ಮನೆ ಆರೈಕೆ ನೆರವಿಗೆ ಕುಶಲ ಆ್ಯಪ್‌

ಹೋಂ ಐಸೋಲೇಷನ್‌ ಸಂಖ್ಯೆ ಹೆಚ್ಚಳ: ಪಾಲಿಕೆಯಿಂದ ನಿಗಾ | ಮಾಹಿತಿ ಕಲೆ ಹಾಕಲು ಆ್ಯಪ್‌ ಬಳಕೆ

Team Udayavani, Sep 1, 2020, 12:34 PM IST

ಮನೆ ಆರೈಕೆ ನೆರವಿಗೆ ಕುಶಲ ಆ್ಯಪ್‌

ಬೆಂಗಳೂರು: ಕೋವಿಡ್ ಸೋಂಕು ದೃಢಪಟ್ಟು, ಹೋಂ ಐಸೋಲೇಷನ್‌ಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಸಹಾಯ ಮಾಡಲು ಸ್ವಸ್ಥ್ ಎಂಬ ಸಂಸ್ಥೆಯು ಕುಶಲ ಎಂಬ ಆ್ಯಪ್‌ ಪರಿಚಯ ಮಾಡಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಈ ಕುರಿತು ಸುದ್ದಿಗಾರರ ಜತೆ ಮಾತನಾಡಿ, ಹೋಂ ಐಸೋಲೇಷನ್‌ಗೆ ಒಳಗಾಗುವವರ ಮನೆ ವ್ಯವಸ್ಥೆಯನ್ನು ಪಾಲಿಕೆಯ ಅಧಿಕಾರಿಗಳು ಭೇಟಿ ನೀಡಿ ಹೋಂ ಐಸೋಲೇಷನ್‌ಗೆ ಒಳಗಾಗಲು ಸಮರ್ಪಕವಾಗಿದ್ದರೆ ಅನುವು ಮಾಡಿಕೊಡಲಿದ್ದಾರೆ. ಈ ರೀತಿ ಹೋಂಐಸೋಲೇಷನ್‌ ಆಗುವವರ ಆರೋಗ್ಯ ಪರೀಕ್ಷೆ ಮಾಡಲು ಸಹಕಾರ ನೀಡಲು ಸ್ವಸ್ಥ್ ಎಂಬ ಸಂಸ್ಥೆ ಮುಂದೆ ಬಂದಿದ್ದು, ಕುಶಲ ಎಂಬ ಆ್ಯಪ್‌ ಅನ್ನು ಪರಿಚಯಿಸಿದೆ ಎಂದರು.

ಈ ಆ್ಯಪ್‌ನ ಮೂಲಕ ವೈದ್ಯರು ಪ್ರತಿದಿನ ಮೂರು ಬಾರಿ ಫೋನ್‌ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿಕೊಳ್ಳುತ್ತಾರೆ. ಹೋಂ ಐಸೋಲೇಷನ್‌ನಲ್ಲಿರುವವರು ತೊಂದರೆಗೆ ಒಳಗಾದರೆ ಕೂಡಲೇ ಪಾಲಿಕೆಗೆ ಮಾಹಿತಿ ಲಭ್ಯವಾಗಲಿದೆ. ಇದರ ಆಧಾರದ ಮೇಲೆ ತೊಂದರೆಗೆ ಒಳಗಾಗುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತೇವೆ ಎಂದರು. ಹೋಂ ಐಸೋಲೇಷನ್‌ನಲ್ಲಿದ್ದು, ಆಕ್ಸಿಮೀಟರ್‌ ಹಾಗೂ ಔಷಧಿ ಅಗತ್ಯ ಇರುವವರಿಗೆ ಇದನ್ನು ಪೂರೈಸಲು ಕ್ರಮ ವಹಿಸಲಾಗುವುದು. ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ವಸ್‌§ ಸಂಸ್ಥೆಯೂ ಸಹಕಾರ ನೀಡುತ್ತಿದೆ ಎಂದರು.

ಇನ್ನು ಸೋಂಕು ದೃಢಪಟ್ಟು, ಪಾಲಿಕೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಸೋಂಕಿತರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಪಾಲಿಕೆಯಿಂದಾಗಲೀ ಅಥವಾ ಆಸ್ಪತ್ರೆಯಿಂದಾಗಲಿ ಯಾರು ಈ ಸೇವೆಗೆ ಹಣ ಕೇಳುವಂತಿಲ್ಲ. ಹಣ ಕೇಳುವ ಆರೋಪ ಸಾಬೀತಾದರೆ ಸಂಬಂಧ ಪಟ್ಟ ಅಧಿಕಾರಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ನಡೆಸುತ್ತಿರುವ ಸೋಂಕು ಪರೀಕ್ಷೆ, ಕೋವಿಡ್‌ ಆರೈಕೆ ಕೇಂದ್ರ ಸೇರಿಸಲು ಹಾಗೂ ಖಾಸಗಿ ಆಸ್ಪತ್ರೆಗೆ ಸೇರಿಸಲು ಯಾವುದೇ ಶುಲ್ಕಯಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು.

……………………………………………………………………………………………………………………………………………………

90 ಸಾವಿರ ದಾಟಿದ ಬಿಡುಗಡೆ ಪಮಾಣ : ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲೇ ಇದ್ದ ಕೋವಿಡ್ ಸೋಂಕಿತ ಸಂಖ್ಯೆ ಪ್ರಮಾಣ ಇಳಿಕೆಯಾಗಿದೆ. ಸೋಮವಾರ 1,862 ಸೋಂಕಿತ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 1,27,336 ಕ್ಕೆ ಏರಿಕೆಯಾಗಿದೆ. ಹೊಸದಾಗಿ 2,422 ಮಂದಿ ಬಿಡುಗಡೆಯಾಗಿದ್ದು ಒಟ್ಟು ಬಿಡುಗಡೆ ಪ್ರಮಾಣ 90,043ಕ್ಕೆ ಏರಿದೆ. ನಗರದಲ್ಲಿ 37,116 ಸಕ್ರಿಯ ಪ್ರಕರಣಗಳಿದ್ದು, 284 ಮಂದಿ ತೀವ್ರ ನಿಗಾಘಟಕದಲ್ಲಿದ್ದಾರೆ.

ಸೋಮವಾರ 27 ಮಂದಿ ಕೋವಿಡ್‌ಗೆ ಬಲಿಯಾಗಿದ್ದು ಒಟ್ಟಾರೆ ಈ ಸಂಖ್ಯೆ 1,966ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇ. 1.52 ರಷ್ಟಿದೆ. ನಗರದಲ್ಲಿ ಈವರೆಗೂ ಚೇತರಿಕೆ ಪ್ರಮಾಣ ಶೇ.69,73ರಷ್ಟಿದೆ.

8,55,534 ಮಂದಿಗೆ ಪರೀಕ್ಷೆ : ನಗರದಲ್ಲೀಗ ಒಟ್ಟು ಪಾಸಿಟಿವ್‌ ರೇಟ್‌ ಶೇ.15.19 ರಷ್ಟಿದ್ದು, ಆಕ್ಟೀವ್‌ ರೇಟ್‌ ಶೇ.28.74 ರಷ್ಟಿದೆ. ಅಲ್ಲದೆ ನಿನ್ನೆ 13,157 ಜನರನ್ನು ಪರೀಕ್ಷೆ ಗೆ ಒಳಪಡಿಸಲಾಗಿದ್ದು ಇದುವರೆಗೂ 8,55,434 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಹಾಗೆಯೇ ಒಟ್ಟು 40,563 ಕಂಟೈನ್ಮೆಂಟ್‌ ವಲಯವಿದ್ದು ಇದರಲ್ಲಿ 15,723 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.