ರಾಜ್ಯಾದ್ಯಂತ ವಿದ್ಯಾಗಮ ಪ್ರಾರಂಭ
Team Udayavani, Sep 5, 2020, 1:31 PM IST
ಮಾಗಡಿ: ಕೋವಿಡ್ ಕಾರಣದಿಂದ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕೇಂದ್ರ ಸರ್ಕಾರದ ನಿಲುವಿನಡಿ ಶಿಕ್ಷಣ ತಜ್ಞ ಎಂ.ಕೆ.ಶ್ರೀಧರ್ ನೇತೃತ್ವದಲ್ಲಿ ಶಿಕ್ಷಣದಲ್ಲಿ ತಂತ್ರಜ್ಞಾನ ತರಲು ವಿದ್ಯಾಗಮ ಸಹಕಾರಿಯಾಗಲಿದೆ. ರಾಜ್ಯದ ಎಲ್ಲ ವಿದ್ಯಾಗಮ ಪ್ರಾರಂಭಿಸಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದರು.
ಪಟ್ಟಣದ ವಿದ್ಯಾನಿಧಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಕರ್ಣೀಕರ ಕಲ್ಯಾಣಿ ಕಣ್ವ ಉಗಮ ಸ್ಥಾನದ ಬಳಿ ತೆರಳಿ ಮಕ್ಕಳ ಕಲಿಕೆ ಹೇಗಿದೆ ಎಂದು ಸ್ವತಃ ಸಚಿವರೇ ಮಕ್ಕಳಿಂದ ಪದ್ಯ ಓದಿಸಿದರು. ರಾಷ್ಟ್ರ ಗೀತೆ ಹಾಡಿಸಿದರು. ಕೆಲವೊಂದು ಪ್ರಶ್ನೆಗಳನ್ನು ಕೇಳಿದರು.
ಕೋವಿಡ್ ಬಗ್ಗೆ ಮಾಹಿತಿ: ಮಕ್ಕಳಿಂದಲೇ ಕೋವಿಡ್ ಬಗ್ಗೆ ಮಾಹಿತಿ ಪಡೆದುಕೊಂಡರು. ಕೋವಿಡ್ ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿಸಿಕೊಟ್ಟರು. ಮಕ್ಕಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದನ್ನು ಕಂಡು ಸಂತಸ ಪಟ್ಟರು. ಮನೆಯಿಂದಲೇ ಕಾಯಿಸಿ ಹಾರಿಸಿದ ನೀರನ್ನು ತಂದು ಕುಡಿಯಬೇಕೆಂದು ಮಕ್ಕಳಿಗೆ ಸಲಹೆ ಸಹ ನೀಡಿದ ಸಚಿವರು, ಸ್ಥಳೀಯ ಮಹಾನ್ ವ್ಯಕ್ತಿಗಳ ಪರಿಚಯ, ಚಾರಿತ್ರಿಕ ಮತ್ತು ಪ್ರಾಕೃತಿಕ ಸಂಪತ್ತಿನ ಕುರಿತು ಮಕ್ಕಳಿಗೆ ಪರಿಚಯಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಖಾಸಗಿ ಶಾಲಾ ಸಂಸ್ಥೆಗಳು ಆನ್ ಲೈನ್ ಶಿಕ್ಷಣ ನೀಡುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಮಕ್ಕಳಿಗೆ ನಿರಂತರ ಕಲಿಕೆಯಿಂದ ವಂಚಿತರಾಗುತ್ತಾರೆ. ಕೋವಿಡ್ ಕಾರಣದಿಂದಲೇ ಜೂನ್, ಜುಲೈ, ಆಗಸ್ಟ್ ತಿಂಗಳಲ್ಲಿ ಶಾಲೆಗಳು ಪ್ರಾರಂಭಗೊಳ್ಳಲಿಲ್ಲ, ಕೇವಲ ಸರ್ಕಾರಿ ಮಕ್ಕಳಿಗೆ ಮಾತ್ರವಲ್ಲ ಎಲ್ಲ ಮಕ್ಕಳಿಗೆ ವಿದ್ಯಾಗಮ ಅವಕಾಶ ಕೊಟ್ಟಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್, ಯುವ ಅಧ್ಯಕ್ಷ ಶಂಕರ್, ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಂ.ಧನಂಜಯ, ಬಾಲಾಜಿ, ಶಿಕ್ಷಕರ ಸಂಘದ ಎಂ.ಕೆಂಪೇಗೌಡ, ಲೋಕೇಶ್,ಮಲ್ಲೂರು ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದೇಶ್ವರ್, ಕುಮಾರ್, ಧನಂಜಯ, ವಿದ್ಯಾನಿಧಿ ಶಾಲೆಯ ಪ್ರಾಂಶುಪಾಲ ಆರ್. ಶ್ರೀನಿವಾಸ್, ಮುಖ್ಯ ಶಿಕ್ಷಕ ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಆರಸನಾಳ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ