ಸಾಲ ವಸೂಲಿಗೆ ಒತ್ತಡ ಹಾಕಿದರೆ ಕ್ರಮ


Team Udayavani, Sep 2, 2020, 3:09 PM IST

ಸಾಲ ವಸೂಲಿಗೆ ಒತ್ತಡ ಹಾಕಿದರೆ ಕ್ರಮ

ಮಂಡ್ಯ: ಮೈಕ್ರೋ ಫೈನಾನ್ಸ್‌ಗಳು ಹಾಗೂ ವಾಹನ ಸಾಲ ನೀಡುವ ಸಂಸ್ಥೆಗಳು ಸಾಲ ವಸೂಲಾತಿಗೆ ಯಾವುದೇ ಒತ್ತಡ ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್‌ ಹಾಗೂ ಕರುನಾಡ ಸೇವಕರ ಸಂಘಟನೆ ಪದಾಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್‌ ಕಾರಣಕ್ಕೆ ಇಡೀ ದೇಶದಲ್ಲಿ ಉದ್ಯೋಗ, ಉದ್ದಿಮೆ ಸ್ಥಗಿತಗೊಂಡಿದೆ. ಜನರ ದುಡಿಯುವ ಅವಕಾಶಗಳು ಕಡಿಮೆಯಾಗಿವೆ. ಈ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ವಸೂಲಾತಿಗೆ ಸಾರ್ವಜನಿಕರ ಮೇಲೆ ಒತ್ತಡ ಹಾಕದೆ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಅತ್ಯಂತ ಸಂದಿಗ್ಧ ಸನ್ನಿವೇಶ ದೇಶಾದ್ಯಂತ ನಿರ್ಮಾಣವಾಗಿದೆ. ಸಾಲ ವಸೂಲು ಮಾಡುವ ಕೆಳಹಂತದ ನೌಕರರು ಅನುಚಿತವಾಗಿ ವರ್ತಿಸಿ ಸಂಘರ್ಷ ಸೃಷ್ಟಿ ಮಾಡಬಾರದು. ಈ ಸಂಬಂಧ ಈಗಾಗಲೇ ಜನಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ದೂರು ನೀಡಿವೆ. ಸಾಲ ಕಟ್ಟುವ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಕಂತುಗಳನ್ನು ಸಂಗ್ರಹಿಸುವಂತೆ ಸೂಚನೆ ನೀಡಿದರು.

ಗೂಂಡಾಗಿರಿ: ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ರಿಸರ್ವ್‌ ಬ್ಯಾಂಕ್‌ ರಿಯಾಯಿತಿ ಘೋಷಿಸಿದ ಸಂದರ್ಭದಲ್ಲೂ ಸಹ ಸಾಲ ವಸೂಲಾತಿಗೆ ಮೈಕ್ರೋ ಫೈನಾನ್ಸ್‌ಗಳು ಪಟ್ಟು ಹಿಡಿದಿವೆ. ವಾಹನ ಸಾಲ ನೀಡುವ ಬಜಾಜ್‌ ಮಹೇಂದ್ರ, ಚೋಳಮಂಡಲ, ಶ್ರೀರಾಮ್‌ ಸಂಸ್ಥೆಗಳು ಅಕ್ಷರಶಃ ಸಂಘಟಿತ ಗೂಂಡಾಗಿರಿ ನಡೆಸುತ್ತಿವೆ. ಇವರುಗಳ ಕಿರುಕುಳದಿಂದಾಗಿ ಜಿಲ್ಲೆಯ ಹಲವರು ಊರು ತೊರೆದಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಹನಗಳ ಜಪ್ತಿ ಹೆಸರಲ್ಲಿ ರೌಡಿಗಳನ್ನು ಮುಂದಿಟ್ಟುಕೊಂಡು ಹೆದರಿಸಲಾಗುತ್ತಿದೆ. ನಿಯಮಾನುಸಾರ ಸಾಲ ಕಟ್ಟಲು ಸ್ಥಳೀಯವಾಗಿ ಕಚೇರಿ ತೆರೆಯದೆ ಬೆಂಗಳೂರು ಮೈಸೂರಿಗೆ ಅಲೆಸುವುದು ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭರವಸೆ: ಮೈಕ್ರೋ ಫೈನಾನ್ಸ್‌ ಒಕ್ಕೂಟದ ಮುಖ್ಯಸ್ಥ ರವಿಚಂದ್ರ ಮಾತನಾಡಿ, ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೂಲಕ ಒಂದೂವರೆ ಸಾವಿರ ಕೋಟಿ ಸಾಲ ನೀಡಲಾಗಿದೆ. ಸಾಲ ವಸೂಲಾತಿಯಲ್ಲಿ ಮಂಡ್ಯ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಸಾರ್ವಜನಿಕರ ದೂರುಗಳ  ಸಂಬಂಧ ಕ್ರಮ ವಹಿಸಿ ವಸೂಲಾತಿಯಲ್ಲಿ ಯಾವುದೇ ಒತ್ತಡ ಹೇರುವ ಬದಲು ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸುವುದಾಗಿ ಸಭೆಗೆ ಭರವಸೆ ನೀಡಿದರು. ಸಭೆಯಲ್ಲಿ ಲೀಡ್‌ ಬ್ಯಾಂಕ್‌ ಪ್ರತಿನಿಧಿಗಳು, ವಿವಿಧ ಮೈಕ್ರೋ ಫೈನಾನ್ಸ್‌ ಮುಖ್ಯಸ್ಥರು, ಕರುನಾಡ ಸೇವಕರು ಸಂಘಟನೆ ನಗರಾಧ್ಯಕ್ಷ ಚಂದ್ರಶೇಖರ, ಸಂದೀಪ್‌, ಶಂಕರ್‌, ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ, ರೈತಸಂಘದ ಕೆಂಪೂಗೌಡ, ಜಬೀವುಲ್ಲಾ, ಪ್ರಸನ್ನ ಬಾಣಸವಾಡಿ, ನಗರಸಭಾ ಸದಸ್ಯರಾದ ನಯೀಮ್‌, ಝಾಕೀರ್‌ ಇತರರಿದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.