ಸಾವಿರ ರೂ. ದಾಟಿದ ಶಂಕರಪುರ ಮಲ್ಲಿಗೆ : ಆರ್ಥಿಕ ತಲ್ಲಣದಿಂದ ಚೇತರಿಕೆ


Team Udayavani, Aug 30, 2020, 12:28 AM IST

ಸಾವಿರ ರೂ. ದಾಟಿದ ಶಂಕರಪುರ ಮಲ್ಲಿಗೆ : ಆರ್ಥಿಕ ತಲ್ಲಣದಿಂದ ಚೇತರಿಕೆ

ಶಿರ್ವ: ಸುದೀರ್ಘ‌ ಲಾಕ್‌ಡೌನ್‌ ಉಂಟು ಮಾಡಿದ್ದ ಆರ್ಥಿಕ ತಲ್ಲಣದಿಂದ ದೇಶ ಕ್ರಮೇಣ ಚೇತರಿಸಿಕೊಳ್ಳುತ್ತಿದೆ. ಇದಕ್ಕೆ ಪೂರಕ ಶಕ್ತಿಯಾಗಿ ಕೆಲಸ ಮಾಡುತ್ತಿರುವುದು ಸ್ಥಳೀಯ ಆರ್ಥಿಕ ಶಕ್ತಿಗಳು. ಲಾಕ್‌ಡೌನ್‌ನಿಂದಾಗಿ ವ್ಯವಹಾರ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ಧಾರಣೆ ಶನಿವಾರ ಸಾವಿರ ರೂ. ಗಡಿ ದಾಟಿರುವುದು ಇದಕ್ಕೆ ಉದಾಹರಣೆ.

ಲಾಕ್‌ಡೌನ್‌ ಕಾಲದಲ್ಲಿ ಶಂಕರಪುರ ಮಲ್ಲಿಗೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಈಗ ಅದು ಚೇತರಿಕೆ ಕಂಡು 5 ತಿಂಗಳ ಬಳಿಕ ಅಟ್ಟೆಗೆ ಸಾವಿರ ರೂ. ಗಡಿ ದಾಟಿದ್ದು, ಶನಿವಾರ ದರ 1,050 ರೂ. ತಲುಪಿದೆ. ನಾಲ್ಕೈದು ದಿನಗಳಿಂದ ಮಲ್ಲಿಗೆ ದರದಲ್ಲಿ ಏರಿಕೆ ಕಾಣುತ್ತಿರುವುದು ಬೆಳೆಗಾರರಲ್ಲಿ ನೆಮ್ಮದಿ ಮೂಡಿಸಿದೆ.

ಲಾಕ್‌ಡೌನ್‌ ಸಮಯ ಕಟ್ಟೆಯೇ ಸ್ಥಗಿತ
ಲಾಕ್‌ಡೌನ್‌ ಸಮಯದಲ್ಲಿ ಉಡುಪಿ ಜಿಲ್ಲೆಯ ಮಾರುಕಟ್ಟೆ ಬಿಟ್ಟು ಬೇರೆ ಕಡೆಗೆ ಮಲ್ಲಿಗೆ ಸಾಗಣೆಯಾಗದೆ ದರ ದಲ್ಲಿ ಭಾರೀ ಕುಸಿತ ಕಂಡು ಅಟ್ಟೆಗೆ 50 ರೂ. ಆಸುಪಾಸಿನಲ್ಲಿತ್ತು. ಎರಡನೇ ಲಾಕ್‌ಡೌನ್‌ ಹಂತದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಕಟ್ಟೆಯೇ ಬಂದ್‌ ಆಗಿತ್ತು. ಬಳಿಕ ಪ್ರಾರಂಭಗೊಂಡ ಮಲ್ಲಿಗೆ ದರ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಮಲ್ಲಿಗೆ ಬೆಳೆಗಾರರಿಗೆ ವರ್ಷದ ಅತ್ಯಧಿಕ ಆದಾಯ ಸಿಗುವುದು ಎಪ್ರಿಲ್‌ -ಮೇ ತಿಂಗಳಲ್ಲಿ. ಅದೇ ಸಮಯದಲ್ಲಿ ಕೊರೊನಾ ಲಾಕ್‌ಡೌನ್‌ ಆಗಿತ್ತು, ಅನ್‌ಲಾಕ್‌ ಬಳಿಕವೂ ದರದಲ್ಲಿ ಚೇತರಿಕೆ ಕಂಡಿರಲಿಲ್ಲ.

ಇಳುವರಿ ಕಡಿಮೆ; ಬೇಡಿಕೆ ಹೆಚ್ಚಳ
ಪ್ರಸ್ತುತ ಮಳೆಯಿಂದಾಗಿ ಮಲ್ಲಿಗೆ ಹೂವಿನ ಇಳುವರಿ ಕಡಿಮೆಯಾಗಿದೆ. ಅಲ್ಲದೆ ಇದು ಶ್ರಾವಣ ಮಾಸವಾಗಿದ್ದು, ಹಬ್ಬ, ಶುಭ ಸಮಾರಂಭಗಳು ಪ್ರಾರಂಭವಾಗಿರುವುದರಿಂದ ಮಲ್ಲಿಗೆ ಹೂವಿಗೆ ಬೇಡಿಕೆ ಏರತೊಡಗಿದೆ.

ಭಕ್ತರ ಮೂಲಕ ದೇವಸ್ಥಾನಗಳಿಗೂ ಸಮರ್ಪಣೆಯಾಗುತ್ತಿದೆ. ಜು. 31ರಂದು 850 ರೂ. ತಲುಪಿದ್ದ ಮಲ್ಲಿಗೆ ದರ ಬಳಿಕ ಇಳಿಕೆ ಕಂಡಿತ್ತು. ಆ. 15ರ ಬಳಿಕ 400-560 ರೂ. ಆಸುಪಾಸಿಲ್ಲಿದ್ದ ದರ ಆ. 26ರಂದು 560 ರೂ., ಆ. 27ರಂದು 730 ರೂ., ಆ. 28 ರಂದು 950 ರೂ. ಇದ್ದು, ಶನಿವಾರ 1,050 ರೂ. ತಲುಪಿದೆ. ಸದ್ಯ ಮುಂಬಯಿಗೆ ಮಲ್ಲಿಗೆ ರವಾನೆಯಾಗುತ್ತಿಲ್ಲ; ಅದು ಆರಂಭವಾದರೆ ದರ ಇನ್ನಷ್ಟು ಏರುವ ನಿರೀಕ್ಷೆಯಿದೆ.

ಚೌತಿ ಬಳಿಕ ಚೇತರಿಕೆ
ಲಾಕ್‌ಡೌನ್‌ ತೆರವಾಗಿ ಗಣೇಶ ಚತುರ್ಥಿಯ ಬಳಿಕ ಇತರ ಹೂ, ಹಣ್ಣು, ತರಕಾರಿ ಮಾರುಕಟ್ಟೆಯೂ ಸಾಕಷ್ಟು ಮಟ್ಟಿನ ಚೇತರಿಕೆ ಪಡೆಯುತ್ತಿದೆ. ಉಡುಪಿ ಭಾಗದಲ್ಲಿ ಸ್ಥಳೀಯ ತರಕಾರಿಗಳೂ ಹೆಚ್ಚು ಪ್ರಮಾಣದಲ್ಲಿ ಮಾರುಕಟ್ಟೆಗೆ ಬರಲಾರಂಭಿಸಿದ್ದು, ಬೇಡಿಕೆಯೂ ಹೆಚ್ಚಿದೆ. ಚೌತಿಯ ಬಳಿಕ ತರಕಾರಿಗಳಿಗೆ ಕೆಜಿಯೊಂದರ 20ರಿಂದ 30 ರೂ. ದರ ಏರಿಕೆ ಆಗಿದ್ದರೆ ಬೆಂಡೆ, ಬೀನ್ಸ್‌ನಂಥವುಗಳಿಗೆ 40 ರೂ.ವರೆಗೆ ಧಾರಣೆ ಏರಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಜನವಸತಿ ಪ್ರದೇಶದಲ್ಲೇ ಹಣ್ಣು ತರಕಾರಿ ಮಾರಾಟ ಹೆಚ್ಚಿದ್ದರೆ ಈಗ ಮಾರುಕಟ್ಟೆಗೆ ಸೀಮಿತಗೊಂಡಿರುವುದು ಹೊಸ ಬೆಳವಣಿಗೆ. ಮಂಗಳೂರು ಭಾಗದಲ್ಲಿ ಸ್ಥಳೀಯ ಬೆಂಡೆಗೆ 60ರಿಂದ 70 ರೂ. ಹೀರೆ, ಹಾಗಲ, ಮುಳ್ಳುಸೌತೆ ಇತ್ಯಾದಿ ಕೆಜಿಯೊಂದಕ್ಕೆ ಸರಾಸರಿ 60 ರೂ.ನಲ್ಲಿವೆ.

ಕೋವಿಡ್ ನಿಂದಾಗಿ ಶುಭ ಸಮಾರಂಭಗಳಿಲ್ಲದೆ ಕುಸಿತ ಕಂಡಿದ್ದ ಮಲ್ಲಿಗೆ ದರ ಏರಿಕೆ ಕಂಡಿದ್ದು, ಬೆಳೆಗಾರರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಗಳಲ್ಲಿ ಮಲ್ಲಿಗೆ ಗರಿಷ್ಟ ದರ ಕಾಯ್ದುಕೊಂಡು ಬೆಳೆಗಾರರ ಹಿತ ಕಾಯಲಿ ಎಂಬುದು ನಮ್ಮೆಲ್ಲರ ಆಶಯ.
– ಅಣ್ಣಿ ಶೆಟ್ಟಿ, ಶಿರ್ವ ಪದವು, ಮಲ್ಲಿಗೆ ವ್ಯಾಪಾರಿ ಮತ್ತು ಬೆಳೆಗಾರ

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.