ಹುಲಿ ಮತ್ತು ಜಿಂಕೆ ಬೇಟೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Team Udayavani, Sep 1, 2020, 9:01 PM IST
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆ.26 ರಂದು ಹುಲಿ ಮತ್ತು ಜಿಂಕೆ ಬೇಟೆಗೆ ಸಂಬಂಧಿಸಿದಂತೆ, ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಹಾಗೂ, ಇನ್ನುಳಿದ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಎ.ಸಿ.ಎಫ್ ಸತೀಶ್ ಅವರು ತಿಳಿಸಿದ್ದಾರೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಹುಲಿಯನ್ನು ಹತ್ಯೆಗೈದು ಅದರ ನಾಲ್ಕು ಕಾಲು ಮತ್ತು ಕೋರೆ ಹಲ್ಲುಗಳನ್ನು ಆರೋಪಿಗಳು ಅಪಹರಿಸಿದ್ದರು.
ಬಂಡೀಪುರ ಉದ್ಯಾನದ ಶ್ವಾನ ರಾಣಾನಿಂದಾಗಿ ಹುಲಿ ಹತ್ಯೆಯಾದ 24 ಗಂಟೆಯೊಳಗೆ ಪ್ರಮುಖ ಆರೋಪಿ ಸಂತೋಶ್ ನನ್ನು ಬಂದಿಸಲಾಗಿತ್ತು. ಮತ್ತು ಈತನಿಂದ 7 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಮತ್ತು, ಆತ ನೀಡಿದ ಸುಳಿವನ್ನಾಧರಿಸಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು 6 ವಿಶೇಷ ತಂಡಗಳನ್ನು ರಚಿಸಲಾಗಿತ್ತು.
ಆರೋಪಿ ಸಂತೋಷ್ ನೀಡಿದ ಮಾಹಿತಿಯನ್ನಾಧರಿಸಿ ಬೆಂಗಳೂರಿನತ್ತ ತೆರಳಿದ್ದ ವಿಶೇಷ ತಂಡದ ಅಧಿಕಾರಿ. ಎ.ಸಿ.ಎಫ್ ಆಂಟೋನಿ ಪೌಲ್, ಆರ್ ಎಫ್ ಓ ಚೌಗುಲೆ ನೇತೃತ್ವದ ತಂಡಕ್ಕೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ರಾಮನಗರ ಪಟ್ಟಣದ KSRTC ಬಸ್ ನಿಲ್ದಾಣ ಬಳಿ ಪೆಟ್ರೋಲ್ ಪಂಪ್ ಹತ್ತಿರ ಕುಳಿತುಕೊಂಡಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ನಿಟ್ಟೂರಿನ ವಟ್ಟ0ಗಡ ರಂಜು ಬಿನ್ ಬೆಳ್ಳಿಯಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದರು.
ಈತನನ್ನು ತೀವ್ರವಾಗಿ ವಿಚಾರಣೆ ನಡೆಸಿದ ವೇಳೆ ಆರೋಪಿ ನೀಡಿದ ಮಾಹಿತಿಯ ಮೇರೆಗೆ 4 ಹುಲಿ ಉಗುರುಗಳು ಮತ್ತು 2 ಕೊರೆ ಹಲ್ಲುಗಳನ್ನು ಆರೋಪಿ ರಂಜುನ ಮಾವ ಅನ್ನಾಲವಾಡ್ ವಿಶ್ವನಾಥ್ ರವರ ಕಾಫಿ ತೋಟದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಡಿ.ಮಹೇಶ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ