ರೈತರ ಪರಿಶ್ರಮ ಅರಿಯಬೇಕಿದೆ


Team Udayavani, Aug 31, 2020, 12:45 PM IST

Agri

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದ ಬೆನ್ನೆಲುಬು ರೈತ. ಆತನ ಬೆವರು ಹನಿಯೂ ಶ್ರಮದ ಅನ್ವರ್ಥಕ.

ಜೀವನದಲ್ಲಿ ಕಷ್ಟಪಟ್ಟು ಬಿಸಿಲು, ಮಳೆ ಎನ್ನದೇ ಮೈ ಬಗ್ಗಿಸಿ ದುಡಿದು ಬೆಳೆ ಬೆಳೆಯುತ್ತಾನೆ.

ಫ‌ಸಲು ಬೆಳೆದು ಮಾರಾಟ ಮಾಡುತ್ತಾನೆ. ಲಾಭಕ್ಕಿಂತ ಹೆಚ್ಚು ಆತನ ಫ‌ಸಲಿನಿಂದ ನಾವೆಲ್ಲರೂ ಮೂರು ಹೊತ್ತು ಊಟ ಮಾಡುತ್ತೇವೆ.

ಆದರೆ ಆತನ ಜೀವನದ ಬಗ್ಗೆ ನಾವೇನೂ ಚಿಂತಿಸುವುದಿಲ್ಲ ಎಂಬುದು ಲೋಕರೂಢಿ.

ದೇಶದಲ್ಲಿ ಕೃಷಿಕರು ಇಲ್ಲದಿದ್ದರೇ ದೇಶವೇ ಉಪವಾಸದಿಂದ ಮಲಗಬೇಕಾಗುತ್ತದೆ ಎಂಬುದು ಗಾದೆಯಷ್ಟೇ ರೂಢಿಯಾಗಿದೆ.

ಆದರೆ ಆತನದು ಬೆಂಕಿಯಲ್ಲಿ ಬೆಂದ ಜೀವನ. ಇಡೀ ದಿನದ ಸಮಯ, ದೇಹ, ಮನಸ್ಸೆಲ್ಲ ಆತ ತನ್ನ ಫ‌ಸಲಿಗಾಗಿ ಇಡುತ್ತಾನೆ. ಇದರಲ್ಲಿ ತನ್ನ ಒಪ್ಪೊತ್ತಿನ ಊಟವನ್ನು ಕೂಡ ಮರೆತು ಬಿಡುತ್ತಾನೆ. ರಾಜಕಾರಣಿಗಳ ಭಾಷಣದಲ್ಲಿ ಬಂದೊಗುವ ರೈತನು ದೇಶದ ಬೆನ್ನೆಲುಬು ಎಂಬ ಮಾತು ಬಿಟ್ಟರೇ ಆತನ ಕಷ್ಟ, ಸುಖಕ್ಕೆ ನೆರವಾಗುವುದು ತುಂಬಾ ಕಡಿಮೆ. ಈ ನಡುವೆ ನಾವು ರೈತ ಮತ್ತು ಕೃಷಿ ಕ್ಷೇತ್ರದ ಬಗ್ಗೆ ಧನಾತ್ಮಕ ಚಿಂತನೆ ಮಾಡುವುದು ಅಗತ್ಯವಿದೆ.

ಉದ್ಯೋಗಕ್ಕಾಗಿ ಎಷ್ಟೋ ಜನರು ಊರು ತೊರೆದು ನಗರಕ್ಕೆ ಹೋದರೆ, ರೈತ ಮಾತ್ರ ತನಗೆ ಏನೇ ಕಷ್ಟ ಬಂದರೂ ಎದೆಗುಂದದೆ ಕೃಷಿ ಕಾಯಕದಲ್ಲಿ ಮುಂದಾಗುತ್ತಾನೆ. ಆದರೆ ದಿಢೀರನೆ ಅಪ್ಪಳಿಸಿದ ಕೊರೊನಾದಿಂದಾಗಿ ಆತನ ಬದುಕು ನಿಂತ ನೀರಾಗಿದೆ. ಜಮೀನಿನಲ್ಲಿ ಕಟಾವಿಗೆ ಬಂದ ಬೆಳೆಗೆ ಸರಿಯಾದ ಬೆಲೆ ಇಲ್ಲದೆ ಮಾರುಕಟ್ಟೆಯ ಸಮಸ್ಯೆ ಉಂಟಾಗುತ್ತದೆ. ಹೀಗೆ ರೈತನ ಬದುಕಿನ ಉದ್ದಕ್ಕೂ ಸೋಲಿನ ಸರಮಾಲೆಗಳು. ಈಗಲೂ ಅದೇ ಪರಿಸ್ಥಿತಿ ಎಲ್ಲಿಗೆ ಹೋಗಬೇಕು ಈ ರೈತ. ಸರಕಾರಗಳು ರೈತರ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ ಕೆಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಆದರೆ ಅವುಗಳ ಲಾಭ ರೈತರಿಗೆ ಎಷ್ಟರ ಮಟ್ಟಿಗೆ ತಲುಪುತ್ತಿದೆ ಎಂಬುದು ಮಾತ್ರ ಪ್ರಶ್ನೆಯಾಗಿ ಉಳಿದಿದೆ. ರೈತರ ಆತ್ಮಹತ್ಯೆ ಹೆಚ್ಚುತ್ತಲೇ ಇವೆ.

ಕೊರೊನಾ ಬಂತು ಎಂದು ನಗರಗಳನ್ನು ತೊರೆದು ಹಳ್ಳಿಗಳಿಗೆ ಮರಳಿದ ಘಟನೆಗಳು ಸಾಕಷ್ಟಿವೆ. ಅದೇ ರೀತಿ ರೈತನೂ ಜೀವನ ನಡೆಸುವುದು ಕಷ್ಟ ಎಂದು ಬೇಸಾಯ ಮಾಡುವುದನ್ನು ಬಿಟ್ಟು ಬೇರೆ ವೃತ್ತಿಗೆ ತಿರುಗಿದ್ದರೆ ನಮ್ಮೆಲ್ಲರ ಗತಿ ಏನಾಗುತ್ತಿತ್ತು ಎಂದು ಯೋಚನೆ ಮಾಡಬೇಕು. ರೈತ ಬೆಳೆದ ಆಹಾರ ಧಾನ್ಯಗಳು ಕಡಿಮೆ ಬೆಲೆಯಲ್ಲಿ ದೊರೆಯಬೇಕು. ಆದರೆ ರೈತನ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಬಾರದೇ? ಕೇವಲ ಸೆಲೆಬ್ರಿಟಿಗಳು ಮಾತ್ರ ಹೀರೋಗಳಲ್ಲ. ರೈತರು ನಿಜವಾದ ಹೀರೋಗಳು. ರೈತರಿಗೆ ಸರಿಯಾದ ಗೌರವವನ್ನು ನೀಡುವುದು ಪ್ರತಿಯೊಬ್ಬನ ಕರ್ತವ್ಯ.

 ರಂಜನ್‌ ಪಿ.ಎಸ್‌., ಸಂತ ಫಿಲೋಮಿನಾ  ಕಾಲೇಜು, ಮೈಸೂರು 

 

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.