ಸೀತಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕ್ರಮ


Team Udayavani, Aug 31, 2020, 2:06 PM IST

ಸೀತಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕ್ರಮ

ಕೋಲಾರ: ತಾಲೂಕಿನ ಸೀತಿ ದೇವಾಲಯದ ಈ ಸುಂದರ ಪ್ರದೇಶದಲ್ಲಿ ಉದ್ಯಾನ, ಮಕ್ಕಳ ಮನರಂಜನೆಗಾಗಿ ಆಟೋಪಕರಣಗಳ ಅಳವಡಿಸುವ ಮೂಲಕ ಎಲ್ಲರ ಸಹಕಾರದಿಂದ ಇದನ್ನು ಜಿಲ್ಲೆಯ ಪ್ರಮುಖ ಪ್ರವಾಸಿತಾಣ ವಾಗಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.

ತಾಲೂಕಿನ ಸೀತಿ ಬೆಟ್ಟದಲ್ಲಿ ಕೋಲಾರ ಜಿಲ್ಲಾಡಳಿತ, ಅರಣ್ಯ ಇಲಾಖೆ, ಆಯಿಸ್ಕಾ ಇಂಟರ್‌ ನ್ಯಾಷನಲ್‌ ಕರ್ನಾಟಕ ವಲಯ ಇವರ ಸಂಯುಕ್ತಾಶ್ರಯದಲ್ಲಿ ಅಂತರ ರಾಷ್ಟ್ರೀಯ ಜೀವಿ ವೈವಿಧ್ಯ ವರ್ಷಾಚರಣೆ ಅಂಗವಾಗಿ ಸೀತಿ ಬೆಟ್ಟಕ್ಕೆ ಹಸಿರು ಹೊದಿಕೆ ಹಾಗೂ “ಬೋಳು ಬೆಟ್ಟಕ್ಕೆ ಬನದ ಮೆರಗು’ ಎಂಬ ನಿವೃತ್ತ ಐಎಎಸ್‌ ಅಧಿಕಾರಿ ಅಮರನಾರಾಯಣ ಅವರ ಪರಿಕಲ್ಪನೆಯಲ್ಲಿ ಸೀತಿ ಬೆಟ್ಟದಲ್ಲಿ ವಿವಿಧ ಜಾತಿಯ ಒಂದು ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಸೀತಿ ಬೆಟ್ಟದ ಬೈರವೇಶ್ವರ ಸನ್ನಿಧಿ ಸಹಾ ಒಂದು ಪ್ರವಾಸಿ ತಾಣವಾಗಿದೆ. ಆದ್ದರಿಂದ ಬೆಟ್ಟದ ಕೆಳಗೆ ಉತ್ತಮ ಪಾರ್ಕ್‌ ವ್ಯವಸ್ಥೆ ಮಾಡುತ್ತೇವೆ, ಜೊತೆಗೆ ಪುಟಾಣಿ ಮಕ್ಕಳಿಗೆ ಆಟೋಪಕರಣಗಳನ್ನು ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಆಶ್ವಾಸನೆ ನೀಡಿ ಅಕ್ಟೋಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದರು.

ಬೆಟ್ಟದಲ್ಲಿ ಚಾರಣ: ದೇವಾಲಯದಿಂದ ಬೆಟ್ಟದ ಮೇಲಕ್ಕೆ 1 ಕಿ.ಮೀ. ದೂರ ಚಾರಣ ಮಾಡಿ, ಅಲ್ಲಿನ ಸ್ಥಿತಿ ಗಮನಿಸಿದ ಡೀಸಿ, ಓರ್ವ ಚಾರಣ ಮಾಡುವ ಕ್ರೀಡಾಪಟುವಿನಂತೆ ಬೆಟ್ಟದಲ್ಲಿ ಸುತ್ತಾಡಿ, ಇಲ್ಲಿ ಆಗಬೇಕಿರುವ ಕೆಲಸಗಳ ಕುರಿತು ಅರಿತುಕೊಂಡರು. ದೇವಾಲಯಕ್ಕೆ ಉತ್ತಮವಾದ ಕಾಂಪೌಂಡ್‌, ಕುಡಿಯುವ ನೀರಿನ ವ್ಯವಸ್ಥೆ, ರಾತ್ರಿ ಸಮಯದಲ್ಲಿ ಬೆಳಕಿರಲು ಹೈಮಾಸ್ಕ್ ಸೈಟ್‌ನ್ನು ಹಾಕಲಾಗಿದ್ದು, ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ ಎಂದರು.

ಸೀತಿ ಬೆಟ್ಟ ಸ್ವಚ್ಛತೆಗೆ ಸೂಚನೆ: ಸೀತಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಸ್ವತ್ಛತೆ ಇಲ್ಲದೆ ಗಬ್ಬು ನಾರುತ್ತಿರುವ ದೃಶ್ಯ ಕಂಡ ಜಿಲ್ಲಾಧಿಕಾರಿ, ಇಂತಹ ಸುಂದರ ಪರಿಸರವಿರುವ ತಾಣದ ಪಕ್ಕದಲ್ಲಿ ಸ್ವತ್ಛತೆಯೂ ಅಗತ್ಯವಾಗಿದೆ ಎಂದರು. ನಿವೃತ್ತ ಐಎಎಸ್‌ ಅಧಿಕಾರಿ ಅಮರನಾಥ್‌, ಪರಿಸರ ಸಂರಕ್ಷಣೆಯ ಕಾಳಜಿಯಿಂದ ಗುಡ್ಡದಲ್ಲಿ ಸಾವಿರ ಗಿಡ ನೆಡುವ ಕಾರ್ಯ ಮಾಡುತ್ತಿದ್ದು, ಈ ಗಿಡಗಳನ್ನು ಉಳಿಸಿ ಬೆಳೆಸುವ ಕಾಯಕ್ಕೆ ಸಹಕಾರ ಕೋರಿದರು.

ಜಿಪಂ ಉಪಕಾರ್ಯದರ್ಶಿ ಕೆ,ಪಿ ಸಂಜೀವಪ್ಪ, ಸಹಾಯಕ ಯೋಜನಾಧಿಕಾರಿ ಗೋವಿಂದ ಗೌಡ, ವಸಂತ್‌ ಗೌಡ, ಅರಣ್ಯ ಇಲಾಖೆ ದೇವರಾಜು, ಹರ್ಷವರ್ಧನ್‌, ಬಿಂದು, ಇಒ ಬಾಬು, ಕೋಲಾರ ಐಇಸಿ ಸಂಯೋಜಕ ಭಾಸ್ಕರ ರೆಡ್ಡಿ, ಗ್ರಾಪಂ ಪಿಡಿಒ ಲಕ್ಷ್ಮೀಪತಿ, ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ, ಸೀತಿಹೊಸೂರು ಮುರಳಿಗೌಡ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.