ವರ್ಚುವಲ್‌ ಕೆಂಪೇಗೌಡ ಜಯಂತಿಗೆ ಪಾಲಿಕೆ ಸಜ್ಜು

ಸೆ.10ಕ್ಕೆ ಜಯಂತಿ ಆಚರಿಸಲು ಬಿಬಿಎಂಪಿ ನಿರ್ಧಾರ

Team Udayavani, Sep 4, 2020, 11:28 AM IST

ವರ್ಚುವಲ್‌ ಕೆಂಪೇಗೌಡ ಜಯಂತಿಗೆ ಪಾಲಿಕೆ ಸಜ್ಜು

ಬೆಂಗಳೂರು: ಪಾಲಿಕೆ ಪ್ರತಿ ವರ್ಷ ನಡೆಸುವ ನಾಡಪ್ರಭು ಕೆಂಪೇಗೌಡ ಜಯಂತಿ ಈ ಬಾರಿ ವರ್ಚುವಲ್‌ ಮೂಲಕ ನಡೆಯುವ ಸಾಧ್ಯತೆ ಇದೆ. ಸೆ.2ಕ್ಕೆ ಕೆಂಪೇಗೌಡ ಜಯಂತಿ ಆಚರಣೆ ಮಾಡುವುದು ಎಂದು ನಿರ್ಧರಿಸಲಾಗಿತ್ತು. ಆದರೆ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಹೀಗಾಗಿ, ಕೆಂಪೇಗೌಡ ಜಯಂತಿಯನ್ನು ಸೆ.10ಕ್ಕೆ ಪಾಲಿಕೆ ಮುಂದೂಡಿದೆ.

ಸೆ.10ಕ್ಕೆ ಮೇಯರ್‌ ಎಂ.ಗೌತಮ್‌ಕುಮಾರ್‌ ಸೇರಿದಂತೆ ಪಾಲಿಕೆಯ ಎಲ್ಲ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿದೆ. ಇದರ ಒಳಗಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಪಾಲಿಕೆಯ ಸದಸ್ಯರು ಒತ್ತಡ ಹೇರಿದ ಹಿನ್ನೆಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಮೇಯರ್‌ ಎಂ.ಗೌತಮ್‌ಕುಮಾರ್‌ ಅವರ ನೇತೃತ್ವದ ಸಮಿತಿ ನಿರ್ಣಯ ತೆಗೆದುಕೊಂಡು 20 ಜನ ಕೋವಿಡ್ ವಾರಿಯರ್ಸ್‌ಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಆನ್‌ಲೈನ್‌ ಮೂಲಕ ಕಾರ್ಯಕ್ರಮ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಹೆಚ್ಚು ಜನ ಸೇರಿ ಸಭೆ- ಸಮಾರಂಭ ನಡೆಸುವಂತಿಲ್ಲ. ಆನ್‌ಲಾಕ್‌ -4 ಸೆ.21ರ ನಂತರ ಸಡಿಲಿಕೆಯಾಗಲಿದೆ. ಆದರೆ, ಈ ವೇಳೆಗೆ ಪಾಲಿಕೆ ಸದಸ್ಯರ ಅಧಿಕಾರ ಇರುವುದಿಲ್ಲ. ಹೀಗಾಗಿ, ಹೆಚ್ಚು ಜನ ಸೇರದಂತೆ ಮೇಯರ್‌, ಉಪಮೇಯರ್‌, ಆಡಳಿತ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಸಮಿತಿ ಅಧ್ಯಕ್ಷರು ಹಾಗೂ ಪ್ರಶಸ್ತಿ ಪುರಸ್ಕೃತರು ಮಾತ್ರ ಸಭೆಯಲ್ಲಿ ಹಾಜರಿದ್ದು, ಉಳಿದವರು ವರ್ಚವಲ್‌ ಮೂಲಕ ಹಾಜರಾಗಲಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಮೇಯರ್‌ ಎಂ. ಗೌತಮ್‌ಕುಮಾರ್‌, ಕೋವಿಡ್ ಭೀತಿಯಿಂದಾಗಿ ಹೆಚ್ಚು ಜನ ಸೇರದಂತೆ ಕೆಂಪೇಗೌಡ ಜಂಯತಿ ಸಮಾರಂಭ ಹಾಗೂ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರು ಆಯಾ ವಾರ್ಡ್‌ನಲ್ಲಿಯೇ ಉಪಸ್ಥಿತರಿದ್ದು, ವರ್ಚುವಲ್‌ ಮೂಲಕ ಸಹಭಾಗಿತ್ವ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಕಾರಣದಿಂದ ಇದೇ ಮೊದಲ ಬಾರಿಗೆ ಪಾಲಿಕೆಯ ಬಜೆಟ್‌ಅನ್ನು ಆನ್‌ಲೈನ್‌ನ ಮೂಲಕ ಮಂಡನೆ ಮಾಡಲಾಗಿತ್ತು. ಅಲ್ಲದೆ, ಹಲವು ಪಾಲಿಕೆ ಸಭೆಯನ್ನೂ ಆನ್‌ಲೈನ್‌ನ ಮೂಲಕ ಮಾಡಲಾಗಿತ್ತು. ಇದೀಗ ಕೆಂಪೇಗೌಡ ಜಯಂತಿಯೂ ಆನ್‌ಲೈನ್‌(ವರ್ಚುವಲ್‌)ನ ಮೂಲಕವಾದರೆ ಹೊಸ ದಾಖಲೆ ಸೃಷ್ಟಿಯಾಗಲಿದೆ.

8ಕ್ಕೆ ಪಾಲಿಕೆಯ ಕೊನೆಯ ಕೌನ್ಸಿಲ್‌ : ಪಾಲಿಕೆಯ ಕೊನೆಯ ಕೌನ್ಸಿಲ್‌ ಸಭೆ ನಡೆಸಲು ಪಾಲಿಕೆ ನಿರ್ಧರಿಸಿದೆ. ಬಹುತೇಕ ಈ ಅವಧಿಯಲ್ಲಿ ಪ್ರಮುಖ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ. ಪಾಲಿಕೆ ಸದಸ್ಯರ ಅಧಿಕಾರ ಅವಧಿಯೇ ಸೆ.10ಕ್ಕೆ ಮುಗಿಯಲಿದೆ. ಕೊನೆಯ ಸಭೆಯಲ್ಲಿ ಪ್ರಮುಖ ನಿರ್ಣಯ ತೆಗೆದುಕೊಂಡರೂ, ಅದನ್ನು ಅನುಷ್ಠಾನ ಮಾಡಲು ಪಾಲಿಕೆ ಸದಸ್ಯರಿಗೆ ಅಧಿಕಾರ ಇರುವುದಿಲ್ಲ. ಹೀಗಾಗಿ, ಪ್ರಮುಖ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.