ಯಕ್ಷಗಾನ ಕ್ಷೇತ್ರ: ಸಮರ್ಪಕ ದಾಖಲೆ ಕೇಳದ ಹಿನ್ನೆಲೆ; ಅನರ್ಹರಿಗೆ ದಕ್ಕಿದೆ ಸೌಲಭ್ಯ!

ಮಾಹಿತಿ ಕೊರತೆ ಅರ್ಹ ಕಲಾವಿದರಿಗೆ ಸಿಗದ ನೆರವು

Team Udayavani, Aug 30, 2020, 2:49 PM IST

ಯಕ್ಷಗಾನ ಕ್ಷೇತ್ರ: ಸಮರ್ಪಕ ದಾಖಲೆ ಕೇಳದ ಹಿನ್ನೆಲೆ; ಅನರ್ಹರಿಗೆ ದಕ್ಕಿದೆ ಸೌಲಭ್ಯ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ

ಕೋಟ : ಕೋವಿಡ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ತೆಂಕು, ಬಡಗಿನ ಯಕ್ಷಗಾನ ಕಲಾವಿದರಿಗೆ ಸರಕಾರವು ತಲಾ 2 ಸಾವಿರ ರೂ.ಗಳಂತೆ ಪರಿಹಾರ ಧನ ಪ್ಯಾಕೇಜ್‌ ಘೋಷಿಸಿತ್ತು. ಆದರೆ ಮಾಹಿತಿ ಕೊರತೆಯಿಂದ ಹಲವು ಅರ್ಹ ಕಲಾವಿದರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅರ್ಜಿ ಹಾಕಿದವರಿಗೆಲ್ಲ ನೀಡಿದ್ದರಿಂದ ಅನರ್ಹರಿಗೂ ಪರಿಹಾರ ಧನ ಒಲಿದಿದೆ!

ಕಲಾವಿದರ ಪರ ಕೆಲಸ ಮಾಡುವ ಹಲವು ಸಂಸ್ಥೆಗಳು ಪರಿಹಾರಧನಕ್ಕೆ ಅರ್ಜಿಗಳನ್ನು ಇಲಾಖೆಗೆ ತಲಪಿಸುವ ಕಾರ್ಯ ಮಾಡಿದ್ದವು. 2 ಸಾವಿರಕ್ಕೂ ಹೆಚ್ಚು ಯಕ್ಷಗಾನ ಕಲಾವಿದರು 40 ಲಕ್ಷ ರೂ.ಗೂ ಹೆಚ್ಚಿನ ಮೊತ್ತದ ಪರಿಹಾರ ಧನ ಪಡೆದಿದ್ದಾರೆ. ಕಲಾವಿದ ಎನ್ನುವುದನ್ನು ಸಾಬೀತುಪಡಿಸುವ ಮತ್ತು 10 ವರ್ಷದ ಸೇವಾವಧಿಯನ್ನು ದೃಢೀಕರಿಸುವ ಪೂರಕ ದಾಖಲೆಗಳನ್ನು ಪಡೆಯದ ಕಾರಣ ಬೇರೆ-ಬೇರೆ ಉದ್ಯೋಗದಲ್ಲಿದ್ದ ನೂರಾರು ಮಂದಿ ತಾವು ಕೂಡ ಕಲಾವಿದರೆಂದು ಘೋಷಿಸಿ ಪರಿಹಾರ ಪಡೆದುಕೊಂಡಿದ್ದಾರೆ.

ಸಂಘಟನೆ ಕೊರತೆ
ತೆಂಕು-ಬಡಗು ತಿಟ್ಟಿನಲ್ಲಿ ವೃತ್ತಿ ಮತ್ತು ಹವ್ಯಾಸಿ ಕಲಾವಿದರಾಗಿ ದುಡಿಯುತ್ತಿರುವ ಕಲಾವಿದರ ಬಗ್ಗೆ ನಿಖರ ದಾಖಲೆಗಳಿಲ್ಲ. ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಸಂಘಟಿಸುವ ಸಂಘಟನೆಗಳ ಕೊರತೆಯೂ ಇದೆ. ಅನರ್ಹರು ಪರಿಹಾರ ಧನ ಪಡೆದಿರುವ ಕುರಿತು ತನಿಖೆಯಾಗಬೇಕೆನ್ನುವುದು ಕಲಾವಿದರ ಆಗ್ರಹ.

ಯಕ್ಷಗಾನ ಅಕಾಡೆಮಿಗೆ ಬಂದ ಅರ್ಜಿ ರವಾನೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪರಿಹಾರ ಧನ ನೀಡಲಾಗಿದ್ದು, ಯಕ್ಷಗಾನ ಅಕಾಡೆಮಿಗೆ ನೇರ ಸಂಬಂಧವಿಲ್ಲ. ಅರ್ಹರಿಂದ ಅರ್ಜಿಗಳನ್ನು ಪಡೆದು ಸಂಸ್ಕೃತಿ ಇಲಾಖೆಗೆ ರವಾನಿಸುವ ಕೆಲಸವನ್ನು ಅಕಾಡೆಮಿ ಪ್ರಾಮಾಣಿಕವಾಗಿ ಮಾಡಿದೆ. ಈ ನಡುವೆ ಮಾಹಿತಿ ಕೊರತೆ, ಬ್ಯಾಂಕ್‌ ಖಾತೆ, ಮೊಬೈಲ್‌ ಇಲ್ಲದಿರುವುದು, ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡದಿರುವ ಕಾರಣಕ್ಕೆ ಹಲವು ಅರ್ಹರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸದ ಕಾರಣ ಅನರ್ಹರೂ ಅನುದಾನ ಪಡೆದಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
– ಎಂ.ಎ. ಹೆಗ್ಡೆ , ಅಧ್ಯಕ್ಷರು ಯಕ್ಷಗಾನ ಅಕಾಡೆಮಿ

ಮಾಹಿತಿಯ ಕೊರತೆೆ
ಸರಕಾರದ ಯೋಜನೆಗಳ ಕುರಿತು ಕಲಾವಿದರಿಗೆ ಸೂಕ್ತ ಮಾಹಿತಿ ನೀಡುವ ಸಂಘಟನೆಗಳ ಕೊರತೆ ಇದೆ. ಸರಿಯಾದ ದಾಖಲೆಗಳನ್ನು ಕೇಳಿರದ ಕಾರಣ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳದ ಅನೇಕ ಮಂದಿ ಅನುದಾನ ಪಡೆದಿದ್ದಾರೆ, ಹಲವು ಅರ್ಹರು ವಂಚಿತರಾಗಿದ್ದಾರೆ.
– ಸದಾಶಿವ ಅಮೀನ್‌, ಯಕ್ಷಗಾನ ಕಲಾವಿದ

ಟಾಪ್ ನ್ಯೂಸ್

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.