ರಷ್ಯಾದಲ್ಲಿ ಭಾರತ ಮತ್ತು ಚೀನ ರಕ್ಷಣ ಸಚಿವರ ಭೇಟಿ ಸಾಧ್ಯತೆ


Team Udayavani, Sep 4, 2020, 5:05 PM IST

China

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಲಡಾಖ್‌ನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತ ಮತ್ತು ಚೀನದ ರಕ್ಷಣಾ ಮಂತ್ರಿಗಳು ಇಂದು ಮಾಸ್ಕೋದಲ್ಲಿ ಸಭೆ ಸೇರುವ ನಿರೀಕ್ಷೆಯಿದೆ.

ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಗೆ ಸಂಬಂಧಿಸಿದಂತೆ ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾ ಪ್ರವಾಸದಲ್ಲಿದ್ದಾರೆ. ಚೀನದ ರಕ್ಷಣ ಸಚಿವ ವೀ ಫೆಂಗ್‌ ಕೂಡ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ವೀ ಅವರು ರಾಜನಾಥ್‌ ಅವರನ್ನು ಭೇಟಿ ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದನ್ನು ಅಧಿಕೃತವಾಗಿ ಇನ್ನೂ ದೃಢಪಡಿಸಲಾಗಿಲ್ಲ.

ಪೂರ್ವ ಲಡಾಖ್‌ನಲ್ಲಿರುವ ಭಾರತ ಮತ್ತು ಚೀನ ಯುದ್ಧದ ಕಾರ್ಮೋಡಗಳನ್ನು ಹೊಂದಿದ್ದು, ಈ ನಡುವೆ ಉಭಯ ದೇಶಗಳ ನಾಯಕರ ನಡುವಿನ ನಡೆಯುವ ಸಭೆ ಇದಾಗಿದೆ. ಆದರೆ ಮೂರು ದಿನಗಳ ಈ ಭೇಟಿಯಲ್ಲಿ ರಷ್ಯಾದಲ್ಲಿ ಶಾಂಘೈ ಸಹಕಾರ ಸಂಸ್ಥೆ ಸಭೆಗಳನ್ನು ಹೊರತುಪಡಿಸಿ ಇತರ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುವುದು ಕಷ್ಟ ಎಂದು ಹೇಳಲಾಗುತ್ತಿದೆ. ಈಗಿನ ಮಾಹಿತಿ ಪ್ರಕಾರ ರಷ್ಯಾ ಮತ್ತು ಭಾರತ ನಡುವೆ ರಕ್ಷಣಾ ಒಪ್ಪಂದಗಳ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದೆ. ರಷ್ಯಾದ ರಕ್ಷಣಾ ಸಚಿವರನ್ನೂ ರಾಜನಾಥ್‌ ಭೇಟಿ ಮಾಡಿದ್ದಾರೆ.

ರಾಜನಾಥ್‌ ಸಿಂಗ್‌ ಮಾಸ್ಕೋಗೆ ತೆರಳುವ ಮೊದಲೇ ಚೀನದ ರಕ್ಷಣಾ ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿತ್ತು. ಇಬ್ಬರು ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಲು ಚೀನ ಪ್ರಯತ್ನಿಸುತ್ತಿದೆ ಎಂದು ಗುರುವಾರ ಸುದ್ದಿ ಸಂಸ್ಥೆ ತಿಳಿಸಿತ್ತು. ಇದಕ್ಕಾಗಿ ರಾಜತಾಂತ್ರಿಕ ಮಟ್ಟದಲ್ಲಿಯೂ ಪ್ರಯತ್ನಗಳು ನಡೆಯುತ್ತಿವೆ. ಗಡಿ ವಿವಾದಗಳನ್ನು ಬಗೆಹರಿಸಲು ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಗಂಭೀರ ಪ್ರಯತ್ನಗಳನ್ನು ಮಾಡುವಂತೆ ಭಾರತವು ಚೀನಕ್ಕೆ ಆಗ್ರಹಿಸಿದೆ.

ಅಗಸ್ಟ್‌ 29-30ರ ರಾತ್ರಿ ಪಂಗೊಂಗ್‌ ಸೋ ಸರೋವರದ ದಕ್ಷಿಣ ಭಾಗವನ್ನು ಆಕ್ರಮಿಸಿಕೊಳ್ಳುವ ಚೀನದ ಪ್ರಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿತು. ಇದಾದ ಬಳಿಕ ಘರ್ಷಣೆಗಳು ನಡೆಯುತ್ತಿವೆ. ಗುರುವಾರದ ರಾತ್ರಿ ಮತ್ತು ಶುಕ್ರವಾರದ ಬೆಳವಣಿಗೆಯಲ್ಲಿ ಭಾರತೀಯ ಸೇನಾಪಡೆ ಕೂಡಾ ಆಯಕಟ್ಟಿನ ಸ್ಥಳದಲ್ಲಿ ಮಿಸೈಲ್ಲ್, ರಾಕೆಟ್ಸ್‌ ಮತ್ತು ಇತರ ಶಸ್ತ್ರಾಸ್ತ್ರವನ್ನು ಸಜ್ಜುಗೊಳಿಸಿದೆ. ಮಿಸೈಲ್‌ ಶಸ್ತ್ರಸಜ್ಜಿತ ಟಿ-90 ಯುದ್ಧ ಟ್ಯಾಂಕ್‌ ಹಾಗೂ ಪೂರ್ವ ಲಡಾಖ್‌ನ ಅತೀ ಎತ್ತರದ ಪ್ರದೇಶದಲ್ಲಿ ಟಿ-72ಎಂ1 ಟ್ಯಾಂಕ್‌ ಅನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.

ಬ್ಲ್ಯಾಕ್‌ ಟಾಪ್‌ ಮತ್ತು ಹೆಲ್ಮೆಟ್‌ ಸೇರಿದಂತೆ ಎರಡು ಪ್ರದೇಶಗಳಲ್ಲಿ ಚೀನ ಸೇನೆ ತನ್ನ ನಿಯಂತ್ರಣ ಸಾಧಿಸಿದೆ. ಹಲವು ಮೂಲಗಳ ಪ್ರಕಾರ ಉಭಯ ಪ್ರದೇಶಗಳಿಗೂ ದಾಳಿ ನಡೆಸಲು ಅನುಕೂಲವಾಗುವ ನಿಟ್ಟನಲ್ಲಿ ಭಾರತೀಯ ಸೈನಿಕರು ಎತ್ತರದ ಪ್ರದೇಶಗಳಲ್ಲಿ ಸಜ್ಜಾಗಿ ನಿಂತಿರುವುದಾಗಿ ವರದಿ ತಿಳಿಸಿದೆ. ಭಾರೀ ಪ್ರಮಾಣದಲ್ಲಿ ವೈಮಾನಿಕ ಚಟುವಟಿಕೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ. ಟಿಬೆಟ್‌ನಲ್ಲಿರುವ ವಾಯು ನೆಲೆಯಲ್ಲಿ ಚೀನ ವೈಮಾನಿಕ ಚಟುವಟಿಕೆ ಚುರುಕುಗೊಂಡಿರುವುದಾಗಿ ವರದಿ ತಿಳಿಸಿದೆ. ಭಾರತೀಯ ವಾಯುಪಡೆ ಕೂಡಾ ಸುಖೋಯ್‌ 30 ಯುದ್ಧ ವಿಮಾನವನ್ನು ಗಡಿಪ್ರದೇಶಕ್ಕೆ ರವಾನಿಸಿರುವ ಮಾಹಿತಿ ಖಚಿತವಾಗಿದೆ.

 

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.