ತುರುವೇಕೆರೆ: ಪೊಲೀಸರಿಂದ ಪಥಸಂಚಲನ
Team Udayavani, Aug 30, 2020, 2:10 PM IST
ತುರುವೇಕೆರೆ: ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ತಾಲೂಕು ಜೆಡಿಎಸ್ ವತಿಯಿಂದ ಸೋಮವಾರ ಹಮ್ಮಿ ಕೊಂಡಿದ್ದ ಪ್ರತಿಭಟನಾ ಪಾದ ಯಾತ್ರೆಯ ಮುಂಜಾಗ್ರತೆಯಾಗಿ ತಾಲೂಕಿನ ಹಲವೆಡೆ ಹಾಗೂ ಗುಡ್ಡೇನಹಳ್ಳಿಯಲ್ಲಿ ನೂರಕ್ಕೂ ಪೊಲೀಸರು ಹಾಗೂ ಮಿಲಿಟರಿ ತುಕಡಿಗಳಿಂದ ಪಥ ಸಂಚಲನ ನಡೆಸಿದರು.
ತಾಲೂಕಿನ ಮಾಯಸಂದ್ರ ಹೋಬಳಿಯ ಗುಡ್ಡೇನ ಹಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800ಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ ಕೀಳಿಸಿದ್ದಾರೆಂದು ಮಾಜಿ ಶಾಸಕರು ಆರೋಪಿಸಿದರು.
ಈ ಬಗ್ಗೆ ಪ್ರತಿಭಟನೆ ಮಾಡುವುದಾಗಿ ತಾಲೂಕು ಜೆಡಿ ಎಸ್ ಹಾಕಿದ್ದ ಫ್ಲೆಕ್ಸ್ಗಳನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದರು. ಈ ವೇಳೆ ಫ್ಲೆಕ್ಸ್ ಹರಿದ ವಿಚಾರವಾಗಿ ಎರಡು ಪಕ್ಷಗಳ ನಡುವೆ ಘರ್ಷಣೆ ನಡೆದು ತಾಲೂಕಿನಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೆ ಕಾರಣವಾಯಿತು. ಆದಾಗ್ಯೂ ಮಾಜಿ ಶಾಸಕರು ಪ್ರತಿಭಟನೆ ಮಾಡುವುದಾಗಿ ಸುದ್ದಿ ಗೋಷ್ಠಿ ನಡೆಸಿದರು. ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಗೆ ಮಾಜಿ ಶಾಸಕರು ಎಡರು ಗಾಲು ಹಾಕುತ್ತಿದ್ದು ನಾವು ಪ್ರತಿ ಪ್ರತಿಭಟನೆ ಮಾಡುವುದಾಗಿ ತಾಲೂಕು ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದರು.
144 ಸೆಕ್ಷನ್ ಬಗ್ಗೆ ಜಾಗೃತಿ ಮೂಡಿಸಲು ಗುಡ್ಡೇನಹಳ್ಳಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಪೊಲೀಸ್ ಮತ್ತು ಮಿಲಿಟರಿ ತುಕಡಿಗಳು ಪಥ ಸಂಚಲನ ಮಾಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ