ಜನರ ಸಮಸ್ಯೆಗಳಿಗೆ ಅಧಿಕಾರಿಗಳೇ ಸ್ಪಂದಿಸಿ


Team Udayavani, Aug 26, 2020, 3:02 PM IST

ಜನರ ಸಮಸ್ಯೆಗಳಿಗೆ ಅಧಿಕಾರಿಗಳೇ ಸ್ಪಂದಿಸಿ

ತುಮಕೂರು: ಪಾಲಿಕೆಯಲ್ಲಿ ಸಾಮಾನ್ಯ ಸಭೆ ನಡೆಸುವುದು ಪಾಲಿಕೆ ಸದಸ್ಯರು ಪಾಲಿಕೆಗೆ ತರುವ ಜನರ ಎಲ್ಲಾ ಸಮಸ್ಯೆಗಳಿಗೆ ಆದ್ಯತೆ ಮೇಲೆ ಸ್ಪಂದಿಸಿ ಬಗೆಹರಿಸಬೇಕೆಂದು ಜನ ಸಾಮಾನ್ಯರ ಸಮಸ್ಯೆಗಳು ಬಗೆಹರಿಯುವುದು ತಡ ಆಗಬಾರದು ಎಂದು ಅಧಿಕಾರಿಗಳಿಗೆ ಪಾಲಿಕೆ ಮೇಯರ್‌ ಫ‌ರೀದಾ ಬೇಗಂ ಖಡಕ್‌ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಪಾಲಿಕೆ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಸಾಮಾನ್ಯ ಸಭೆಗಳಲ್ಲಿ ಬಡ ಜನರಿಗೆ ಅನುಕೂಲವಾಗುವಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಂಡು ಕಾರ್ಯಗತಗೊಳಿಸಿದಾಗ ಮಾತ್ರ ಈ ಸಭೆಗಳಿಗೆ ಅರ್ಥ ಬರುತ್ತದೆ ಎಂದರು.

ಕ್ರಮಕ್ಕೆ ಒತ್ತಾಯ: ಸದಸ್ಯರು ತಮ್ಮ ವಾರ್ಡ್‌ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಸಭೆ ಆರಂಭದಲ್ಲಿ ಈ ಹಿಂದಿನ ಸಭಾ ನಡವಳಿಕೆ ಓದಿ ದಾಖಲಿಸುವಾಗ ವಾರ್ಡ್‌ ಸಮಿತಿಗಳ ರಚನೆ ಬಗ್ಗೆ ಸಭೆಯ ತೀರ್ಮಾನಕ್ಕೆ ವಿರುದ್ಧವಾಗಿ ದಾಖಲು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, 2019ರ ನ.9ರಂದು ನಡೆದ ಸಭೆಯಲ್ಲಿ ನಾವು ವಾರ್ಡ್‌ ಸಮಿತಿ ಮಾಡಲು ಅನುಮತಿ ನೀಡಿದ್ದೇವೆ ಆದರೆ ಇಲ್ಲಿ ಸದಸ್ಯರು ವಾರ್ಡ್‌ ಸಮಿತಿಗೆ ವಿರೋಧ ಮಾಡಿದರು ಎಂದು ದಾಖಲು ಮಾಡಿದ್ದೀರಿ ಇದು ತಪ್ಪು ಯಾರು ಈ ರೀತಿ ದಾಖಲು ಮಾಡಿದ್ದಾರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆಯುಕ್ತೆ ರೇಣುಕಾ ಮಾತನಾಡಿ, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದಕ್ಕೆ ಮೇಯರ್‌ ಫ‌ರೀದಾ ಬೇಗಂ ಪ್ರತಿಕ್ರಿಯೆ ನೀಡಿ ಈ ರೀತಿ ಸಭೆಯ ನಿರ್ಣಯ ತಿರುಚುವವರನ್ನು ಅಮಾನತು ಮಾಡಿ ಎಂದು ಸೂಚಿಸಿದರು.

ಉದ್ದಿಮೆ ಪರವಾನಿಗೆ ದರ ಹೆಚ್ಚಳ: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿ ಯಲ್ಲಿರುವ ಉದ್ದಿಮೆದಾರರ ಉದ್ದಿಮೆ ಪರವಾನಗಿ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲು ಪಾಲಿಕೆ ಸದಸ್ಯರು ಸಹಮತ ನೀಡಿದರು. ಕೋವಿಡ್‌-19ನಿಂದಾಗಿ ಪಾಲಿಕೆ ವತಿಯಿಂದ ಉದ್ದಿಮೆ ದರಗಳನ್ನು ಶೇ.5ರಷ್ಟು ಹೆಚ್ಚಳ ಮಾಡುವಂತೆ ಆಗ್ರಹಿಸಿದರಲ್ಲದೇ ದಂಡ ಶುಲ್ಕ ಶೇ.30ರಷ್ಟು ಸಿಮೀತಗೊಳಿಸುವಂತೆ ಸದಸ್ಯರೆಲ್ಲರೂ ಒಮ್ಮತ ಸೂಚಿಸಿದರು.

ಶೇ.50 ರಿಯಾಯಿತಿ: ಪಾಲಿಕೆ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ ಸಮಾಜ ಹಾಗೂ ಸವಿತಾ ಸಮಾಜ ಕಸುಬುಗಳಾದ ಕಟಿಂಗ್‌ ಶಾಪ್‌(ಹೇರ್‌ ಡ್ರೆಸೆಸ್‌) ಹಾಗೂ ಐರನ್‌ ಅಂಗಡಿಗಳಿಗೆ (ಲಾಂಡ್ರಿ ಡ್ರೆçಕ್ಲಿಂಗ್‌ ಶಾಫ್) ಪಾಲಿಕೆ ನೀಡುವ ಪರವಾನಗಿ ದರವನ್ನು ಶೇ.50 ರಿಯಾಯಿತಿ ದರದಲ್ಲಿ ಅನ್ವಯವಾಗುವಂತೆ ಉದ್ದಿಮೆ ರಹದಾರಿಯನ್ನು ನೀಡಲು ಸಭೆ ತೀರ್ಮಾನಿಸಿತು. ಅಲ್ಲದೇ ಕಡಿಮೆ ಆದಾಯ ಹೊಂದಿರುವ ಇತರೆ ಸಮುದಾಯದವರಿಗೂ ಕೂಡ ಈ ದರ ಅನ್ವಯವಾಗುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಆಯುಕ್ತರಿಗೆ ಸದಸ್ಯರೆಲ್ಲರೂ ಆಗ್ರಹಿಸಿದರು.

ಪಾಲಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಅವರ ಪುತ್ಥಳಿಯನ್ನು ಸ್ಥಾಪಿಸುವಂತೆ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಯಾವುದೇ ಪುತ್ಥಳಿಯನ್ನು ಸ್ಥಾಪಿಸುವ ಮುನ್ನಾ ಸರ್ಕಾರದ ಅನುಮತಿ ಪಡೆಯ ಬೇಕು. ಅದಕ್ಕಾಗಿ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.