ಬಾಲಿವುಡ್ ನಟ ದಿಲೀಪ್ ಕುಮಾರ್ ಸಹೋದರರು ಕೋವಿಡ್ ಗೆ ಬಲಿ


Team Udayavani, Sep 3, 2020, 8:41 PM IST

ಬಾಲಿವುಡ್ ನಟ ದಿಲೀಪ್ ಕುಮಾರ್ ಸಹೋದರರು ಕೋವಿಡ್ ಗೆ ಬಲಿ

ಮುಂಬಯಿ: ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಇಬ್ಬರು ಸಹೋದರರು ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ.

ದಿಲೀಪ್ ಕುಮಾರ್ ಅವರ ಕಿರಿಯ ಸಹೋದರ 90 ವರ್ಷದ ಎಹ್ಸಾನ್ ಖಾನ್ ಅವರು ಇಂದು ನಿಧನರಾಗಿದ್ದಾರೆ. ಇವರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಎಹ್ಸಾನ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವಿಚಾರವನ್ನು ದಿಲೀಪ್ ಕುಮಾರ್ ಅವರ ಕುಟುಂಬ ಸ್ನೇಹಿತ ಫೈಸಲ್ ಫಾರೂಖಿ ಅವರು ಈ ಹಿರಿಯ ನಟನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ಮಾಹಿತಿ ನೀಡಿದ್ದಾರೆ.

‘ದಿಲೀಪ್ ಸಾಹೇಬ್ ಅವರ ಕಿರಿಯ ಸಹೋದರ ಎಹ್ಸಾನ್ ಖಾನ್ ಅವರು ಕೆಲ ಸಮಯಗಳ ಹಿಂದೆ ನಿಧನರಾಗಿದ್ದಾರೆ. ಈ ಹಿಂದೆ, ಇನ್ನೋರ್ವ ಸಹೋದರ ಅಸ್ಲಂ ನಿಧನ ಹೊಂದಿದ್ದರು. ನಾವೆಲ್ಲರೂ ದೇವರ ಮಕ್ಕಳು ಮತ್ತು ಆತನಲ್ಲಿಗೇ ಹಿಂದಿರುಗಬೇಕಾದವರು. ದಯವಿಟ್ಟು ನೀವೆಲ್ಲರೂ ಅವರಿಗಾಗಿ ಪ್ರಾರ್ಥಿಸಿ’ ಎಂದು ಫೈಸಲ್ ಫಾರುಖಿ ಅವರು ಬರೆದುಕೊಂಡಿದ್ದಾರೆ.


ದಿಲೀಪ್ ಕುಮಾರ್ ಅವರ ಇಬ್ಬರು ಸಹೋದರರಿಗೆ ಆಗಸ್ಟ್ 15ರಂದು ಕೋವಿಡ್ 19 ಸೊಂಕು ದೃಢಪಟ್ಟಿತ್ತು. ಮತ್ತು ಅವರಿಬ್ಬರನ್ನೂ ನಗರದ ಲೀಲಾವತಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಇವರಲ್ಲಿ 88 ವರ್ಷ ಪ್ರಾಯದ ಅಸ್ಲಂ ಖಾನ್ ಅವರು ಆಗಸ್ಟ್ 21ಕ್ಕೆ ನಿಧನರಾಗಿದ್ದರು ಮತ್ತು 90 ವರ್ಷ ಪ್ರಾಯದ ಎಹ್ಸಾನ್ ಖಾನ್ ಅವರು ಇಂದು ನಿಧನರಾಗಿದ್ದಾರೆ.

ಮಾರ್ಚ್ ತಿಂಗಳಿನಲ್ಲಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಗೂ ಮುಂಚೆ ಟ್ವೀಟ್ ಮಾಡಿದ್ದ ಈ ಹಿರಿಯ ನಟ ತಾನು ಮತ್ತು ತನ್ನ ಪತ್ನಿ ನಟಿ ಸಾಯಿರಾ ಬಾನು ಅವರು ‘ಸಂಪೂರ್ಣ ಐಸೊಲೇಷನ್ ಹಾಗೂ ಕ್ವಾರೆಂಟೈನ್’ ನಲ್ಲಿರುವುದಾಗಿ ಟ್ವೀಟ್ ಮಾಡಿದ್ದರು.


ರಾಷ್ಟ್ರೀಯ ಚಲನಚಿತ್ರ ಪುರಸ್ಕಾರ ವಿಜೇತ ಹಿರಿಯ ನಟ ದಿಲೀಪ್ ಕುಮಾರ್ ಅವರು ಕೊಹಿನೂರ್, ಮುಘಲ್-ಎ-ಅಝಂ, ಶಕ್ತಿ, ರಾಮ್ ಔರ್ ಶ್ಯಾಮ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮ ನಟನಾ ಛಾಪನ್ನು ಮೂಡಿಸಿದ್ದಾರೆ. ಬಾಲಿವುಡ್ ನ ಈ ಹಿರಿಯ ನಟ 1998ರಲ್ಲಿ ಕೊನೆಯ ಬಾರಿಗೆ ‘ಕ್ವಿಲಾ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.