ಕಾವಡಿ: ಪ್ರಕೃತಿ ವಂದನಾ ಕಾರ್ಯಕ್ರಮ
Team Udayavani, Sep 1, 2020, 7:05 PM IST
ಶೃಂಗೇರಿ: ಇಂದಿನ ಪೀಳಿಗೆ ಪರಿಸರ ಸಂರಕ್ಷಿಸುವ ಹಾಗೂ ಪೋಷಿಸುವತ್ತ ಗಮನ ಹರಿಸಬೇಕು ಎಂದು ಕೃಷಿಕ ಹೆಗ್ಗದ್ದೆ ನಂಜುಂಡ ಭಟ್ಟ ಹೇಳಿದರು.
ಅಡ್ಡಗದ್ದೆ ಗ್ರಾಪಂನ ಕಾವಡಿ ಗ್ರಾಮದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಸೋಮವಾರ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಪ್ರತಿಷ್ಠಾನ, ಆರೆಸ್ಸೆಸ್ ವತಿಯಿಂದ ಏರ್ಪಡಿಸಿದ್ದ ಪ್ರಕೃತಿ ವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಪೂರ್ವಜರು ಪರಿಸರ ಉಳಿಸಲು ಮೊದಲ ಆದ್ಯತೆ ನೀಡುತ್ತಿದ್ದರು. ಇಂದು ನಾವು ಪ್ರಕೃತಿಯನ್ನು ಬಳಸುತ್ತಿದ್ದೇವೆ ಹೊರತು ಇದನ್ನು ಉಳಿಸಲು ಗಮನ ಹರಿಸುತ್ತಿಲ್ಲ.ನಾಗರ ಪಂಚಮಿ, ಗೋಪೂಜಾ,ತುಳಸಿ ಹಬ್ಬದಂತಹ ಹಿಂದೂ ಹಬ್ಬದ ಆಚರಣೆಗಳು ಪರಿಸರ ಸಂರಕ್ಷಣೆಗೆ ಪೂರಕವಾಗಿವೆ ಎಂದರು.
ಜ್ಞಾನಭಾರತೀ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶಂಕರನಾರಾಯಣ ಮಾತನಾಡಿ,ಪರಿಸರ ಮತ್ತು ಪ್ರಾಣಿಗಳ ರಕ್ಷಣೆ ಬಗ್ಗೆ ನಮ್ಮ ಪ್ರಾಚೀನ ಮೌಲ್ಯವನ್ನು ಸಮಾಜಕ್ಕೆ ನೆನಪಿಸುವುದು, ಮನುಷ್ಯ ತನ್ನ ದಿನ ನಿತ್ಯದ ಜೀವನದಲ್ಲಿ ಪಂಚಭೂತಗಳಾದ ಪೃಥ್ವಿ, ಜಲ,ಅಗ್ನಿ, ವಾಯು ಮತ್ತು ಆಕಾಶದ ರಕ್ಷಣೆ ವಂದನಾ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ವೃಕ್ಷಕ್ಕೆ ತಿಲಕವಿಟ್ಟು, ಅಕ್ಷತೆ ಹಾಕಿ ಪವಿತ್ರ ದಾರ ಕಟ್ಟಿದರು. ಕೆಲವಳ್ಳಿ ನೂತನ್, ರಮೇಶ್ ಭಟ್, ಪ್ರದೀಪ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ