ಮಕ್ಕಳಿಗೆ ಆರೋಗ್ಯ ಕಾರ್ಡ್‌; ಈ ವರ್ಷವೇ ಲಭ್ಯ ರಾಜೀವ್‌ ಗಾಂಧಿ ವಿ.ವಿ.ಯೋಜನೆ


Team Udayavani, Aug 27, 2020, 6:12 AM IST

ಮಕ್ಕಳಿಗೆ ಆರೋಗ್ಯ ಕಾರ್ಡ್‌; ಈ ವರ್ಷವೇ ಲಭ್ಯ ರಾಜೀವ್‌ ಗಾಂಧಿ ವಿ.ವಿ.ಯೋಜನೆ

ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಪತ್ರ ಸಾಮಾನ್ಯ. ಇನ್ನು ಅದರ ಜತೆ ಆರೋಗ್ಯದ ಮಾಹಿತಿಯನ್ನು ಒಳಗೊಂಡಿರುವ “ಆರೋಗ್ಯ ಕಾರ್ಡ್‌’ ಕೂಡ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರೋಗ್ಯ ಕಾರ್ಡ್‌ ದೊರೆಯಲಿದೆ.

ಕೊರೊನಾದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅತಿಯಾದ ಗಮನ ಅಗತ್ಯವಾಗಿರುವುದರಿಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಸರಕಾರಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸ್ವಾಸ್ಥ್ಯ ನಿಗಾವಣೆಗೆ ಯೋಜನೆ ಸಿದ್ಧಪಡಿಸಿದೆ. ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮಾಹಿತಿಯನ್ನು ವಿ.ವಿ.ಯು ತನ್ನ ಅಂತಿಮ ವರ್ಷದ ವಿದ್ಯಾರ್ಥಿಗಳ ಸಹಯೋಗದಲ್ಲಿ ನೀಡಲಿದೆ.

ವೈದ್ಯ ವಿದ್ಯಾರ್ಥಿಗಳ ತಂಡ ಶಾಲೆಗೆ ಭೇಟಿ ನೀಡಿ, ಮಕ್ಕಳ ಪೂರ್ಣ ತಪಾಸಣೆ ನಡೆಸಲಿದೆ. ಮುಖ್ಯವಾಗಿ ಉಸಿರಾಟದ ಸಮಸ್ಯೆ, ಕಣ್ಣುಗಳ ಸಮಸ್ಯೆ, ತೂಕದಲ್ಲಿ ಏರಿಳಿತ, ದೇಹದ ಎತ್ತರ, ದಿಢೀರ್‌ ಅಸ್ವಾಸ್ಥ್ಯಕ್ಕೆ ಕಾರಣ ಹೀಗೆ ಆರೋಗ್ಯದ ಪ್ರಾಥಮಿಕ ಅಂಶಗಳನ್ನು ಕಾರ್ಡ್‌ ನಲ್ಲಿ ದಾಖಲಿಸಲಾಗುತ್ತದೆ. ಪ್ರತಿ ಮೂರು ಯಾ ಆರು ತಿಂಗಳಿಗೊಮ್ಮೆ ಅಪ್‌ಡೇಟ್‌ ಮಾಡಲಾಗುತ್ತದೆ. ಒಂದನೇ ತರಗತಿಯಲ್ಲಿ ನೀಡಿದ ಆರೋಗ್ಯ ಕಾರ್ಡ್‌ ವಿದ್ಯಾರ್ಥಿಯು ಪ್ರೌಢಶಾಲೆ ಮುಗಿಸುವವರೆಗೂ ಮುಂದುವರಿಯುತ್ತದೆ. ಶೈಕ್ಷಣಿಕ ಪ್ರಗತಿಯ ಮಾದರಿಯಲ್ಲಿ ಆರೋಗ್ಯದ ಪ್ರಗತಿ ಪರಿಶೀಲನೆ ಇದಾಗಿದೆ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.ಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಆರೋಗ್ಯ ತಪಾಸಣೆ ಹೇಗೆ?
ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿ.ವಿ.ಯು ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್‌ ಕಾರ್ಯಕ್ರಮದಲ್ಲಿ ಕಮ್ಯೂನಿಟಿ ಮೆಡಿಸಿನ್‌ ಭಾಗವಾಗಿ ನಡೆಸಲಿದೆ. ಇದೊಂದು ನಿರಂತರ ಪ್ರಕ್ರಿಯೆ ಆಗಿರುತ್ತದೆ ಎಂದು ವಿ.ವಿ. ಉಪ ಕುಲಸಚಿವ ಡಾ| ವಸಂತ ಶೆಟ್ಟಿ ಹೇಳಿದ್ದಾರೆ.

ಹಲವು ವರ್ಷಗಳ ಬಳಿಕ
ಕೆಲವು ವರ್ಷಗಳ ಹಿಂದೆ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ನಡೆಯುತ್ತಿತ್ತು. ಕೊರೊನಾ ಆತಂಕ ಹೆಚ್ಚಾಗುವ ಜತೆಗೆ ಆರೋಗ್ಯದ ಕಾಳಜಿಯೂ ಹೆಚ್ಚುತ್ತಿರುವುದರಿಂದ ಶಾಲಾ ಮಕ್ಕಳ ನಿರಂತರ ಆರೋಗ್ಯ ತಪಾಸಣೆಗೆ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿವೆ ಎಂದು ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಉನ್ನತ ಚಿಕಿತ್ಸೆಗೂ ಶಿಫಾರಸು
ತಪಾಸಣೆ ಸಂದರ್ಭ ಯಾವುದೇ ವಿದ್ಯಾರ್ಥಿಯ ಆರೋಗ್ಯ ಏರುಪೇರಾಗಿರುವುದು ಕಂಡುಬಂದರೆ ಅಲ್ಲಿಯೇ ಚಿಕಿತ್ಸೆಯನ್ನೂ ನೀಡುತ್ತಾರೆ. ಉನ್ನತ ಚಿಕಿತ್ಸೆಯ ಅಗತ್ಯ ಕಂಡುಬಂದಲ್ಲಿ ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡುತ್ತಾರೆ. ತಪಾಸಣೆ ವೇಳೆ ನೀಡುವ ಮಾಹಿತಿ ಪತ್ರದ ಆಧಾರದಲ್ಲಿ ಮಕ್ಕಳು ಪಾಲಕರೊಂದಿಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿ ಉನ್ನತ ಮಟ್ಟದ ಚಿಕಿತ್ಸೆ ಪಡೆಯಬಹುದು. ಅಲ್ಲದೆ ಯಾವ ಕಾಲೇಜು ಮತ್ತು ಆಸ್ಪತ್ರೆಯಿಂದ ತಪಾಸಣೆಗೆ ಬಂದಿರುತ್ತಾರೋ ಅಲ್ಲಿಯೂ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ ಎಂದು ಡಾ| ವಸಂತ ಶೆಟ್ಟಿ ಮಾಹಿತಿ ನೀಡಿದರು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧೀನದ ಕಾಲೇಜುಗಳು ಆಯಾ ಜಿಲ್ಲೆಯಲ್ಲೇ ಈ ಕಾರ್ಯ ಮಾಡಲಿವೆ. ಅಂತಿಮ ವರ್ಷದ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಕಮ್ಯೂನಿಟಿ ಮೆಡಿಸಿನ್‌ ಇಂಟರ್ನ್ಶಿಪ್‌ ಕಾರ್ಯಕ್ರಮವಾಗಿ ನಿರಂತರವಾಗಿ ನಡೆಸಲಿದ್ದಾರೆ.
– ಡಾ| ಎಸ್‌. ಸಚ್ಚಿದಾನಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಕುಲಪತಿ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.