5 ಲಕ್ಷ ಮನೆಗಳಲ್ಲಿಂದು ಪ್ರಕೃತಿ ವಂದನಾ

| ಆರೆಸ್ಸೆಸ್‌ ಮಹತ್ವದ ಸಂಕಲ್ಪ | ಪ್ರಕೃತಿ ಮಾತೆಗೆ ಗೌರವ ಸಲ್ಲಿಸುವ ಪರಂಪರೆ ನವಪೀಳಿಗೆಗೆ ತಿಳಿಸುವ ಕಾರ್ಯ

Team Udayavani, Aug 30, 2020, 2:48 PM IST

5 ಲಕ್ಷ ಮನೆಗಳಲ್ಲಿಂದು ಪ್ರಕೃತಿ ವಂದನಾ

ಹುಬ್ಬಳ್ಳಿ: ಪ್ರಕೃತಿ ಮಾತೆಗೆ ನಮಿಸುವ, ಪರಿಸರ ರಕ್ಷಣೆ-ಪೋಷಣೆ ಸಂಕಲ್ಪ, ಮುಖ್ಯವಾಗಿ ಹೊಸ ಪೀಳಿಗೆಗೆ ಪ್ರಕೃತಿ ಮಾತೆಗೆ ಗೌರವ ಸಲ್ಲಿಸುವ ಪರಂಪರೆ ಮನದಟ್ಟು ಮಾಡುವ ನಿಟ್ಟಿನಲ್ಲಿ ಆರ್‌ಎಸ್‌ಎಸ್‌ ಮಹತ್ವದ ಹೆಜ್ಜೆ ಇರಿಸಿದೆ. ಆ.30ರಂದು ರಾಷ್ಟ್ರದಾದ್ಯಂತ ಪ್ರಕೃತಿ ವಂದನಾ ಕಾರ್ಯಕ್ರಮ ಮೊಳಗಲಿದ್ದು, ರಾಜ್ಯದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಪೂಜೆ ಸಲ್ಲಿಕೆಗೆ ಸಂಕಲ್ಪ ಮಾಡಲಾಗಿದೆ.

ರಾಷ್ಟ್ರಪ್ರೇಮ, ದೇಸಿಯತೆ, ಪರಂಪರೆ, ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕತೆಯ ಪ್ರೇರಣೆ-ಪೋಷಣೆ, ಯಾವುದೇ ವಿಪತ್ತು ಎದುರಾದರೂ ಪರಿಹಾರ ಕಾರ್ಯದಲ್ಲಿ ಮೊದಲ ಹೆಜ್ಜೆ ಇರಿಸುವ ಕಾಯಕದಲ್ಲಿ ತೊಡಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ ಎಸ್‌ಎಸ್‌) ಆ.30ರಂದು ರಾಷ್ಟ್ರದಾದ್ಯಂತ ಪ್ರತಿ ಮನೆಗಳಲ್ಲೂ ಪ್ರಕೃತಿ ಮಾತೆಗೆ ವಂದನೆ ಸಲ್ಲಿಕೆಗೆ ಕರೆ ನೀಡಿದ್ದು, ಇದಕ್ಕೆ ದೇಶ-ರಾಜ್ಯದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಕೋವಿಡ್‌-19 ಅನೇಕ ಸಾವು-ನೋವುಗಳಿಗೆ ಕಾರಣವಾಗಿದ್ದು, ಪರಿಸರ, ಜೀವನಶೈಲಿ, ಅನೇಕರ ಚಿಂತನೆಗಳಲ್ಲೂ ಬದಲಾವಣೆಗೆ ಕಾರಣವಾಗಿದೆ. ಪರಿಸರ, ಆರೋಗ್ಯ ಕಾಳಜಿಗೆ ಒತ್ತು ನೀಡುವ ಪಾಠವನ್ನು ಕಲಿಸಿದೆ. ಇದಕ್ಕೆ ಪೂರಕವಾಗಿ ಪರಿಸರ ರಕ್ಷಣೆ, ಪೋಷಣೆ ನಿಟ್ಟಿನಲ್ಲಿ ಹಿಂದೂ ಅಧ್ಯಾತ್ಮಿಕ ಸೇವಾ ಮೇಳ, ಆರ್‌ ಎಸ್‌ಎಸ್‌ನ ಪರ್ಯಾವರಣ ಸಂರಕ್ಷಣೆ ಗತಿ ವಿಧಿಯ ಸಹಭಾಗಿತ್ವದಲ್ಲಿ ಆ.30ರಂದು ಬೆಳಗ್ಗೆ 10ರಿಂದ 12ರವರೆಗೆ ರಾಷ್ಟ್ರದಾದ್ಯಂತ ಪ್ರಕೃತಿ ಮಾತೆಗೆ ವಂದನಾ ಅಭಿಯಾನ ನಡೆಯಲಿದೆ.

5 ಲಕ್ಷಕ್ಕೂ ಅಧಿಕ ಮನೆಗಳ ಗುರಿ: ಪ್ರಕೃತಿ ಮಾತೆಗೆ ವಂದನಾ ಕಾರ್ಯಕ್ರಮ ಪ್ರತಿ ಮನೆಗಳಲ್ಲೂ ನಡೆಯಬೇಕೆಂಬುದು ಸಂಘದ ಆಶಯ. ಇದಕ್ಕಾಗಿ ಈಗಾಗಲೇ ಅಗತ್ಯ ಮಾಹಿತಿ ರವಾನೆ ಹಾಗೂ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು, ಕೋವಿಡ್‌-19 ಹಿನ್ನೆಲೆಯಲ್ಲಿ ಆನ್‌ಲೈನ್‌ ಮೂಲಕ ನೋಂದಣಿಗೆ ಸೂಚಿಸಲಾಗಿದೆ. ಸಂಘದ ಕರೆಗೆ ದೇಶಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, 1.30ಲಕ್ಷಕ್ಕೂ ಅಧಿಕ ಜನರು ತಮ್ಮ  ಮನೆಗಳಲ್ಲಿ ಪ್ರಕೃತಿ ವಂದನಾ ಕಾರ್ಯಕ್ಕೆ ನೋಂದಣಿ ಮಾಡಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ 959 ಜನರು ನೋಂದಣಿ ಮಾಡಿಸಿದ್ದು, ಈ ಭಾಗದಲ್ಲಿ ಸುಮಾರು 10 ಸಾವಿರ ಮನೆಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 5 ಲಕ್ಷ ಮನೆಗಳು, ದೇಶಾದ್ಯಂತ ಸುಮಾರು 1 ಕೋಟಿಗೂ ಅಧಿಕ ಮನೆಗಳಲ್ಲಿ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯುವ ವಿಶ್ವಾಸವನ್ನು ಸಂಘ ಹೊಂದಿದೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸದೆಯೇ ಅನೇಕ ಗ್ರಾಮೀಣರು ಇನ್ನಿತರರು ವಂದನಾ ಕಾರ್ಯದಲ್ಲಿ ತೊಡಗುವ ಸಾಧ್ಯತೆಯೂ ಇದೆ.

ಪೂಜೆ ವಿಧಾನ ಹೇಗೆ? : ಪ್ರಕೃತಿ ಮಾತೆಗೆ ವಂದನೆ ಸಲ್ಲಿಸುವ ಕಾರ್ಯವನ್ನು ಅವರವರ ಪದ್ಧತಿಯಲ್ಲಿ ಕೈಗೊಳ್ಳಬಹುದಾಗಿದೆ. ಸಂಘದ ಮಾರ್ಗಸೂಚಿಯಂತೆ ಸುಮಾರು 10-15 ನಿಮಿಷಗಳ ಕಾಲ ಪೂಜಾ ಕಾರ್ಯ ನಡೆಯಲಿದೆ. ಜನರು ತಮ್ಮ ಮನೆಯ ಇಲ್ಲವೆ ಸುತ್ತಮುತ್ತಲ ಪರಿಸರದಲ್ಲಿರುವ ಗಿಡಗಳಿಗೆ ಪೂಜೆ ಸಲ್ಲಿಸಬೇಕಾಗಿದೆ. ಮನೆಯ ಅಂಗಳವನ್ನು ಸ್ವತ್ಛಗೊಳಿಸಿ, ರಂಗೋಲಿ ಹಾಕಿ ಶೃಂಗಾರಗೊಳಿಸಬೇಕಿದೆ. ಪೂಜೆ ಸಲ್ಲಿಕೆಯಲ್ಲಿ ಐದು ನಿಮಿಷ ಪ್ರಕೃತಿ ಮಾತೆಯ ಮಹತ್ವದ ಕುರಿತು ವರ್ಣನೆ ನಡೆಯಲಿದೆ. ನಂತರ ಗಿಡಕ್ಕೆ ಅರಿಶಿಣ

ಹಚ್ಚಿದ ದಾರ(ಕಂಕಣ)ವನ್ನು ಕಟ್ಟಲಾಗುತ್ತಿದ್ದು, ಇದು ಪರಿಸರ ಸಂರಕ್ಷಣೆಯ ಸಂಕಲ್ಪವಾಗಿದೆ. ಪೂಜೆಯಲ್ಲಿ ತೊಡಗಿದವರು ಕಂಕಣವನ್ನು ಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ನಮ್ಮನ್ನು ತೊಡಗಿಸಿಕೊಳ್ಳುತ್ತೇವೆಂದು, ಜತೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಗಿಡ-ಮರಗಳನ್ನು ಪೋಷಣೆ ಮಾಡುತ್ತೇವೆಂಬ ಸಂಕಲ್ಪ ಮಾಡುತ್ತಾರೆ. ಪೂಜೆ ಸಲ್ಲಿಸಿದ ಗಿಡಕ್ಕೆ ಆರತಿ ಬೆಳಗುತ್ತಾರೆ. ಬರಿ ಗಿಡ-ಮರಗಳಿಷ್ಟೇ ಅಲ್ಲ ನೀರು ಸಹ ಪ್ರಕೃತಿಯ ಭಾಗವಾಗಿದ್ದು, ಜನರು ತಮ್ಮ ತಮ್ಮ ಗ್ರಾಮಗಳಲ್ಲಿ ಕಲ್ಯಾಣಿ, ಕೆರೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಲ್ಯಾಣಿ-ಕೆರೆಗಳ ಸಂರಕ್ಷಣೆ ಸಂಕಲ್ಪ ಮಾಡಬೇಕಾಗಿದೆ. ಪ್ರಕೃತಿ ಮಾತೆ ಬಗ್ಗೆ ಮುಂದಿನ ಪೀಳಿಗೆಗೆ ಮನನ ಮಾಡುವ, ಅವರಲ್ಲೂ ಪರಿಸರ ಪ್ರೀತಿ, ನಮ್ಮ ಪೂರ್ವಜರು ತೋರುತಿದ್ದ ಗೌರವ, ಭಕ್ತಿಯ ಭಾವನೆಯ ಪರಂಪರೆ, ಸಂಸ್ಕೃತಿಯ ಬೀಜ ಬಿತ್ತನೆ ಕಾರ್ಯಕ್ಕೆ ಆರ್‌ಎಸ್‌ಎಸ್‌ ಮಹತ್ವದ ಹೆಜ್ಜೆ ಇರಿಸಿದೆ.

ಕೋವಿಡ್ ನಂತರದಲ್ಲಿ ಪ್ರತಿಯೊಬ್ಬರು ಜೀವನಶೈಲಿ ಬಗ್ಗೆ ಆತ್ಮಾವಲೋಕನಕ್ಕಿಳಿಯಬೇಕಾಗಿದೆ. ಪ್ರಕೃತಿ ಮಾತೆಯ ಮಹತ್ವ ಹಾಗೂ ನಾವು ತೋರಬೇಕಾದ ಗೌರವ, ಪೋಷಣೆಯ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಇದರ ಭಾಗವಾಗಿಯೇ ಸಂಘ ಪ್ರಕೃತಿ ವಂದನಾ ಕಾರ್ಯಕ್ರಮಕ್ಕೆ ಮುಂದಾಗಿದೆ. ಪರಿಸರ, ಕೃಷಿ, ಸಂಸ್ಕೃತಿ, ಸಂಸ್ಕಾರ, ಪರಂಪರೆ ಬಗ್ಗೆ ನಮ್ಮ ಪೂರ್ವಜರ ಭಾವನೆ, ಪರಿಕಲ್ಪನೆಯನ್ನು ನೆನಪಿಸುವ ಕಾರ್ಯವನ್ನು ಇದರ ಮೂಲಕ ಮಾಡಲಾಗುತ್ತಿದೆ. – ಅಮರನಾಥ, ಪರ್ಯಾವರಣ ಸಂರಕ್ಷಣೆ ಗತಿ ವಿಧಿಯ ಉತ್ತರ ಪ್ರಾಂತ ಪ್ರಮುಖ

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.