ಶೇ.77ರ ಸಮೀಪಕ್ಕೆ ಕೊರೊನಾ ಗುಣಮುಖ ಪ್ರಮಾಣ
ಕೋವಿಡ್ ಮರಣ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಈಗ ಶೇ.1.77ಕ್ಕೆ ತಲುಪಿದೆ.
Team Udayavani, Sep 2, 2020, 9:44 AM IST
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಗುಣಮುಖ ಪ್ರಮಾಣ ಈಗ ಶೇ.77ರ ಸಮೀಪಕ್ಕೆ ಬಂದಿದೆ. ಮಂಗಳವಾರ ದವರೆಗೆ 28.39 ಲಕ್ಷಕ್ಕೂ ಹೆಚ್ಚು ಮಂದಿ ಸಂಪೂರ್ಣ ವಾಸಿಯಾಗಿ, ಮನೆಗೆ ಮರಳಿದ್ದು, ಗುಣಮುಖ ಪ್ರಮಾಣ ಶೇ.76.94ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಸೋಮವಾರ ಬೆಳಗ್ಗೆ 8ರಿಂದ ಮಂಗಳವಾರ ಬೆಳಗ್ಗೆ 8ರವರೆಗೆ 24 ಗಂಟೆಗಳಲ್ಲಿ 69,921 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಅವಧಿಯಲ್ಲಿ 819 ಸೋಂಕಿತರು ಅಸುನೀಗಿದ್ದಾರೆ. ಕೋವಿಡ್ ಮರಣ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಈಗ ಶೇ.1.77ಕ್ಕೆ ತಲುಪಿದೆ. ಆ.31 ರವರೆಗೆ 4.33 ಕೋಟಿಗೂ ಅಧಿಕ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದೆ ಎಂದೂ ಮಾಹಿತಿ ನೀಡಿದೆ.
ಜಪಾನ್ನಿಂದ 3,500 ಕೋಟಿ ಸಾಲ
ಕೋವಿಡ್ ಬಿಕ್ಕಟ್ಟು ನಿರ್ವಹಣೆಗೆ ಭಾರತಕ್ಕೆ 3,500 ಕೋಟಿ ರೂ. ಸಾಲ ನೀಡಲು ಜಪಾನ್ ಸಮ್ಮತಿ ಸೂಚಿಸಿದೆ. ಜಪಾನ್ ಅಂತಾ ರಾಷ್ಟ್ರೀಯ ಸಹಕಾರ ಸಂಸ್ಥೆಯು,(ಜೆಐಸಿಎ) ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ಭಾರತಕ್ಕೆ ಆರ್ಥಿಕ ನೆರವು ನೀಡುವ ಸಲುವಾಗಲಿ ಒಪ್ಪಂದ ಮಾಡಿಕೊಂಡಿದೆ.
ಈ ಹಣವನ್ನು ಪ್ರಧಾನ ಮಂತ್ರಿ ಅತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ (ಪಿಎಂ-ಎಎಸ್ಬಿವೈ) ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಿಗೆ ಬಳಸಲು ಉದ್ದೇಶಿ ಸಲಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸುಸ್ಥಿರ ಹಾಗೂ ಅಭಿವೃದ್ಧಿ ಗಾಗಿ ಭಾರತಕ್ಕೆ ನೆರವು ನೀಡಲಾಗುತ್ತಿದೆ ಎಂದು ಜೆಐಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ