ದ್ರಾಕ್ಷಿ ಬೆಳೆಗಾರರಿಗೆ ತರಬೇತಿ
Team Udayavani, Sep 2, 2020, 4:57 PM IST
ಕನಕಗಿರಿ: ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ತೋಟಗಾರಿಕೆ ದಿನಾಚರಣೆ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಮಾತನಾಡಿ, ಈ ಭಾಗದಲ್ಲಿ ದ್ರಾಕ್ಷಿ ಬೆಳೆ 200 ಹೆಕ್ಟೇರ್ ಪ್ರದೇಶದ ಹೊಂದಿದ್ದು, ಪ್ರತಿಯೊಬ್ಬ ರೈತರು ತೋಟಗಾರಿಕೆ ಬೆಳೆಯುವ ಆಸಕ್ತಿಯನ್ನು ಹೊಂದಿದ್ದಾರೆ. ಋತುಮಾನಗಳಿಗೆ ಅನುಸಾರವಾಗಿ ಹಾಗೂ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಇಲಾಖೆಯಿಂದ ದೊರೆಯುವ ಸಹಾಯಧನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಶಾಸಕ ಬಸವರಾಜ ದಢೇಸುಗೂರು ಅವರು ಇಚ್ಛಾಶಕ್ತಿಯಿಂದ ತಾಲೂಕಿನ ಸಿರವಾರ ಗ್ರಾಮದ ಬಳಿ ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ಆರಂಭಿಸಲು ಡಿಪಿಆರ್ ತಯಾರಿಸಿ ಅನುಮೋದನೆಗೆ ಕಳಿಸಲಾಗಿದೆ. ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ನಿರ್ಮಾಣದಿಂದ ಈ ಭಾಗದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಮುದ್ದೇಬಿಹಾಳದ ತೋಟಗಾರಿಕೆ ವಿವಿ ಪ್ರಾಧ್ಯಾಪಕ ರಾಘವೇಂದ್ರಆಚಾರ್ಯ ಮಾತನಾಡಿ, ಬೆಳೆಬೆಳೆಸುವ ಮುನ್ನವೇ ಹವಾಮಾನ ವೈಫಲ್ಯ ಕಂಡುಕೊಂಡು ನಾಟಿ ಮಾಡಬೇಕು. ದ್ರಾಕ್ಷಿಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗಂಗಾವತಿ ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಯೋಗಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಾಮನಮೂರ್ತಿ, ಕೀಟ ತಜ್ಞ ಬದ್ರಿ ಪ್ರಸಾದ, ರೈತ ಮುಖಂಡರಾದ ಜಗದೀಶಪ್ಪ ಸೋಮನಾಳ, ಕುಮಾರೆಪ್ಪ ಮಾದಿನಾಳ, ವೀರೇಶ ವಿಟ್ಲಾಪೂರ, ಶರಣಬಸವ ಕನ್ನೇರಮಾಡ, ಮಲ್ಲಪ್ಪ ಆರೇರ್, ಮಹೇಶ ಹುಲಸನಟ್ಟಿ, ದ್ಯಾಮಣ್ಣ ನೆಲಜೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ