ಹಳ್ಳಿಗಾಡಿನ ಸೇವೆಗೆ ಕೋಟಾ ಕೃಪೆ ; ವೈದ್ಯಕೀಯ ಸ್ನಾತಕೋತ್ತರ ಪ್ರವೇಶ: ಸುಪ್ರೀಂ ಮಹತ್ವದ ಆದೇಶ
Team Udayavani, Sep 1, 2020, 6:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಗ್ರಾಮೀಣ, ಗುಡ್ಡಗಾಡು ಮತ್ತು ದುರ್ಗಮ ಪ್ರಾಂತಗಳಲ್ಲಿ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರಿಗೆ ವೈದ್ಯಕೀಯ ಸ್ನಾತಕೋತ್ತರ ಪ್ರವೇಶದಲ್ಲಿ ಮೀಸಲಾತಿ ಕಲ್ಪಿಸಲು ಸು. ಕೋರ್ಟ್ ಸಮ್ಮತಿಸಿದೆ.
ಕೋಟಾ ಕುರಿತಂತೆ ಹಲವಾರು ವೈದ್ಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ, ಈ ರೀತಿ ಕೋಟಾ ನಿಗದಿ ಕಾನೂನು ಬಾಹಿರವಲ್ಲ. ಹಾಗಾಗಿ ರಾಜ್ಯ ಸರಕಾರಗಳು ಈ ಕೋಟಾ ನಿರ್ಧರಿಸಬಹುದು.
ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ)ಗೆ ಈ ಕೋಟಾ ನಿಗದಿಪಡಿಸಲು ಸಾಂವಿಧಾನಿಕ ಅಧಿಕಾರ ಇಲ್ಲವಾದರೆ ರಾಜ್ಯ ಸರಕಾರಗಳು ತಮ್ಮ ಸ್ವ ವಿವೇಚನೆಯ ಮೇರೆಗೆ ನಿಗದಿಪಡಿಸಬಹುದು.
ಈ ತೀರ್ಪು ಈಗಾಗಲೇ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ, ಮುಂದೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅನ್ವಯಿಸಲಿದೆ ಎಂದಿದೆ.
ಕೆಲವು ರಾಜ್ಯಗಳು ಇಂಥ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಉಚಿತ ಅಂಕ ನೀಡುತ್ತಿರುವುದು ಔಚಿತ್ಯಪೂರ್ಣ ಎಂದೂ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ