ಚೆನ್ನೈಗೆ ಮತ್ತೂಂದು ಆಘಾತ ಐಪಿಎಲ್‌ನಿಂದ ಹಿಂದೆ ಸರಿದ ಹರ್ಭಜನ್‌


Team Udayavani, Sep 4, 2020, 9:29 PM IST

ಚೆನ್ನೈಗೆ ಮತ್ತೂಂದು ಆಘಾತ ಐಪಿಎಲ್‌ನಿಂದ ಹಿಂದೆ ಸರಿದ ಹರ್ಭಜನ್‌

ಹೊಸದಿಲ್ಲಿ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಮತ್ತೂಂದು ಆಘಾತ ಎದುರಾಗಿದೆ. ಹಿರಿಯ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ “ವೈಯಕ್ತಿಕ ಕಾರಣ’ಗಳಿಂದ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯುವುದಾಗಿ ಪ್ರಕಟಿಸಿದ್ದಾರೆ.

ಕಳೆದೆರಡು ವರ್ಷ ಚೆನ್ನೈ ತಂಡವನ್ನು ಪ್ರತಿನಿಧಿಸಿದ್ದ 40 ವರ್ಷದ ಹರ್ಭಜನ್‌ ಸಿಂಗ್‌, ಪ್ರಸ್ತುತ ಕುಟುಂಬದೊಂದಿಗೆ ಜಾಲಂಧರ್‌ನಲ್ಲಿ ಇದ್ದಾರೆ. ಪತ್ನಿ ಗೀತಾ ಮತ್ತು 4 ವರ್ಷದ ಮಗಳು ಹಿನಾಯ ಜತೆಯಲ್ಲಿದ್ದಾರೆ. ತಮಗೆ ಏಕಾಂತ ಬೇಕಿದೆ ಎಂದು ಹೇಳಿದ್ದಾರೆ. ತಾಯಿಯ ಅನಾರೋಗ್ಯದಿಂದ ಅವರು ಚೆನ್ನೈ ತಂಡದೊಂದಿಗೆ ಯುಎಇಗೆ ಪಯಣಿಸಿರಲಿಲ್ಲ. ಚೆನ್ನೈಯಲ್ಲಿ ನಡೆದ ಶಿಬಿರದಲ್ಲೂ ಪಾಲ್ಗೊಂಡಿರಲಿಲ್ಲ. ಈಗ ಕೂಟದಿಂದಲೇ ಹಿಂದೆ ಸರಿದಿದ್ದಾರೆ.

“ಐಪಿಎಲ್‌ನಿಂದ ಹೊರಗುಳಿಯುವ ನನ್ನ ನಿರ್ಧಾರವನ್ನು ಈಗಾಗಲೇ ಸಿಎಸ್‌ಕೆ ಆಡಳಿತ ಮಂಡಳಿಗೆ ತಿಳಿಸಿದ್ದೇನೆ. ಈ ಕಠಿನ ಸಮಯದಲ್ಲಿ ನಾನು ವೈಯಕ್ತಿಕ ಕಾರಣಗಳಿಂದ ಕೂಟದಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ಕುಟುಂಬಕ್ಕೆ ಏಕಾಂತ ಬೇಕಿದೆ. ನನ್ನ ಈ ನಿರ್ಧಾರವನ್ನು ಎಲ್ಲರೂ ಅರ್ಥಮಾಡಿಕೊಳ್ಳುತ್ತಾರೆಂದು ಭಾವಿಸಿದ್ದೇನೆ’ ಎಂದು ಹರ್ಭಜನ್‌ ಹೇಳಿದ್ದಾರೆ. ಅವರನ್ನು ಈ ಬಾರಿ 2 ಕೋಟಿ ರೂ. ಮೊತ್ತಕ್ಕೆ ಚೆನ್ನೈ ಖರೀದಿಸಿತ್ತು.

ಹೃದಯ ಯುಎಇಯಲ್ಲಿ…
“ನನ್ನ ಈ ನಿರ್ಧಾರವನ್ನು ಸಿಎಸ್‌ಕೆ ಆಡಳಿತ ಮಂಡಳಿ ಕ್ರೀಡಾ ಮನೋಭಾವದಿಂದ ಸ್ವೀಕರಿಸಿದೆ. ಇದಕ್ಕೆ ಕೇವಲ ಕೃತಜ್ಞತೆ ಸಲ್ಲಿಸಿದರೆ ಸಾಲದು. ನಾನಿಲ್ಲಿದ್ದರೂ ನನ್ನ ಹೃದಯ ಯುಎಇಯಲ್ಲಿದೆ’ ಎಂದಿದ್ದಾರೆ ಟರ್ಬನೇಟರ್‌ ಖ್ಯಾತಿಯ ಭಜ್ಜಿ.
ಚೆನ್ನೈ ತಂಡದಲ್ಲಿ 13 ಕೋವಿಡ್ ಪ್ರಕರಣ ಕಂಡುಬಂದದ್ದರಿಂದ ಹರ್ಭಜನ್‌ ಭೀತಿಗೊಳಗಾಗಿದ್ದಾರೆ. ಇಂಥ ಸಂದರ್ಭದಲ್ಲಿ ದುಡ್ಡಿಗಿಂತ ಕುಟುಂಬವೇ ಅವರಿಗೆ ಮುಖ್ಯವಾಗಿದೆ ಎಂಬುದಾಗಿ ಹರ್ಭಜನ್‌ ಅವರ ಗೆಳೆಯರೊಬ್ಬರು ಹೇಳಿದ್ದಾರೆ.

150 ವಿಕೆಟ್‌ ಉರುಳಿಸಿರುವ ಹರ್ಭಜನ್‌ ಸಿಂಗ್‌ ಐಪಿಎಲ್‌ ಇತಿಹಾಸದ 3ನೇ ಅತ್ಯಂತ ಯಶಸ್ವಿ ಬೌಲರ್‌ ಆಗಿದ್ದಾರೆ. ಸದ್ಯ ಚೆನ್ನೈ ತಂಡದಲ್ಲಿರುವ ಪ್ರಮುಖ ಸ್ಪಿನ್ನರ್‌ಗಳೆಂದರೆ ಇಮ್ರಾನ್‌ ತಾಹಿರ್‌, ಮಿಚೆಲ್‌ ಸ್ಯಾಂಟ್ನರ್‌ ಮತ್ತು ಪೀಯೂಷ್‌ ಚಾವ್ಲಾ.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.