ಹಸಿರು ವೃದ್ಧಿಗೆ ಮರ ದತ್ತು ಸ್ವೀಕಾರ ಯೋಜನೆ

‌ಗದಗ ಉಪ ಅರಣ್ಯ ವಲಯದಿಂದ ರಾಜ್ಯದಲ್ಲೇ ಮೊದಲ ವಿಶಿಷ್ಟ ಯೋಜನೆ

Team Udayavani, Sep 2, 2020, 4:42 PM IST

ಹಸಿರು ವೃದ್ಧಿಗೆ ಮರ ದತ್ತು ಸ್ವೀಕಾರ ಯೋಜನೆ

ಗದಗ: ಪ್ರಾಣಿಗಳ ದತ್ತು ಸ್ವೀಕಾರ ಯಶಸ್ವಿಯಾದ ಬೆನ್ನಲ್ಲೇ ಗಿಡ-ಮರಗಳ ದತ್ತು ಸ್ವೀಕಾರವೂ ಆರಂಭವಾಗಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಗದಗ ಉಪ ಅರಣ್ಯ ವಲಯ ಈ ಯೋಜನೆ ಅನುಷ್ಠಾನಗೊಳಿಸಿದೆ.

ಅರಣ್ಯ ಇಲಾಖೆಯ ವನ್ಯಜೀವಿಗಳ ದತ್ತು ಕಾರ್ಯಕ್ರಮದ ಮಾದರಿಯಲ್ಲೇ ಈ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ವಿಶಿಷ್ಟ ಅಭಿಯಾನದಡಿ ಮಂಗಳವಾರ ಐವರು ತಲಾ ಒಂದೊಂದು ಸಸಿಯನ್ನು ದತ್ತು ಪಡೆದು ಯೋಜನೆಗೆ ಅಧಿಕೃತ ಚಾಲನೆ ನೀಡಿದ್ದಾರೆ. ಸಸಿಯೊಂದಕ್ಕೆ ಇಲಾಖೆಯಿಂದ 500 ರೂ. ಶುಲ್ಕ ನಿಗದಿಗೊಳಿಸಲಾಗಿದೆ. ಇಲ್ಲಿನ ಬಿಂಕದಕಟ್ಟಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ದಾನಿಗಳ ಮೂಲಕವೇ ಈ ಸಸಿಗಳನ್ನು ನೆಡಲಾಗುತ್ತದೆ. ಬಳಿಕ ಆ ಸಸಿಗಳ ಪೋಷಣೆಯನ್ನು ಇಲಾಖೆಯೇ ನಿರ್ವಹಿಸಲಿದೆ. ದತ್ತು ಪಡೆದ ಗಿಡದ ಮುಂದೆ ದಾನಿಗಳು ಬಯಸಿದ ನಾಮಫಲಕ ಅಳವಡಿಸಲಾಗುತ್ತದೆ. ಜತೆಗೆ ಮರದ ಸಂಖ್ಯೆ, ತಳಿ ಹಾಗೂ ದಾನಿಗಳು ಹಾಕಿಸಿದ ಹೆಸರನ್ನು ಒಳಗೊಂಡಿರುವ ಪ್ರಮಾಣ ಪತ್ರವನ್ನೂ ನೀಡಲಾಗುತ್ತದೆ.

ಜಾಗೃತಿಯೊಂದಿಗೆ ಹಣ ಸಂಗ್ರಹ: ಇತ್ತೀಚೆಗೆ ಕೋವಿಡ್ ಲಾಕ್‌ಡೌನ್‌ನಿಂದಾಗಿ ಪ್ರಮುಖ ಪ್ರವಾಸಿ ತಾಣಗಳು ಬಾಗಿಲು ಮುಚ್ಚಿವೆ.ಇದರಿಂದ ಅರಣ್ಯ ಇಲಾಖೆಯ ವನ್ಯಜೀವಿ  ಧಾಮಗಳು ಹಾಗೂ ಟ್ರೀ ಪಾರ್ಕ್‌ಗಳೂ ಕೂಡ ಹೊರತಾಗಿಲ್ಲ. ಇದರಿಂದ ಇಲಾಖೆ ಆರ್ಥಿಕ ನಷ್ಟ ಅನುಭವಿಸುತ್ತಿದೆ. ಪರಿಣಾಮ ಸಸ್ಯೋದ್ಯಾನದ ಗುತ್ತಿಗೆ ಆಧಾರಿತ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸುವುದೂ ಕಷ್ಟಕರವಾಗಿದೆ. ಅಲ್ಲದೇ ಸುಮಾರು 200 ಎಕರೆ ಪ್ರದೇಶದಲ್ಲಿರುವ ಬಿಂಕದಕಟ್ಟಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಇನ್ನೂ ಸಾವಿರಾರು ಗಿಡಮರ ಬೆಳೆಸಬಹುದಾಗಿದೆ. ಇದನ್ನು ಮನಗಂಡ ಸ್ಥಳೀಯ ಅರಣ್ಯ ಅಧಿಕಾರಿಗಳು ಮರಗಳ ದತ್ತು ಸ್ವೀಕಾರ ಯೋಜನೆ ಜಾರಿಗೊಳಿಸಿದ್ದಾರೆ. ಮೊದಲ ಹಂತದಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮದಡಿ ಒಂದು ಸಾವಿರ ಗಿಡಗಳನ್ನು ನೆಡಲು ಉದ್ದೇಶಿಸಿದ್ದು, ಸುಮಾರು ಐದು ಲಕ್ಷ ರೂ. ಆದಾಯ ನಿರೀಕ್ಷಿಸಲಾಗಿದೆ. ಅದನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸಿ, ಅದರಿಂದ ಬರುವ ಬಡ್ಡಿ ಹಣವನ್ನು ಕಾರ್ಮಿಕ ವೇತನಕ್ಕೆ ಬಳಸುವುದು ಇದರ ಉದ್ದೇಶವಾಗಿದೆ.

ತಮ್ಮ ಜೀವನ ಅಮೂಲ್ಯವಾದ ಸಂದರ್ಭದ ಸ್ಮರಣಾರ್ಥ ಇಲ್ಲಿ ಮರಗಳನ್ನು ದತ್ತು ಪಡೆದು ಅವಿಸ್ಮರಣೀಯಗೊಳಿಸಬಹುದು. ದೀರ್ಘ‌ ಆಯುಷ್ಯ ಹೊಂದಿರುವ ಆಲ, ಬೇವು, ಹೊಂಗೆ ಸೇರಿದಂತೆ ಐದಾರು ಬಗೆಯ ಬೃಹತ್‌ ಮರಗಳನ್ನು ಈ ಯೋಜನೆಯಡಿ ಸೇರಿಸಲಾಗಿದೆ. ದಾನಿಗಳು ಯಾವುದಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಮರಗಳ ದತ್ತು ಕಾರ್ಯಕ್ರಮ ರಾಜ್ಯದಲ್ಲಿ ಇಲ್ಲೇ ಮೊದಲಿಗೆ ಆರಂಭಗೊಂಡಿದೆ. ಸೂರ್ಯಸೇನ್‌, ಡಿಸಿಎಫ್‌, ಗದಗ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.