ಪುಲ್ವಾಮಾ ಘಟನೆ ಚಾರ್ಜ್‌ಶೀಟ್‌: ಪಾಕ್‌ಗೆ ಪಾಠ ಕಲಿಸಿ


Team Udayavani, Aug 28, 2020, 5:55 AM IST

ಪುಲ್ವಾಮಾ ಘಟನೆ ಚಾರ್ಜ್‌ಶೀಟ್‌: ಪಾಕ್‌ಗೆ ಪಾಠ ಕಲಿಸಿ

ಪಾಕ್‌ನ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ಮಸೂದ್‌ ಅಜರ್.

ಕಳೆದ ವರ್ಷ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ಕೃತ್ಯದಲ್ಲಿ ನಮ್ಮ ಅನೇಕ ಸೈನಿಕರು ಜೀವ ಕಳೆದುಕೊಂಡರು.

ಈ ಘಟನೆ ನಡೆದ ಒಂದೂವರೆ ವರ್ಷಗಳ ನಂತರವೀಗ NIA, ಅಂದರೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಚಾರ್ಜ್‌ಶೀಟ್‌ ಸಿದ್ಧಪಡಿಸಿದ್ದು  ಪುಲ್ವಾಮಾ ದಾಳಿಯಲ್ಲಿ ಪಾಕ್‌ನ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ಹಾಗೂ ಮುಖ್ಯವಾಗಿ ಐಎಸ್‌ಐನ ಪಾತ್ರದ ಬಗ್ಗೆ ಸ್ಪಷ್ಟ ವಿವರಗಳನ್ನು ನೀಡಿದೆ.

ಒಂದೆಡೆ ಹೇಗೆ ಐಎಸ್‌ಐ ಆತಂಕವಾದಿಗಳನ್ನು ಭಾರತದೊಳಕ್ಕೆ ನುಸುಳಿಸಲು ಸಹಕರಿಸಿತು ಎನ್ನುವುದರಿಂದ ಹಿಡಿದು, ಜೈಶ್‌ ಮುಖ್ಯಸ್ಥ ಮಸೂದ್‌ ಅಜರ್‌ ತನ್ನ ಸೋದರಳಿಯನನ್ನು ಈ ದುಷ್ಕೃತ್ಯದ ರೂಪುರೇಷೆ ರಚಿಸಲು ಭಾರತಕ್ಕೆ ಕಳುಹಿಸಿದ್ದ ಎನ್ನುವುದನ್ನು ಪುರಾವೆ ಸಮೇತ ಎದುರಿಡುತ್ತಿದೆ NIA.

ಈಗ 19 ಉಗ್ರರು ಆರೋಪಿಗಳಾಗಿದ್ದು, ಇವರಲ್ಲಿ 7 ಮಂದಿ ಬಂಧನದಲ್ಲಿದ್ದಾರೆ, ಉಳಿದ ಆರು ಜನರು ತಲೆಮರೆಸಿಕೊಂಡಿದ್ದರೆ, 6 ಉಗ್ರರು ಈಗಾಗಲೇ ಹತರಾಗಿದ್ದಾರೆ. ಒಟ್ಟಾರೆಯಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಚಾರ್ಜ್‌ಶೀಟ್‌ ಪುಲ್ವಾಮಾ ಘಟನೆಯ ಹಿಂದಿನ ಮಾಸ್ಟರ್‌ ಮೈಂಡ್‌ ಪಾಕಿಸ್ಥಾನವೇ ಎನ್ನುವುದನ್ನು ಸ್ಪಷ್ಟವಾಗಿ ಸಾರುತ್ತಿದೆ.

ಘಟನೆಯ ಹಿಂದೆ ಜೈಶ್‌ನ ಕೈವಾಡವಿದೆ ಎನ್ನುವುದು ಘಟನೆ ನಡೆದ ಕೆಲವೇ ದಿನಗಳಲ್ಲಿ ಪತ್ತೆಯಾಗಿತ್ತು ಎನ್ನುವುದನ್ನು ನೆನಪಿಸಿಕೊಳ್ಳಬೇಕು. ಪಾಕಿಸ್ಥಾನ ಈಗಲೂ ಈ ಆರೋಪಗಳನ್ನೆಲ್ಲ ಅಲ್ಲಗಳೆಯುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ, ಆ ರಾಷ್ಟ್ರದ ವಿರುದ್ಧ ಅಂತಾರಾಷ್ಟ್ರೀಯ ಸ್ತರದಲ್ಲಿ ಮತ್ತಷ್ಟು ಒತ್ತಡ ತರುವುದಕ್ಕೆ, ಅದರ ದುರುದ್ದೇಶಗಳಿಗೆ ಪೆಟ್ಟು ನೀಡುವುದಕ್ಕೆ ಸಾಧ್ಯವಾಗಲಿದೆ.

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಭಾರತವು, ವಿಶ್ವಸಂಸ್ಥೆಯು ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಮಾಡಿತು. ವಿಶ್ವಸಂಸ್ಥೆಯು ಅಜರ್‌ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕ್‌ಗೆ ಎಚ್ಚರಿಸಿದೆ. ಪಾಕ್‌ ಕೂಡ ತಾನು ವಿಶ್ವಸಂಸ್ಥೆಯ ಆದೇಶವನ್ನು ಪಾಲಿಸುವ ನಾಟಕವಾಡುತ್ತಿದೆ. ಆದರೆ, ಈ ಉಗ್ರ ಪಾಕಿಸ್ಥಾನದ  ಆಡಳಿತ, ಸೇನೆಯ ಸಂರಕ್ಷಣೆಯಲ್ಲಿ, ಅವುಗಳ ಜತೆಗೂಡಿ ಉಗ್ರ ಸಂಚುಗಳಲ್ಲಿ ಭಾಗಿಯಾಗುತ್ತಲೇ ಇದ್ದಾನೆ.

ಇದೇನೇ ಇದ್ದರೂ ಉಗ್ರರಿಗೆ ಹಣಕಾಸು ನೆರವಿನ ಜಾಲವನ್ನು ತಡೆಯುವ, ಹದ್ದಿನ ಕಣ್ಣಿಡುವ ಎಫ್.ಎಟಿ.ಎಫ್.ನ ಸಭೆ ಇದೇ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಈಗಿನ ಚಾರ್ಜ್‌ಶೀಟ್‌ನ ಆಧಾರದಲ್ಲಿ ಭಾರತವು ಪಾಕ್‌ನ ಹೆಡೆಮುರಿಕಟ್ಟುವ ಪ್ರಯತ್ನಕ್ಕೆ ಮುಂದಾಗಬೇಕು.

ಹಾಗೆಂದು, ಎಫ್.ಎಟಿ.ಎಫ್.ನ ಸಭೆಯಲ್ಲಿ ಪಾಕಿಸ್ಥಾನ ಕಪ್ಪುಪಟ್ಟಿಗೆ ಸೇರಿಬಿಡುತ್ತದೆ ಎಂದೇನೂ ಅಲ್ಲ. ಒಂದು ವೇಳೆ ಕಪ್ಪುಪಟ್ಟಿಗೆ ಸಿಲುಕಿಬಿಟ್ಟರೆ ಪಾಕಿಸ್ಥಾನ ಹಲವಾರು ಅಂತಾರಾಷ್ಟ್ರೀಯ ನಿರ್ಬಂಧಗಳನ್ನು ಎದುರಿಸಲೇಬೇಕಾಗುತ್ತದೆ.

ಆದರೆ ಎಲ್ಲಿಯವರೆಗೂ ಅದಕ್ಕೆ ಚೀನ, ಟರ್ಕಿ ಹಾಗೂ ಮಲೇಷ್ಯಾದ ನೆರವಿರುತ್ತದೋ ಅಲ್ಲಿಯವರೆಗೂ ಅದು ಕಪ್ಪುಪಟ್ಟಿಯಿಂದ ತಪ್ಪಿಸಿಕೊಳ್ಳುತ್ತಲೇ ಇರುತ್ತದೆ. ಆದರೆ ಈಗ ಇರುವ ಬೂದುಪಟ್ಟಿಯಿಂದ ಅದು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುವುದೂ ಬಹಳ ಮುಖ್ಯ.

ವಿಶ್ವದ ಶಾಂತಿಗೆ ಅಡ್ಡಿಯಾಗಿರುವ ಪಾಕಿಸ್ಥಾನ ಬೂದುಪಟ್ಟಿಯಲ್ಲಿದ್ದಷ್ಟೂ ದಿನ ಅದಕ್ಕೆ ಹಲವು ಸಮಸ್ಯೆಗಳು, ಅಡ್ಡಿ-ಆತಂಕಗಳು ಇದ್ದೇ ಇರುತ್ತವೆ. ಪಾಕ್‌ಗೆ ಪಾಠ ಕಲಿಸುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಬಾರದು. ಈ ನಿಟ್ಟಿನಲ್ಲಿ ಪುಲ್ವಾಮಾ ಚಾರ್ಜ್‌ಶೀಟ್‌ ಅನ್ನು ಆಧಾರವಾಗಿಟ್ಟುಕೊಂಡು ಭಾರತ ಎಫ್ಎಟಿಎಫ್ನಲ್ಲಿ ಪಾಕ್‌ ವಿರುದ್ಧ ಬಲವಾದ ವಾದ ಮಂಡಿಸಲಿ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.