ಕೋವಿಡ್ 19 ನಡುವೆಯೂ ಅಕ್ಷರ ಕ್ರಾಂತಿಯ ಕಿಚ್ಚು ಬಡಿದೆಬ್ಬಿಸುವ ಸರಕಾರಿ ಟೀಚರಮ್ಮ


Team Udayavani, Sep 1, 2020, 10:29 AM IST

ಕೋವಿಡ್ 19 ನಡುವೆಯೂ ಅಕ್ಷರ ಕ್ರಾಂತಿಯ ಕಿಚ್ಚು ಬಡಿದೆಬ್ಬಿಸುವ ಸರಕಾರಿ ಟೀಚರಮ್ಮ

ಕಟಪಾಡಿ : ಉಡುಪಿ ಜಿಲ್ಲೆಯ ಕುರ್ಕಾಲು ಗ್ರಾಮದ ಕುಂಜಾರುಗಿರಿ ಶ್ರೀ ದುರ್ಗಾದೇವೀ ದೇವಸ್ಥಾನದ ಏರು ಮೆಟ್ಟಿಲು ತಪ್ಪಲಿನಲ್ಲಿ ಸರಕಾರಿ ಶಾಲೆಯ ಅಧ್ಯಾಪಕಿ ತನ್ನ ವಿದ್ಯಾರ್ಥಿಗಳಿಗೆ ಮನೆ ಪಾಠವನ್ನು ನಡೆಸುವ ಶೈಕ್ಷಣಿಕ ಸೇವೆಯ ಮೂಲಕ ಅಕ್ಷರ ಕ್ರಾಂತಿಯ ಕಿಚ್ಚು ಬಡಿದೆಬ್ಬಿಸುವ ಕಾಯಕದಲ್ಲಿ ನಿರತರಾಗಿದ್ದಾರೆ

ಸುರಕ್ಷತೆ, ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಚಟುವಟಿಕೆ ಆರಂಭಕ್ಕೂ ಮೊದಲು ಮತ್ತು ಮುಗಿದ ಬಳಿಕ ಸ್ಯಾನಿಟೈಸರ್ ಬಳಸುವಿಕೆಯನ್ನು ಕಡ್ಡಾಯಗೊಳಿಸಿ ಸರಕಾರದ ನಿಬಂಧನೆಗಳನ್ನೂ ಪಾಲಿಸಿಕೊಳ್ಳುತ್ತಿದ್ದಾರೆ.

ಮೂಲತಃ ಮಲ್ಪೆಯ ನಿವಾಸಿ ರಂಜಿತಾ ಸಹಶಿಕ್ಷಕಿಯಾಗಿ ಕುಂಜಾರುಗಿರಿಯ ಬಿಜಂಟ್ಲದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದಿನ ನಿತ್ಯ ಅಷ್ಟು ದೂರ ಸಂಚರಿಸಿ ಆ ಬಳಿಕ ವಿದ್ಯಾರ್ಥಿಗಳ ಮನೆಯ ಪರಿಸರಕ್ಕೆ ತೆರಳಿ ಕಳೆದ ಜುಲೈ ಅಂತ್ಯದಿಂದ ಸರಕಾರದ ವಿದ್ಯಾಗಮ ಯೋಜನೆಯನ್ವಯ ತನ್ನ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳೊಂದಿಗೆ ಶಿಕ್ಷಣವನ್ನು ಧಾರೆ ಎರೆಯುತ್ತಿದ್ದಾರೆ.

ಬಾಗಿಲು ಮುಚ್ಚಿದ ಶಾಲೆ, ಮನೆ ಪರಿಸರವೇ ಪಾಠ ಶಾಲೆ:
ಕೋವಿಡ್ 19 ಸೋಂಕು ವ್ಯಾಪಿಸಿರುವ ನಡುವೆಯೂ ಬಾಗಿಲು ಮುಚ್ಚಿದ ಶಾಲೆಯಲ್ಲಿ ಕಲಿಕೆ ಲಭ್ಯವಿಲ್ಲವಾದರೂ ಅಧ್ಯಾಪಕಿ ಮನೆ ಪಾಠದ ಮೂಲಕ ಮನೆ ಪರಿಸರವನ್ನು ಪಾಠ ಶಾಲೆಯನ್ನಾಗಿಸಿದ್ದಾರೆ. ಕೋವಿಡ್ ವ್ಯಾಪಿಸಿರುವುದರಿಂದ ಮನೆಗೆ ತೆರಳಿ ಪಾಠ ನಡೆಸಲಾಗುತ್ತಿದೆ. ಶಾಲಾ ಚಟುವಟಿಕೆ ನಡೆಸುತ್ತಿದ್ದೇವೆ. ಸದ್ಯಕ್ಕೆ ಈ ರೀತಿ ಕಲಿಕಾ ಉಪಕರಣ ಬಳಸಿಕೊಂಡು ಜೂನ್, ಜುಲೈ ತಿಂಗಳ ಸೇತುಬಂಧ ಚಟುವಟಿಕೆಯನ್ನೂ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳನ್ನು ವಾರಕ್ಕೆ ಎರಡು ಭಾರಿ ಭೇಟಿ ಮಾಡಿ ನೇರ ಮುಖಾಮುಖಿ ಶಿಕ್ಷಣ ನೀಡುವುದು ಮಾತ್ರವಲ್ಲದೇ ವಾಟ್ಸಾಪ್ ಗ್ರೂಪ್ ರಚಿಸಿ ಹೋಂ ವರ್ಕ್‍ಗಳನ್ನು ವರ್ಕ್ ಶೀಟ್ ತರಹ ಮಾಡಿ ಕಳುಹಿಸಿ ಮಕ್ಕಳು ನೋಡಿಕೊಂಡು ಬರೆದು ಅಭ್ಯಾಸ ಮಾಡಿಸಲಾಗುತ್ತಿದೆ ಎನ್ನುತ್ತಾರೆ.

ಮಕ್ಕಳ ಪೋಷಕರ ಉತ್ತಮ ಸ್ಪಂದನೆ :
ಮನೆ ಪಾಠವನ್ನು ಮಕ್ಕಳನ್ನು ತಂಡವಾಗಿ ರಚಿಸಿ ನಿನ್ನಿಪಾದೆ, ಗಿರಿನಗರ, ಬಿಜಂಟ್ಲ ವ್ಯಾಪ್ತಿಯ ಪರಿಸರದಲ್ಲಿ ನಡೆಸಲಾಗುತ್ತಿದೆ. ಮಕ್ಕಳ ಪೋಷಕರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಪಾಲಕರು ಮಕ್ಕಳ ಹೋಂ ವರ್ಕ್‍ಗೆ ಸಹಕರಿಸುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 1ನೇ ತರಗತಿಯ ಮಕ್ಕಳಿಗೂ ಅಕ್ಷರಾಭ್ಯಾಸ ಪ್ರಾರಂಭಿಸಲಾಗಿದೆ ಎಂದು ತಿಳಿಸಿರುತ್ತಾರೆ.

ಮಕ್ಕಳ ಮುಖ ನೋಡದೆ ಬೇಸರ :
ಕೋವಿಡ್ ಲಾಕ್‍ಡೌನ್ ಸಂದರ್ಭದಿಂದ ಮಕ್ಕಳ ಮುಖ ನೋಡದೆ ನಮಗೂ ಬೇಸರವಾಗುತ್ತಿತ್ತು. ಮಕ್ಕಳನ್ನು ತುಂಬಾ ಎಣಿಸ್ತಾ ಇತ್ತು. ಫೋನ್ ಮೂಲಕ ಸಂಪರ್ಕ ಸಾಧಿಸಿ ನೆಮ್ಮದಿ ಪಡೆಯುತ್ತಿದ್ದೆ. ಇದೀಗ ನಮ್ಮ ಶಾಲಾ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರಿಗೂ ಕೂಡಾ ನಾವು ಅಕ್ಷರಾಭ್ಯಾಸ ಮಾಡುತ್ತಿದ್ದೇವೆ. ಸರಕಾರಿ ಶಾಲೆಗೆ ಮಧ್ಯಮ ವರ್ಗದ ಮಕ್ಕಳು ಹೆಚ್ಚಾಗಿ ಬರುತ್ತಿದ್ದು, ಮನೆಮಂದಿ ಬೆಳಗ್ಗೆ ಕೆಲಸಕ್ಕೆ ತೆರಳಿದರೆ ಸಂಜೆ ಮನೆಗೆ ಹಿಂದಿರುಗುತ್ತಾರೆ. ಆದ್ದರಿಂದ ಅಧ್ಯಾಪಕಿಯಾಗಿ ನಾನೇ ಹೆಚ್ಚು ಕಲಿಕೆಯನ್ನು ಕೊಡಬೇಕಿದೆ ಎಂದೆನ್ನುತ್ತಾರೆ ಅಧ್ಯಾಪಕಿ ರಂಜಿತಾ ಕೋವಿಡ್ ಸೋಂಕು, ಲಾಕ್‍ಡೌನ್ ಹಿನ್ನಲೆಯಲ್ಲಿ ಪೋಷಕರಿಗೂ ಆರ್ಥಿಕ ಹೊಡೆತ ಬಿದ್ದಿದೆ. ಆ ನಿಟ್ಟಿನಲ್ಲಿ ಇಂಗ್ಲೀಷ್ ಮೀಡಿಯಂಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಫೀಸ್ ಕಟ್ಟಲು ಅಸಹಾಯಕರಾಗಿ ಇದೀಗ ನಮ್ಮ ಸರಕಾರಿ ಶಾಲೆಯ ಕದ ತಟ್ಟಿದ್ದು ಪ್ರವೇಶಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಟೀಚರಮ್ಮ ಹೇಳಿದ್ದಾರೆ.

– ವಿಜಯ ಆಚಾರ್ಯ,ಉಚ್ಚಿಲ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.