ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ


Team Udayavani, Aug 30, 2020, 6:50 AM IST

ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ

ಹೊಸದಿಲ್ಲಿ: ಬಿಜೆಪಿಯ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ “ಒಂದು ದೇಶ -ಒಂದು ಚುನಾವಣೆ’ಯ ದಿನಗಳು ಸನ್ನಿಹಿತವಾಗುತ್ತಿವೆಯೇ?

ಇತ್ತೀಚಿನ ಬೆಳವಣಿಗೆಗಳು ಇದಕ್ಕೆ ಪೂರಕವಾಗಿವೆ. ಆ.13ರಂದು ಪ್ರಧಾನಿ ಕಾರ್ಯಾಲಯವು “ದೇಶಕ್ಕೊಂದೇ ಮತದಾರರ ಪಟ್ಟಿ’ ತಯಾರಿಸುವ ಸಲುವಾಗಿ ಅಧಿಕಾರಿಗಳ ಸಭೆ ನಡೆಸಿದೆ. ಸದ್ಯ ಕೇಂದ್ರ ಚುನಾವಣ ಆಯೋಗ ಮತ್ತು ರಾಜ್ಯ ಚುನಾವಣ ಆಯೋಗಗಳು ಪ್ರತ್ಯೇಕವಾಗಿ ಮತದಾರರ ಪಟ್ಟಿ ತಯಾರಿಸುತ್ತಿವೆ. ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಒಂದು ದೇಶ, ಒಂದು ಚುನಾವಣೆ ಸುಲಭ ಎಂಬ ಉದ್ದೇಶದಿಂದ ಸಭೆ ನಡೆಸಲಾಗಿದೆ.

ಪ್ರಧಾನಮಂತ್ರಿಗಳ ಪ್ರಿನ್ಸಿಪಲ್‌ ಸೆಕ್ರೆಟರಿ ಪಿ.ಕೆ.ಮಿಶ್ರಾ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದೆ. ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್‌ ಚೌಬಾ, ಸಂಸದೀಯ ಕಾರ್ಯದರ್ಶಿ ಜಿ. ನಾರಾಯಣ ರಾಜು, ಪಂ.ರಾಜ್‌ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಮತ್ತು ಕೇಂದ್ರ ಚುನಾವಣ ಆಯೋಗದ ಮಹಾ ಕಾರ್ಯದರ್ಶಿ ಉಮೇಶ್‌ ಸಿನ್ಹಾ ಭಾಗಿಯಾಗಿದ್ದರು.

ಒಂದು ವೇಳೆ ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶಕ್ಕೆ ಇನ್ನಷ್ಟು ಸನಿಹವಾದಂತಾಗುತ್ತದೆ ಎಂಬುದು ಕೇಂದ್ರ ಸರಕಾರದ ಚಿಂತನೆ.

ಎರಡು ಆಯ್ಕೆಗಳ ಬಗ್ಗೆ ಚರ್ಚೆ
ಈ ಸಭೆಯಲ್ಲಿ ಪ್ರಮುಖವಾಗಿ ಎರಡು ಆಯ್ಕೆಗಳ ಬಗ್ಗೆ ಚರ್ಚೆಯಾಗಿದೆ. ಒಂದು, ಆರ್ಟಿಕಲ್‌ 243 ಕೆ ಮತ್ತು 243 ಝಡ್ಎಗೆ ಸಾಂವಿಧಾನಿಕ ತಿದ್ದುಪಡಿ ತರುವುದು. ಈ ಮೂಲಕ ದೇಶದ ಎಲ್ಲ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ಕಡ್ಡಾಯ ಮಾಡುವುದು.

ಎರಡು, ರಾಜ್ಯ ಸರಕಾರಗಳ ಮನವೊಲಿಸಿ, ಕೇಂದ್ರ ಚುನಾವಣ ಆಯೋಗ ರೂಪಿಸುವ ಮತದಾರರ ಪಟ್ಟಿಯನ್ನೇ ಎಲ್ಲ ಚುನಾವಣೆಗಳಲ್ಲಿ ಬಳಸುವಂತೆ ಮಾಡುವುದು.

ಏನಿದು 243 ಕೆ ಮತ್ತು 243 ಝಡ್‌ಎ?
ಈ ಎರಡೂ ಪರಿಚ್ಛೇದಗಳು ರಾಜ್ಯ ಚುನಾವಣ ಆಯೋಗಗಳಿಗೆ ವಿಶೇಷ ಅಧಿಕಾರ ನೀಡಿವೆ. ರಾಜ್ಯ ಚುನಾವಣ ಆಯೋಗವು ಸ್ಥಳೀಯ ಸಂಸ್ಥೆಗಳಾದ ಪಾಲಿಕೆ ಮತ್ತು ಪಂಚಾಯತ್‌ಗಳಿಗೆ ಚುನಾವಣೆ ನಡೆಸುತ್ತದೆ. ಹೀಗಾಗಿ ರಾಜ್ಯ ಚು. ಆಯೋಗಗಳಿಗೆ ಮತದಾರರ ಪಟ್ಟಿ ರೂಪಿಸುವ ಸಲುವಾಗಿ ನಿರ್ದೇಶನ ನೀಡುವ, ನಿಯಂತ್ರಿಸುವ ಮತ್ತು ಚುನಾವಣೆ ನಡೆಸುವ ಅಧಿಕಾರ ನೀಡಲಾಗಿದೆ. ಹೀಗಾಗಿಯೇ ರಾಜ್ಯ ಆಯೋಗಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕ ಮತದಾರ ಪಟ್ಟಿ ರೂಪಿಸುತ್ತವೆ.

ಕೆಲವು ರಾಜ್ಯಗಳಲ್ಲಿ ಮಾತ್ರ
ಕರ್ನಾಟಕ ಸಹಿತ ಕೆಲವು ರಾಜ್ಯಗಳು ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಕೇಂದ್ರ ಚುನಾವಣ ಆಯೋಗದ ಮತದಾರರ ಪಟ್ಟಿಯನ್ನೇ ಬಳಸಿಕೊಳ್ಳುತ್ತವೆ. ಆದರೆ ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ ಮತ್ತು ಕೆಲವು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಮತದಾರರ ಪಟ್ಟಿ ಮಾಡಿಕೊಳ್ಳುತ್ತವೆ.

ರಾಜ್ಯಗಳ ಮನವೊಲಿಕೆ
ಆ. 13ರಂದು ನಡೆದ ಸಭೆಯಲ್ಲಿ ಕೇಂದ್ರ ಚುನಾವಣ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ರಾಜ್ಯ ಚುನಾವಣ ಆಯೋಗಗಳ ಮನವೊಲಿಕೆ ಮಾಡುವ ನಿಲುವು ವ್ಯಕ್ತಪಡಿಸಲಾಗಿದೆ. ಪಿ.ಕೆ. ಮಿಶ್ರಾ ಅವರು ಕ್ಯಾಬಿನೆಟ್‌ ಕಾರ್ಯದರ್ಶಿ ರಾಜೀವ್‌ ಚೌಬಾ ಅವರಿಗೆ ರಾಜ್ಯ ಸರಕಾರಗಳನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.