ಖರೀದಿ ಕೇಂದ್ರದಲ್ಲೇ ಬೆಳೆ ಮಾರಾಟ ಮಾಡಿ


Team Udayavani, Aug 29, 2020, 7:53 PM IST

ಖರೀದಿ ಕೇಂದ್ರದಲ್ಲೇ ಬೆಳೆ ಮಾರಾಟ ಮಾಡಿ

ಬೀದರ: ಜಿಲ್ಲೆಯ ರೈತರು ತಾವು ಬೆಳೆದ ಬೆಳೆಗಳನ್ನು ಯಾವುದೇ ಕಾರಣಕ್ಕೂ ಹೊರಗಡೆ ಮಾರಾಟ ಮಾಡದೆ, ಸರ್ಕಾರದಿಂದ ಪ್ರಾರಂಭಿಸಲಾಗುವ ಖರೀದಿ ಕೇಂದ್ರಗಳಲ್ಲಿಯೇ ಮಾರಾಟ ಮಾಡಿ ಉತ್ತಮ ಬೆಲೆ ಪಡೆಯಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರಸರ್ಕಾರವು ಅನೇಕ ಕ್ರಮ ಕೈಗೊಂಡಿದೆ. ಅದರಲ್ಲಿ ರೈತರ ಬೆಳೆಗೆ  ಮಾರುಕಟ್ಟೆಯ ಕನಿಷ್ಟ ಬೆಂಬಲ ಬೆಲೆಯೂ ಒಂದಾಗಿದ್ದು, ಈ ಯೋಜನೆಯಡಿ ಜಿಲ್ಲೆಯ ಲಕ್ಷಾಂತರ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈಗಾಗಲೇ ಖರೀದಿ ಕೇಂದ್ರಗಳ ಪ್ರಾರಂಭಕ್ಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ. ಆದಷ್ಟು ಬೇಗ ಖರೀದಿ ಕೇಂದ್ರಗಳ ಪ್ರಾರಂಭಿಸಲು ಅನುಮತಿ ನೀಡುವ ಕುರಿತು ಸಹಕಾರ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

………………………………………………………………………………………………………………………………………………..

ತುಂಡು ಗುತ್ತಿಗೆ ಸ್ಥಗಿತಕ್ಕೆ  ಆಗ್ರಹ : ಬೀದರ: ಹದಿನೈದನೇ ಹಣಕಾಸು ಯೋಜನೆಯಡಿ ತುಂಡು ಗುತ್ತಿಗೆ ಪ್ರಕ್ರಿಯೆ ಸ್ಥಗಿತಗೊಳಿಸಿ ಟೆಂಡರ್‌ ಮೂಲಕವೇ ಕಾಮಗಾರಿ ಕೈಗೊಳ್ಳಬೇಕು ಎಂದು ಜಿಲ್ಲಾ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರ ಸಂಘ ಆಗ್ರಹಿಸಿದೆ.ಜಿಲ್ಲಾಧ್ಯಕ್ಷ ರವೀಂದ್ರಕುಮಾರ ಹಾಸನಕರ್‌ ನೇತೃತ್ವದಲ್ಲಿ ಪ್ರಮುಖರ ನಿಯೋಗ ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

15ನೇ ಹಣಕಾಸು ಯೋಜನೆಯಡಿ ಜಿಪಂ ಹಾಗೂ ತಾಪಂಗೆ ಸುಮಾರು 10ರಿಂದ 15 ಕೋಟಿ ರೂ. ಅನುದಾನ ಬಂದಿರುವ ಮಾಹಿತಿ ಇದೆ. ತುಂಡು ಗುತ್ತಿಗೆ ಆದೇಶ ಸೆ.17ಕ್ಕೆ ಕೊನೆಗೊಂಡಿದ್ದು, ಹೊಸದಾಗಿ ತುಂಡು ಗುತ್ತಿಗೆ ನೀಡದಂತೆಯೂ ಆದೇಶಿಸಲಾಗಿದೆ ಎಂದು ಹೇಳಿದೆ. ಜಿಪಂನಲ್ಲಿ ಸೆ. 17ಕ್ಕೆ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಆದರೆ, ಅಂದಾಜು ಪಟ್ಟಿಗೆ ಈವರೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿಲ್ಲ. ಕಾರಣ, ಈ ಕಾಮಗಾರಿಗಳನ್ನು ನಿಯಮಾನುಸಾರ ಟೆಂಡರ್‌ ಮೂಲಕವೇ ಅನುಷ್ಠಾನಗೊಳಿಸಬೇಕು. 15ನೇ ಹಣಕಾಸು ಯೋಜನೆ ಕಾಮಗಾರಿಗಳಲ್ಲಿ ಶೇ. 24.10 ರಷ್ಟನ್ನು ವರ್ಗೀಕರಿಸಿ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಕೆಲ ಅಧಿ ಕಾರಿಗಳು ಭ್ರಷ್ಟಾಚಾರ ನಡೆಸಲು ತರಾತುರಿಯಲ್ಲಿ ಹಿಂದಿನ ದಿನಾಂಕದಲ್ಲಿ ತುಂಡು ಗುತ್ತಿಗೆ ಒಪ್ಪಂದ ಮಾಡಿ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ಆದೇಶ ಪಾಲಿಸದಿದ್ದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಹೋರಾಟವೂ ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.