ಒಳ ಮೀಸಲಾತಿಯಿಂದ ಎಲ್ಲ ಸಮುದಾಯಗಳಿಗೆ ಸಮಾನವಾದ ನ್ಯಾಯ: ಕೆ.ಎಚ್. ಮುನಿಯಪ್ಪ


Team Udayavani, Aug 31, 2020, 12:46 PM IST

muniyappa

ಬೆಂಗಳೂರು: ಇತ್ತೀಚೆಗೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿಯ ವಿಷಯದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ಹೇಳಿದೆ. ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳು ಇದ್ದು ಅವುಗಳಲ್ಲಿ ಮಾದಿಗ, ಛಲವಾದಿ, ಬೊವಿ, ಲಂಬಾಣಿ ಹಾಗೂ ಕೊರಮ, ಕೊರಚ ಸಮುದಾಯಗಳಿಗೆ ಅನ್ಯಾಯವಾಗಬಾರದು ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನ ಪ್ರಕಾರ ಎಲ್ಲ ಸಮುದಾಯಗಳಿಗೂ ನ್ಯಾಯ ದೊರೆಕಬೇಕು ಯಾರಿಗೂ ಅನ್ಯಾಯ ಆಗಬಾರದು. ಹೀಗಾಗಿ ಎಲ್ಲರಿಗೂ ನ್ಯಾಯ ದೊರೆಯಲು ಈ ಆದೇಶವನ್ನು ಸ್ವಾಗತಿಸುತ್ತೇವೆ.

2004ರಲ್ಲಿ ಎಸ್ ಎಂ. ಕೃಷ್ಣ ಸರ್ಕಾರ ನೇಮಿಸಿದ್ದ ಸದಾಶಿವ ಆಯೋಗ ರಚನೆ ಮಾಡಿತ್ತು. ಆ ಆಯೋಗ 2012ರಲ್ಲಿ ವರದಿ ಸಲ್ಲಿಸಿತ್ತು. ಅವರ ವರದಿ ಜಾರಿಯಾಗಬೇಕು. ಸರ್ಕಾರಗಳು ಹೋಗುತ್ತವೆ ಬರುತ್ತವೆ. ಆದರೆ, ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುವವರು ಕಡಿಮೆ, ಕೆಲವರು ಒಳ ಮೀಸಲಾತಿಯಿಂದ ತಾರತಮ್ಯ ಹೆಚ್ಚುತ್ತದೆ ಎಂದು ಹೇಳುತ್ತಾರೆ. ಅದು ಸರಿಯಲ್ಲ. ಇದರಿಂದ ಎಲ್ಲ ಸಮುದಾಯಗಳಿಗೆ ಸಮಾನವಾದ ನ್ಯಾಯ ದೊರೆಯುತ್ತದೆ. ರಾಜ್ಯ ಸರ್ಕಾರ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದರು.

2018ರಲ್ಲಿ ಹುಬ್ಬಳ್ಳಿಯಲ್ಲಿ ಮಾದರ ಸಮುದಾಯದ ಸಮಾವೇಶ ನಡೆಸಿದಾಗ ಮೂರು ಪಕ್ಷಗಳ ನಾಯಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದರು. ಈಗಿನ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತರಲು ಅಧಿವೇಶನದಲ್ಲಿ ತಂದು ಎಲ್ಲ ಪಕ್ಷಗಳ ಒಪ್ಪಿಗೆ ಪಡೆದು ಒಕ್ಕೊರಲಿನಿಂದ ಪಾಸ್ ಮಾಡಿ ಸಂಸತ್ತಿಗೆ ಕಳುಹಿಸಿಕೊಡಬೇಕು. ಸಂಸತ್ತು ಸಂವಿಧಾನ ತಿದ್ದುಪಡಿ ತಂದು ಕಾಯ್ದೆ ಜಾರಿಗೆ ತರಬೇಕಾಗುತ್ತದೆ. ಕೇಂದ್ರ ಸರ್ಕಾರ ಕೂಡ ಇದನ್ನು ತಿದ್ದುಪಡಿ ಮಾಡಿ  ಆದಷ್ಟು ಬೇಗ ನ್ಯಾಯ ದೊರಕಿಸಿ ಕೊಡಬೇಕು.

ಆಂಧ್ರ, ತೆಲಂಗಾಣ,  ಕರ್ನಾಟಕ ರಾಜ್ಯಗಳಲ್ಲಿ ಇದರ ತಿದ್ದುಪಡಿಗೆ ಬೇಡಿಕೆ ಹೆಚ್ಚಿದೆ. ಆಂಧ್ರದಲ್ಲಿ ರಾಜಶೇಖರ್ ರೆಡ್ಡಿ ಕಾಲದಲ್ಲಿ ತಿದ್ದುಪಡಿ ಮಾಡಿದ್ದರಿಂದ ಅನೇಕ ಸಮುದಾಯಗಳಿಗೆ ನ್ಯಾಯ ದೊರೆತಿದೆ. ರಾಜ್ಯದಲ್ಲಿ ಯಡಿಯೂರಪ್ಪ ಬಸವಣ್ಣನ ಅನುಯಾಯಿಗಳಾಗಿದ್ದಾರೆ. ಅವರು ಸಮಾನತೆಯ ಪರವಾಗಿದ್ದಾರೆ. ಅವರು ನ್ಯಾಯ ಕೊಡಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವ ಆಯೋಗದ ವರದಿ ಜಾರಿಗೆ ದಲಿತರಲ್ಲಿ ಎಡ ಬಲ ಎಂಬ ಭೇದ ಇಲ್ಲ. ಖರ್ಗೆ, ಪರಮೇಶ್ವರ್ ಎಲ್ಲರೂ ಇದರ ಜಾರಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಡೆದ ಜಾತಿ ಗಣತಿ ವರದಿಯು ಜಾರಿಗೊಳಿಸಲು ಯಾರ ವಿರೋಧವೂ ಇಲ್ಲ ಎಂದರು.

ಎನ್. ಚಂದ್ರಪ್ಪ ಮಾತನಾಡಿ, ರಾಜ್ಯ ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದೆ. ಅವರು ಆದಷ್ಟು ಬೇಗ ಈ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಈ ಮೀಸಲಾತಿಯಿಂದ ಲಂಬಾಣಿ ಬೋವಿ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ. ಎಲ್ಲರೂ ಸಮಾನವಾಗಿ ಹಂಚಿಕೊಳ್ಳಬಹುದು ಎಂದರು.

ಧರ್ಮಸೇನಾ ಮಾತನಾಡಿ ರಾಜ್ಯದಲ್ಲಿ ದಲಿತ ಸಮುದಾಯದಲ್ಲಿ ಬೇರೆ ಬೇರೆ ಜಾತಿಗಳನ್ನು ಸೇರಿಸಿ ಅಶ್ಪ್ರಶ್ಯರಿಗೆ ಅನ್ಯಾಯವಾಗುತ್ತಿದೆ. 43 ವರ್ಷಗಳಿಂದ ನಾವು ಅನ್ಯಾಯ ಅನುಭವಿಸುತ್ತ ಬಂದಿದ್ದೇವೆ. ಒಂದು ವರ್ಗಕ್ಕೆ ಅನ್ಯಾಯವಾದರೆ ಅದು ಇಡೀ ದೇಶದ ಅಭಿವೃದ್ಧಿಗೆ ಹೊಡೆತವಾಗುತ್ತದೆ. ರಾಜ್ಯ ಸರ್ಕಾರ ಸಂಪುಟದಲ್ಲಿಯೇ ಚರ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.