ವಿಶ್ವನಾಥ್ ಅವರಿಗೆ ಪೂರ್ವಾಶ್ರಮದ ಪ್ರಭಾವ ಕಡಿಮೆಯಾಗಿಲ್ಲ: ಪ್ರತಾಪ್ ಸಿಂಹ
Team Udayavani, Aug 29, 2020, 1:15 PM IST
ಮೈಸೂರು: ವಿಶ್ವನಾಥ್ ಅವರು ಬಿಜೆಪಿ ಸೇರಿದ್ದಾರೆ ಆದರೆ ಅವರಿಗಿನ್ನು ಪೂರ್ವಾಶ್ರಮದ ಪ್ರಭಾವ ಇನ್ನೂ ಕಡಿಮೆಯಾದಂತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಟಿಪ್ಪುಸುಲ್ತಾನ್ ಸ್ವತಂತ್ರ ಹೊರಾಟಗಾರ, ಈ ನೆಲದ ಮಗ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಕಾಲಿರಿಸಿದ್ದಾರೆ. ಹಾಗಾಗಿ ಮೈಸೂರಿನ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮೈಸೂರಿನ ಯದು ವಂಶವನ್ನು ನಿರ್ನಾಮ ಮಾಡಲು ಹೊರಟವರು ಯಾರು, ಕನ್ನಡ ಭಾಷೆ ಮೇಲೆ ಪ್ರಹಾರ ನಡೆಸಿದ್ದು ಟಿಪ್ಪು. ಹಾಗಾಗಿ ಟಿಪ್ಪುವನ್ನು ವೀರ, ಶೂರ ಎಂದು ಹೇಳಲಾಗದು. ಟಿಪ್ಪು ಸತ್ತಾಗ ಸ್ವಾತಂತ್ರ್ಯ ಹೋರಾಟವೇ ಶುರುವಾಗಿರಲಿಲ್ಲ ಎಂದು ತಿರುಗೇಟು ನೀಡಿದರು.
ವಿಶ್ವನಾಥ್ ಮುಂದಾದರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ