ಚೆನ್ನೈ ಜೊತೆ ಸುರೇಶ್‌ ರೈನಾ ನಂಟು ಬೆಸೆಯುವುದು ಡೌಟು!


Team Udayavani, Aug 31, 2020, 5:28 PM IST

ಚೆನ್ನೈ ಜೊತೆ  ಸುರೇಶ್‌ ರೈನಾ ನಂಟು ಬೆಸೆಯುವುದು ಡೌಟು!

ಚೆನ್ನೈ : ಸುರೇಶ್‌ ರೈನಾ ದಿಢೀರನೇ ಐಪಿಎಲ್‌ನಿಂದ ಹೊರಬಂದ ಘಟನೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಿಎಸ್‌ಕೆ ತಂಡದ ಸ್ಟಾರ್‌ ಆಟಗಾರ, ಕಪ್ತಾನ ಧೋನಿಯ ಬಲಗೈ ಬಂಟನಂತಿದ್ದ ರೈನಾ ಯುಎಇಗೆ ಹೋದ ಕೆಲವೇ ದಿನಗಳಲ್ಲಿ ಇಂಥದೊಂದು ನಿರ್ಧಾರಕ್ಕೆ ಬರುತ್ತಾರೆಂದು ಯಾರೂ ಭಾವಿಸಿರಲಿಲ್ಲ.

ಚೆನ್ನೈ ತಂಡದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ ಆಗಿರುವ ಸುರೇಶ್‌ ರೈನಾ ಈ ರೀತಿ ವರ್ತಿಸಿದ್ದು ಅನೇಕರ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿ ಚೆನ್ನೈ ಫ್ರಾಂಚೈಸಿ ರೈನಾ ಅವರ ಈ ನಡೆಗೆ ಅಚ್ಚರಿ, ಆಘಾತದ ಜತೆಗೆ ಆಕ್ರೋಶವನ್ನೂ ವ್ಯಕ್ತಪಡಿಸಿದೆ. ಸಿಎಸ್‌ಕೆ ಮಾಲಕ, ಬಿಸಿಸಿಐ ಮಾಜಿ ಅಧ್ಯಕ್ಷ ಎನ್‌. ಶ್ರೀನಿವಾಸನ್‌ ಇದರಿಂದ ಗರಂ ಆಗಿದ್ದಾರೆ ಎಂಬುದೊಂದು ಸುದ್ದಿ. ಇದನ್ನೆಲ್ಲ ಗಮನಿಸುವವಾಗ ಚೆನ್ನೈ ಮತ್ತು ರೈನಾ ನಂಟು 2020ಕ್ಕಷ್ಟೇ ಅಲ್ಲ, ಶಾಶ್ವತವಾಗಿ ಕಡಿಯುವ ಸೂಚನೆ ಲಭಿಸಿದೆ.

ಗಂಭೀರ ಸಮಸ್ಯೆಯಲ್ಲ…
“ಚೆನ್ನೈ ತಂಡದಲ್ಲಿ ಕೋಚ್‌, ನಾಯಕ ಮತ್ತು ಮ್ಯಾನೇಜರ್‌ಗೆ ಪ್ರತ್ಯೇಕ ಹೊಟೇಲ್‌ ಕೊಠಡಿ ನೀಡಲಾಗಿತ್ತು. ರೈನಾಗೂ ಇದರ ವ್ಯವಸ್ಥೆ ಮಾಡಲಾಗಿತ್ತು. ಆದರೆ ಆ ಕೊಠಡಿಗೆ ಬಾಲ್ಕನಿ ಇರಲಿಲ್ಲ, ಅಷ್ಟೇ. ಇದು ಭಾರತಕ್ಕೆ ಮರಳುವಷ್ಟು ದೊಡ್ಡ ಸಮಸ್ಯೆಯೇನೂ ಆಗಿರಲಿಲ್ಲ’ ಎಂಬುದಾಗಿ ಮೂಲವೊಂದು ಹೇಳಿದೆ.

ಮರು ಹರಾಜು ವ್ಯಾಪ್ತಿಗೆ
ಹಾಗಾದರೆ ನಿರ್ಧಾರ ಬದಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಸುರೇಶ್‌ ರೈನಾ ಪುನಃ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆಯೇ ಎಂಬುದೊಂದು ಪ್ರಶ್ನೆ. “ಇಲ್ಲ. ರೈನಾ ಈ ಐಪಿಎಲ್‌ ಋತುವಿಗೆ ಲಭ್ಯರಿಲ್ಲ ಎಂದು ಸಿಎಸ್‌ಕೆ ಈಗಾಗಲೇ ಅಧಿಕೃತ ಪ್ರಕಟನೆ ನೀಡಿದೆ. ಈಗಾಗಲೇ ನಿವೃತ್ತಿ ಘೋಷಿಸಿದ, ಯಾವುದೇ ಮಾದರಿಯ ಪಂದ್ಯಗಳನ್ನಾಡದ ಆಟಗಾರನೊಬ್ಬ ಸಿಎಸ್‌ಕೆ ತಂಡಕ್ಕೆ ಬರುವ ಸಾಧ್ಯತೆ ಇಲ್ಲ. ಹೀಗಾಗಿ ರೈನಾ ಐಪಿಎಲ್‌ನಲ್ಲಿ ಮುಂದುವರಿಯುವುದಾದರೆ ಮರು ಹರಾಜಿಗೆ ಒಳಗಾಗಬೇಕಾಗುತ್ತದೆ. ಆಗ ಯಾವ ಫ್ರಾಂಚೈಸಿ ಬೇಕಾದರೂ ಅವರನ್ನು ಖರೀದಿಸಬಹುದಾಗಿದೆ’ ಎಂದು ಸಿಎಸ್‌ಕೆ ಫ್ರಾಂಚೈಸಿಯ ಮೂಲವೊಂದು ಸ್ಪಷ್ಟಪಡಿಸಿದೆ. ಅಲ್ಲಿಗೆ ಚೆನ್ನೈಗೆ ರೈನಾ ಮೇಲಿನ ಆಸಕ್ತಿ ಹೊರಟು ಹೋಗಿದೆ ಎಂದೇ ತಿಳಿಯಬೇಕಾಗುತ್ತದೆ.
ಸುರೇಶ್‌ ರೈನಾ ಸಿಎಸ್‌ಕೆ ಪರ 164 ಪಂದ್ಯಗಳನ್ನಾಡಿದ್ದು, ಸರ್ವಾಧಿಕ 4,527 ರನ್‌ ಪೇರಿಸಿದ್ದಾರೆ. ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ ಹೊರತುಪಡಿಸಿದರೆ ಅತ್ಯಧಿಕ ರನ್‌ ಗಳಿಸಿದ ದಾಖಲೆ ಈ ಯುಪಿಯ ಎಡಗೈ ಆಟಗಾರನದ್ದು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.