ಜಗನ್ನಾಥದಾಸರ ಆರಾಧನಾ ಮಹೋತ್ಸವ


Team Udayavani, Aug 28, 2020, 8:25 PM IST

ಜಗನ್ನಾಥದಾಸರ ಆರಾಧನಾ ಮಹೋತ್ಸವ

ಭದ್ರಾವತಿ: ಹಳೇನಗರದಲ್ಲಿರುವ ಶ್ರೀ ರಾಘವೇಂದ್ರಸ್ವಾಮಿ, ಶ್ರೀ ವಾದಿರಾಜ ಸ್ವಾಮಿಗಳ ಮಠದಲ್ಲಿ ಗುರುವಾರ ಮಾಧ್ವ ಮಂಡಳಿಯಿಂದ ಶ್ರೀ ಜಗನ್ನಾಥದಾಸರ ಆರಾಧನಾ ಮಹೋತ್ಸವವನ್ನು ಆಚರಿಸಲಾಯಿತು.

ಬೆಳಗ್ಗೆ ದೇವರಿಗೆ ಹಾಗೂ ಉಭಯ, ಗುರುಗಳ ವೃಂದಾವನಕ್ಕೆ, ಪ್ರಾಣದೇವರಿಗೆ ಅಭಿಷೇಕ ನಡೆಸಿದ ನಂತರ ಮಠದ ಒಳಾವರಣದ ಪ್ರಾಕಾರದಲ್ಲಿ ಜಗನ್ನಾಥ ದಾಸರ ಭಾವಚಿತ್ರ ಹಿಡಿದು ಉತ್ಸವ ನಡೆಸಲಾಯಿತು.ಪಂಡಿತ ಶ್ರೀನಿಧಿ ಆಚಾರ್‌ ಜಗನ್ನಾಥ ದಾಸರ ಕೃತಿಗಳಲ್ಲಿ ಅಡಗಿರುವ ಸಂದೇಶ ಹಾಗೂ ಮಾಧ್ವ ಸಿದ್ಧಾಂತದ ತತ್ವಾದರ್ಶಗಳ ಕುರಿತಂತೆ ಅವರ ಸಾಹಿತ್ಯದಲ್ಲಿ ಅಡಗಿರುವ ಸಾರದ ಕುರಿತಂತೆ ಪ್ರವಚನ ನೀಡಿದರು.  ಪಂಡಿತ ಗೋಪಾಲಾಚಾರ್‌, ಶ್ರೀನಿವಾಸಾಚಾರ್‌, ಸತ್ಯನಾರಾಯಣಾಚಾರ್‌, ಜಯತೀರ್ಥ, ರಾಘವೇಂದ್ರಾಚಾರ್‌, ರಮಾಕಾಂತ, ಸು ಧೀಂದ್ರ, ವೆಂಕಟೇಶ್‌, ಕೃಷ್ಣಮೂರ್ತಿ, ಗುರುರಾಜ್‌, ವಿಜಯೇಂದ್ರ, ಮುಕುಂದ, ಮುರಳೀಧರ ತಂತ್ರಿ ಮತ್ತಿತರರು ಇದ್ದರು.

………………………………………………………………………………………………………………………………………………

ಜೆಸಿ ಆಸ್ಪತ್ರೆ ದಿನಗೂಲಿ ನೌಕರರಿಗೆ ಸಂಬಳವಿಲ್ಲ: ನೌಕರರ ಆಕ್ರೋಶ : ತೀರ್ಥಹಳ್ಳಿ: ತಾಲೂಕಿನ ಜೆಸಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 22 ಕ್ಕೂ ಹೆಚ್ಚು ದಿನಗೂಲಿ ನೌಕರರಿಗೆ ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ಹೋಗಿದ್ದರೂ ತಾಲೂಕಿನಲ್ಲಿ ಕೇಳುವವರೇ ಗತಿಯಿಲ್ಲ ಎಂಬ ಆಕ್ರೋಶ ದಿನಗೂಲಿ ನೌಕರರಿಂದ ಕೇಳಿ ಬರುತ್ತಿದೆ. ಜೆಸಿ ಆಸ್ಪತ್ರೆಯಂತೆ ಅನೇಕ ಸರ್ಕಾರಿ ಕಚೇರಿಗಳಲ್ಲಿ ದಿನಗೂಲಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅದಕ್ಕೆ ಟೆಂಡರ್‌ ಕರೆದು ಏಜೆನ್ಸಿಗಳ ಮೂಲಕ ದಿನಗೂಲಿ ನೌಕರರ ನೇಮಕಾತಿಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಅದೇ ರೀತಿಯಲ್ಲಿ ತಾಲೂಕಿನ ಜೆಸಿ ಆಸ್ಪತ್ರೆಯ ದಿನಗೂಲಿ ನೌಕರರನ್ನು ನೇಮಕ ಮಾಡಲು ಏಜೆನ್ಸಿಯೊಂದು ಟೆಂಡರ್‌ ಹಿಡಿದಿದ್ದು, ಇಲ್ಲಿನ ದಿನಗೂಲಿ ನೌಕರರಿಗೆ ಇದೀಗ ನಾಲ್ಕು ತಿಂಗಳುಗಳಿಂದ ಸಂಬಳವನ್ನೇ ನೀಡಿಲ್ಲ. ಆದರೆ, ಅದೇ ಕೆಲಸವನ್ನು ನಂಬಿ ಬದುಕುತ್ತಿರುವ ಹೆಚ್ಚಿನ ಮಹಿಳೆಯರು ಹಾಗೂ ಪುರುಷರು ತಮ್ಮ ಕೆಲಸವನ್ನು ನಿಲ್ಲಿಸದೆ ಆಸ್ಪತ್ರೆಯ ಸ್ವತ್ಛತಾ ಕಾರ್ಯ, ಅಡುಗೆ ಕೆಲಸ ಹಾಗೂ ಕಚೇರಿಯಲ್ಲಿ ನಿತ್ಯ ಕೆಲಸದಲ್ಲಿ ತೊಡಗಿದ್ದಾರೆ. ಒಂದೊಮ್ಮೆ ತಮಗೆ ಸಂಬಳ ನೀಡುತ್ತಿಲ್ಲ ಎಂದು ಎರಡು ದಿನಗಳ ಕಾಲ ತಮ್ಮ ಕರ್ತವ್ಯ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗಿದ್ದರೆ ಜೆಸಿ ಆಸ್ಪತ್ರೆಯ ಪರಿಸ್ಥಿತಿ ಹೇಳತೀರದಾಗಿರುತ್ತಿತ್ತು. ಆದರೆ, ತಮಗೆ ಸಂಬಳ ನೀಡದಿದ್ದರೂ ಕೆಲಸವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಟೆಂಡರ್‌ ಹಿಡಿದಾತ ಬೆಂಗಳೂರಿನಲ್ಲಿ ಕುಳಿತುಕೊಂಡು ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಆ ಕಾರಣಕ್ಕಾಗಿ ಸಂಬಳ ನೀಡುತ್ತಿಲ್ಲ, ನಾನೂ ಸಂಕಷ್ಟದಲ್ಲಿದ್ದೇನೆ ಎಂದು ಸಬೂಬು ಹೇಳಿ ಕೊಂಡು ಓಡಾಡುತ್ತಿದ್ದಾನೆಂದು ತಿಳಿದು ಬಂದಿದೆ. ಆದರೆ, ಗುತ್ತಿಗೆ ಹಿಡಿದಾತ ಸರ್ಕಾರ ಹಣ ಬಿಡುಗಡೆ ಮಾಡಲಿ, ಬಿಡಲಿ ತಿಂಗಳ ಸಂಬಳವನ್ನು ಸರಿಯಾದ ಸಮಯಕ್ಕೆ ನೀಡುತ್ತೇನೆಂಬ ಷರತ್ತಿಗೊಳಪಟ್ಟೇ ಟೆಂಡರ್‌ನ್ನು ಗುತ್ತಿಗೆ ಹಿಡಿದಿರುತ್ತಾನೆ. ಅದನ್ನು ಪ್ರಶ್ನಿಸುವ ಅಧಿಕಾರ ಅಧಿ ಕಾರಿ ಹಾಗೂ ಜನಪ್ರತಿನಿಧಿಗಳಿಗೆ ಇದೆ. ಜೆಸಿ ಆಸ್ಪತ್ರೆಯಲ್ಲಿ 22 ಮಂದಿ ದಿನಗೂಲಿ ನೌಕರರು ಕೆಲಸ ನಿರ್ವಹಿಸುತ್ತಿದ್ದು, ಪ್ರತಿಯೊಬ್ಬರ ಬದುಕೂ ಕಷ್ಟಕರವಾಗಿದೆ.ಆದರೆ ಜೆಸಿ ಆಸ್ಪತ್ರೆ ಮುಖ್ಯ ವೈದ್ಯಾ ಕಾರಿಯವರ ಭರವಸೆ ಮೇರೆಗೆ ನಾವೆಲ್ಲರೂ ನಾಲ್ಕು ತಿಂಗಳಿನಿಂದ ಸುಮ್ಮನೆ ಇದ್ದೇವೆ. ಇಂದಲ್ಲ ನಾಳೆಯಾದರೂ ನಮಗೆ ಸಂಬಳ ಕೊಡಿಸುತ್ತಾರೆ ಎನ್ನುವ ಭರವಸೆಯಿಂದ ಇದ್ದೇವೆ ಎಂದು ನೌಕರರೊಬ್ಬರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.