ಹೇಳಿದರು. ಪ್ರಕೃತಿ ಎಲ್ಲಿ ಚೆನ್ನಾಗಿರುತ್ತೋ ಅಲ್ಲಿ ಎಲ್ಲವೂಉತ್ತಮವಾಗಿರುತ್ತದೆ. ಆರೋಗ್ಯ ಕರ ವಾತಾವರಣ ಇರುತ್ತೆ. ಹಿಂದೆಲ್ಲ ಪೂರ್ವಿಕರು ತಮ್ಮ ಜಮೀನುಗಳಲ್ಲಿ ಬದುವಿನ ಮೇಲೆ ಮರ ಗಿಡಗಳನ್ನು ನೆಟ್ಟು ಬೆಳೆಸುವ ಪರಿಪಾಠ ಬೆಳೆಸಿಕೊಂಡಿದ್ದರು. ಆದರೆ, ಈಗ ಬದುಗಳಲ್ಲಿ ಇರುವ ಮರಗಳನ್ನೂ ಸಹ ಕಡಿದು ಹಾಕುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಹನಕೆರೆ ಎಂ.ಶ್ರೀನಿವಾಸ್‌ ಪ್ರತಿಷ್ಠಾನದ ಅಧ್ಯಕ್ಷ ಕೀಲಾರ ಎಂ.ಶಿವರಾಜು, ಕಿರುತೆರೆ ಕಲಾವಿದ ವಿಶಾಲ್‌ ರಘು, ಮುಖಂಡ ರಾದ ರಾಮಚಂದ್ರ, ನಾಗಪ್ಪ, ಡಿ.ಪಿ. ಸ್ವಾಮಿ, ಆಡಳಿತಾಧಿಕಾರಿ ಸಿದ್ದರಾಜು, ಮುಖ್ಯ ಶಿಕ್ಷಕ ಪ್ರಸನ್ನಕುಮಾರ್‌, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್‌, ಪಿಡಿಒ ನವೀನ್‌ಕುಮಾರ್‌, ಅನನ್ಯ ಸಂಸ್ಥೆ ಅಧ್ಯಕ್ಷೆ ಅನುಪಮ, ತಾಳಶಾಸನ ಮೋಹನ್‌ ಇತರರಿದ್ದರು.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.