ಮೆಟ್ರೋ ಸೇವೆ ಶೀಘ್ರ ಪ್ರಾರಂಭ: ಬಿಎಸ್‌ವೈ

ಮುಂಜಾಗ್ರತೆ ಕ್ರಮದೊಂದಿಗೆ ಮತ್ತೆ ಸೇವೆ: ಸಿಎಂ

Team Udayavani, Aug 28, 2020, 11:59 AM IST

ಮೆಟ್ರೋ ಸೇವೆ ಶೀಘ್ರ ಪ್ರಾರಂಭ: ಬಿಎಸ್‌ವೈ

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕಳೆದ ಹಲವು ತಿಂಗಳುಗಳಿಂದ ನಿಲ್ಲಿಸಿರುವ ಮೆಟ್ರೋ ಸೇವೆಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ನಗರದ ಆನಂದರಾವ್‌ ವೃತ್ತದ ಮೇಲ್ಸೇತುವೆಗೆ ಗುರುವಾರ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಮೇಲ್ಸೇತುವೆ ಎಂದು ನಾಮಕಾರಣ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಸೋಂಕಿನ ಭೀತಿ ನಡುವೆಯೇ ಜನಜೀವನ ಸಹಜ ಸ್ಥಿತಿಗೆ ತಲುಪುತ್ತಿದೆ. ಜನರ ಅಗತ್ಯಕ್ಕೆ ಅನುಸಾರವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಮೆಟ್ರೋ ರೈಲು ಸೇವೆ ಮತ್ತೆ ಪ್ರಾರಂಭಿಸುತ್ತೇವೆಂದರು.

ಆನಂದರಾವ್‌ ವೃತ್ತದ ಮೇಲ್ಸೇತುವೆಗೆ ಬ್ರಿಟಿಷರ ವಿರುದ್ಧ ಸೆಣಸಿದ ಕನ್ನಡದ ಕಲಿ, ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಭಂಟನಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ಇಡಲಾಗಿದೆ. ಸಂಗೊಳ್ಳಿ ರಾಯಣ್ಣ ಕೊನೆ ಉಸಿರು ಇರುವವರೆಗೂ ಈಸ್ಟ್‌ ಇಂಡಿಯಾ ಕಂಪನಿ ವಿರುದ್ಧ ಸೆಣಸಿದ್ದರು. ಇಂದಿನ ಯುವ ಪೀಳಿಗೆ ಸ್ಫೂರ್ತಿ ಹಾಗೂ ಮಾದರಿಯಾಗಿರುವ ಮಹಾನ್‌ ನಾಯಕನ ಹೆಸರನ್ನು ಈ ಮೇಲ್ಸೇತುವೆಗೆ ನಾಮಕರಣ ಮಾಡಲಾಗಿದ್ದು ವಾಹನ ದಟ್ಟಣೆ ನಿಯಂತ್ರಿಸಲು ಸಹಕಾರಿ ಎಂದು ಹೇಳಿದರು.

ನಗರದ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಸುಧಾರಣೆ ಗುರಿ ಸರ್ಕಾರದ ಮುಂದಿದೆ. ನಗರದ ಅಭಿವೃದ್ಧಿಗೆ ಒತ್ತು ನೀಡುವುದರಿಂದ ರಾಜ್ಯ ಹಾಗೂ ದೇಶದ ಆರ್ಥಿಕ ಬೆಳವಣಿಗೆಗೂ ಸಹಕಾರಿಯಾಗಲಿದೆ. ಸರ್ಕಾರ ನಗರ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು. ಮೇಲ್ಸೇತುವೆ ನಾಮ ಕಾರಣ ಮಾಡುವ ಮುನ್ನ ಮುಖ್ಯಮಂತ್ರಿ ಯಡಿ ಯೂರಪ್ಪ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮೇಯರ್‌ ಎಂ.ಗೌತಮ್‌ ಕುಮಾರ್‌, ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸಚಿವರಾದ ಬೈರತಿ ಬಸವ ರಾಜು, ಕೆ.ಎಸ್‌.ಈಶ್ವರಪ್ಪ, ಶಾಸಕ ದಿನೇಶ್‌ ಗುಂಡೂ ರಾವ್‌, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಉಪ ಮೇಯರ್‌ ರಾಮಮೋಹನ್‌ ರಾಜ್‌, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಪಾಲಿಕೆ ಸದಸ್ಯೆ ಲತಾಕುಮಾರ್‌ ರಾಥೋಡ್‌ ಮತ್ತಿತರರಿದ್ದರು.

ಎಸಿಪಿ ತ್ರಿಡಿ ಅಕ್ಷರದ ನಾಮಫ‌ಲಕ ವಿಶೇಷ :  ನಾಮಫ‌ಲಕದಲ್ಲಿ ಎಸಿಪಿ ತ್ರಿಡಿ (ಅಲ್ಯುಮೀನಿಯಂ ಕಂಪೋಸಿಟ್‌ ಪ್ಯಾನೆಲ್‌ -ಎಸಿಪಿ – ಬಳಸಿರುವ) ಅಕ್ಷರ ಅಳವಡಿಸಲಾಗಿದೆ. ಸಂಗೊಳ್ಳಿರಾಯಣ್ಣ ಮೇಲ್ಸೇತುವೆ 615 ಮೀಟರ್‌ ಉದ್ದ, 14 ಮೀ ಅಗಲದ ಒಂದು ಮಾರ್ಗ ಶೇಷಾದ್ರಿ ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮೇಲ್ಸೇತುವೆ ಮಧ್ಯ ಭಾಗ ವಿಭಜನೆಯಾಗುವ 135 ಮೀಟರ್‌ ಉದ್ದ ಹಾಗೂ 9 ಮೀಟರ್‌ ಅಗಲದ ಮತ್ತೂಂದು ಮಾರ್ಗ ಎಸ್‌ಜೆಆರ್‌ಸಿ ಕಾಲೇಜಿನ ಮುಂಭಾಗದ ರಸ್ತೆಗೆ ಸೇರುತ್ತದೆ.

ರಸ್ತೆ ಗುಂಡಿ ಮುಕ್ತವಾದ ರಸ್ತೆಗಳು :  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುರುವಾರ ಮೇಲ್ಸೇತುವೆ ನಾಮಕರಣ ಮಾಡುವುದು ನಿಗದಿಯಾಗುತ್ತಿದ್ದಂತೆ ಈ ಮೇಲ್ಸೇತುವೆಗೆ ಮಾರ್ಗ ಕಲ್ಪಿಸುವ ಹಲವು ರಸ್ತೆಗಳು ಗುಂಡಿ ಮುಕ್ತವಾಗಿವೆ.

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.