ಕಲಬುರಗಿ: ಮನೆ ಮುಂದೆ ನಿಂತಿದ್ದ ಉದ್ಯಮಿಗೆ ಗುಂಡು ಹಾರಿಸಿ ಕೊಲೆ
Team Udayavani, Aug 27, 2020, 11:16 PM IST
ಕಲಬುರಗಿ: ನಗರದಲ್ಲಿ ಗುರುವಾರ ರಾತ್ರಿ ಗುಂಡಿನ ಮೊರೆತವಾಗಿದೆ.
ಇಲ್ಲಿನ ಜೇವರ್ಗಿ ರಸ್ತೆಯಲ್ಲಿರುವ ಗೋದುತಾಯಿ ಕಾಲೋನಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ಘಟನೆಯಿಂದ ಪರಿಸರದ ಜನತೆ ಭಯಭೀತರಾಗಿದ್ದಾರೆ.
ಸುನೀಲ್ ಸೋಹನಲಾಲ್ ರಾಂಕಾ (41) ಎಂಬವರೇ ಕೊಲೆಯಾದ ಉದ್ಯಮಿ. ಮೂಲತಃ ರಾಜಸ್ಥಾನದವರಾದ ಇವರು ನಗರದ ಜೇವರ್ಗಿ ಕ್ರಾಸ್ ಬಳಿಯಿರುವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಟೈಲ್ಸ್, ಪಿಒಪಿ, ಸಿಮೆಂಟ್ ವ್ಯಾಪಾರ ಮಾಡಿಕೊಂಡಿದ್ದರು.
ಗುರುವಾರ ರಾತ್ರಿ ರಾಂಕಾ ಅವರು ತಮ್ಮ ಮನೆ ಮುಂದೆ ನಿಂತುಕೊಂಡಿದ್ದ ಸಮಯದಲ್ಲಿ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದಾಡುತ್ತಿದ್ದಾಗ ಸ್ಥಳೀಯರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ, ದುಷ್ಕರ್ಮಿಗಳು ಹಾರಿಸಿದ್ದ ಗುಂಡು ನೇರವಾಗಿ ಅವರ ಹೃದಯ ಭಾಗಕ್ಕೇ ಹೊಕ್ಕಿದ್ದರಿಂದ ರಾಂಕಾ ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ವಿಫಲವಾಗಿದೆ.
ಕೊಲೆಯಾದ ಸುನೀಲ್ ರಾಂಕಾ ಅವರು ಹಲವು ವರ್ಷಗಳಿಂದ ಗೋದುತಾಯಿ ನಗರದ ಶಿವ ಮಂದಿರದ ಬಳಿಯಿರುವ ಪಾಟೀಲ್ ಎಂಬವರ ಮನೆಯ ಕೋಣೆಯೊಂದನ್ನು ಬಾಡಿಗೆ ಪಡೆದುಕೊಂಡು ಅಲ್ಲಿ ವಾಸಿಸುತ್ತಿದ್ದರು.
ತುಂಬಾ ಸಂಭಾವಿತರಾಗಿದ್ದ ಸುನೀಲ್ ಹೆಚ್ಚು ಜನರೊಂದಿಗೆ ಬೆರೆಯುತ್ತಿರಲಿಲ್ಲ. ಆದರೆ, ಈ ದುಷ್ಕೃತ್ಯವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ಮತ್ತು ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿದಂಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗುಂಡಿನ ದಾಳಿಯ ವಿಷಯ ತಿಳಿಯುತ್ತಲೇ ಪೊಲೀಸ್ ಆಯುಕ್ತ ಎನ್.ಸತೀಶ ಕುಮಾರ, ಉಪ ಆಯುಕ್ತ ಕಿಶೋರ ಬಾಬು, ಸಹಾಯಕ ಆಯುಕ್ತ ವಿಜಯಕುಮಾರ, ಇನ್ಸ್ಪೆಕ್ಟರ್ ಪಂಡಿತ ಸಗರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ದುಷ್ಕರ್ಮಿಗಳ ಮಾಹಿತಿ ಕಲೆ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಮತ್ತು ದಾಳಿ ನಡೆಸಿ ಪರಾರಿಯಾಗಿರುವವರ ಪತ್ತೆಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ಧಾರೆ. ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?