ಜಿಲ್ಲೆಯಲ್ಲಿ ಮತ್ತೆ ಡಿಜಿಟಲೀಕರಣ ಆರಂಭ

31 ಗ್ರಾಪಂಗಳಲಿ ಆಸ್ತಿ ಡಿಜಿಟಲೀಕರಣ ಕೆಲಸ ,ಇಸ್ರೋ ಮೂಲಕ ಪ್ರಕ್ರಿಯೆಗೆ ಅಗತ್ಯ ನೆರವು

Team Udayavani, Aug 29, 2020, 12:27 PM IST

BNG-TDY-2

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರ ಜಿಪಂ ವ್ಯಾಪ್ತಿಯಲ್ಲಿ ಕೋವಿಡ್‌ ಹಿನ್ನಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಗ್ರಾಪಂಗಳ ಆಸ್ತಿ ಡಿಜಿಟಲೀಕರಣ ಕಾರ್ಯ ಮತ್ತೆ ಆರಂಭವಾಗಿದೆ. ನಗರ ಜಿಪಂ ವ್ಯಾಪ್ತಿಯಲ್ಲಿ ಸುಮಾರು 96 ಗ್ರಾಪಂಗಳಿದ್ದು, ಸುಮಾರು 800 ಕೋಟಿ.ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆ ದೃಷ್ಟಿಯಿಂದಲೇ ಪ್ರಾಥಮಿಕ ಹಂತದಲ್ಲಿ ಸುಮಾರು 31 ಗ್ರಾಪಂಗಳಲ್ಲಿ ಆಸ್ತಿ ಡಿಜಿಟಲೀಕರಣ ಕೆಲಸ ಆರಂಭವಾಗಿತ್ತು.

ಜತೆಗೆ ಮೂರು ತಿಂಗಳಲ್ಲಿ ಆಸ್ತಿಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಲ್ಲಿತ್ತು. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಕಾರ್ಯ ಸ್ಥಗಿತವಾಗಿತ್ತು. ಈ ಮತ್ತೆ ಆಸ್ತಿ ಡಿಜಟಲೀಕರಣ ಆರಂಭವಾಗಿದ್ದು, ಒಂದು ತಿಂಗಳ ಒಳಗೆ ಮೂವತ್ತೂಂದು ಗ್ರಾಪಂಗಳಲ್ಲಿ ಆಸ್ತಿ ಡಿಜಿಟಲೀಕರಣ ಕೆಲಸ ಮುಗಿಸಲು ನಿರೀಕ್ಷಿಸಿದ್ದು, ಇದಕ್ಕೆ ಇಸ್ರೋ ಸಹಾಯ ಪಡೆಯಲಾಗುವುದು.ಈಗಾಗಲೇ ಇಸ್ರೋದಿಂದ ನಕ್ಷೆ ಪ್ರತಿ ಪಡೆದಿದ್ದು, ನಕ್ಷೆ ಮುಂದಿಟ್ಟುಕೊಂಡು ಆಸ್ತಿಗಳ ಡಿಜಿಟಲೀಕರಣ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳ ಪತ್ತೆ ಕಾರ್ಯವೂ ನಡೆದಿದೆ. ಪ್ರಸ್ತುತ ವಾರ್ಷಿಕವಾಗಿ 140 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದ್ದು, ಡಿಜಿಟಲೀಕರಣದ ಮೂಲಕ ಮತ್ತಷ್ಟು ಆದಾಯ ಸಂಗ್ರಹವಾಗಲಿದೆ ಎಂದು ನಗರ ಜಿಪಂ ಸಹಾಯಕ ಯೋಜನಾಧಿಕಾರಿ ಕೆ.ಜಿ.ಜಗದೀಶ್‌ ತಿಳಿಸಿದ್ದಾರೆ. ಮರಸೂರು ಗ್ರಾಪಂನಲ್ಲೂ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳಿವೆ.ಅವುಗಳ ತೆರಿಗೆ ವ್ಯಾಪ್ತಿಗೆ ತರುವ ಕೆಲಸ ನಡೆದಿದೆ. ಇದರಿಂದ ಮುಂದಿನ ದಿನದಲ್ಲಿ ಗ್ರಾಮ ಪಂಚಾಯತಿಗೆ ಮತ್ತಷ್ಟು ಆದಾಯ ಹರಿದು ಬರುವ ನಿರೀಕ್ಷೆ ಇದೆ ಎಂದು ಮರಸೂರು ಗ್ರಾಮ ಪಂಚಾಯ್ತಿ ಪಿಡಿಒ ಶಶಿಕಿರಣ್‌ ತಿಳಿಸಿದರು.

ಡಿಜಿಟಲೀಕರಣ ಆಗುತ್ತಿರುವ ಪ್ರದೇಶ :  ಕಗ್ಗಲೀಪುರ, ಕುಂಬಳಗೋಡು, ಸೋಮನಹಳ್ಳಿ, ಕೋನಪ್ಪನ ಅಗ್ರಹಾರ, ಆಲೂರು, ರಾಜಾನುಕುಂಟೆ, ದಾಸನಪುರ, ದೊಡ್ಡಜಾಲ, ಚಿಕ್ಕಬಾಣಾವರ, ಚಿಕ್ಕಜಾಲ, ಹೆನ್ನಾಗರ, ಮರಸೂರು, ಯಮರೆ ,ಹುಲಿಮಂಗಲ, ಬಿದರಹಳ್ಳಿ, ಮಂಡೂರು, ಕಿತ್ತಗನೂರು, ದೊಡ್ಡಗುಬ್ಬಿ ಆವಲಹಳ್ಳಿ ಸೇರಿದಂತೆ ಹಲವು ಗ್ರಾಪಂಗಳಲ್ಲಿ ಆಸ್ತಿ ಡಿಜಿಟಲೀಕರಣ ಕಾರ್ಯ ಆರಂಭವಾಗಿದೆ. ಜತೆಗೆ ಯೊಜನೆ ಅನುಷ್ಠಾನಕ್ಕೆ ನೋಡೆಲ್‌ ಅಧಿಕಾರಿಗಳನ್ನೂ ನೇಮಿಸಲಾಗಿದೆ ಎಂದು ಜಿಪಂ ತಿಳಿಸಿದೆ.

ಪ್ರತಿ ಗ್ರಾಪಂಗೆ 250 ಟ್ಯಾಬ್‌ :  ಡಿಜಿಟಲೀಕರಣ ಮೂರು ಹಂತಗಳಲ್ಲಿ ನಡೆಯಲಿದ್ದು, ಒಂದು ಗ್ರಾಪಂಗೆ ಎಂಟರಂತೆ ಸುಮಾರು 250 ಟ್ಯಾಬ್‌ಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಡಿಜಿಟಲೀಕರಣಕ್ಕೆ 5 ಕೋಟಿ.ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ ಎಂದು ಗ್ರಾಪಂ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಹಿತಿ ನೀಡಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಆಸ್ತಿ ಡಿಜಿಟಲೀಕರಣ ಕಾರ್ಯ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಆ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ 31 ಗ್ರಾಪಂಗಳಲ್ಲಿ ಆಸ್ತಿ ಡಿಜಿಟಲೀಕರಣ ನಡೆಯಲಿದೆ.   ಕೆ.ಶಿವರಾಮೇಗೌಡ, ನಗರ ಜಿಪಂ ಸಿಇಒ

 

ದೇವೇಶ ಸೂರುಗುಪ್ಪ

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.