ಕೋವಿಡ್ ಹೆಚ್ಚಳ: ದ.ಕ. ಆಸ್ಪತ್ರೆಗಳಲ್ಲಿ ಜಾಗವಿಲ್ಲ!

120 ಐಸಿಯು ಬೆಡ್‌, 117 ವೆಂಟಿಲೇಟರ್‌, 611 ಹೈ ಆಕ್ಸಿಜನ್‌ ಬೆಡ್‌ಗಳು ಭರ್ತಿ!

Team Udayavani, Sep 6, 2020, 5:45 AM IST

ಕೋವಿಡ್ ಹೆಚ್ಚಳ: ದ.ಕ. ಆಸ್ಪತ್ರೆಗಳಲ್ಲಿ ಜಾಗವಿಲ್ಲ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ದಿನೇದಿನೆ ಏರುತ್ತಿದ್ದು, ವೆಂಟಿಲೇಟರ್‌ ಮತ್ತು ಐಸಿಯು ಬೆಡ್‌ ಭರ್ತಿಯಾದ ಪರಿಣಾಮ ರೋಗಿಗಳು ತುರ್ತು ಚಿಕಿತ್ಸೆಗೆ ಪರದಾಡುವಂತಾಗಿದೆ. ಸರಕಾರಿ ವೆನ್ಲಾಕ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 30 ಬೆಡ್‌ಗಳಿದ್ದು, ಅಷ್ಟೇ ವೆಂಟಿಲೇಟರ್‌ಗಳಿವೆ. ಅಲ್ಲದೆ ವಾರ್ಡ್‌ನಲ್ಲಿ ಹೈ ಡಿಪೆಂಡೆನ್ಸಿ ಯುನಿಟ್‌ ತೆರೆದು ಹೆಚ್ಚುವರಿಯಾಗಿ 15 ವೆಂಟಿಲೇಟರ್‌ ಬೆಡ್‌ ಹಾಕಲಾಗಿದೆ. 380 ಹೈ ಆಕ್ಸಿಜನ್‌ ಬೆಡ್‌ ಇದೆ. ಕೊರೊನಾಕ್ಕೆ ಚಿಕಿತ್ಸೆ ನೀಡುವ ಜಿಲ್ಲೆಯ 9 ಖಾಸಗಿ ಆಸ್ಪತ್ರೆಗಳು ಮತ್ತು ವೆನ್ಲಾಕ್‌ ಸಹಿತ ಒಟ್ಟು 120 ಐಸಿಯು ಬೆಡ್‌, 117 ವೆಂಟಿಲೇಟರ್‌ ಬೆಡ್‌ ಮತ್ತು 611 ಹೈ ಆಕ್ಸಿಜನ್‌ ಬೆಡ್‌ಗಳು ಕೊರೊನಾ ರೋಗಿ ಗಳಿಗೆ ಮೀಸಲಾಗಿವೆ. ಸದ್ಯ ಇವೆಲ್ಲವೂ ಭರ್ತಿಯಾಗಿದ್ದು, ಹೊಸದಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಅಗತ್ಯವಿರುವವರು ದಾರಿಕಾಣದಾಗಿದ್ದಾರೆ.

ಆಸ್ಪತ್ರೆಗಳ ಅಸಹಾಯಕತೆ
ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂಬ ನಿಯಮವನ್ನು ಎಲ್ಲ ಆಸ್ಪತ್ರೆಗಳು ಪಾಲಿಸಿವೆ. ಐಸಿಯುವನ್ನು ಸಾಮಾನ್ಯ ಐಸಿಯು, ಕೋವಿಡ್‌ ಐಸಿಯು ಮತ್ತು ಕೋವಿಡ್‌ ಶಂಕಿತರಿಗಿರುವ ಐಸಿಯು ಎಂದು ವಿಭಾಗಗಳನ್ನು ಮಾಡಿ
ಕೊಳ್ಳಲಾಗಿದೆ. ಅಪಘಾತ ಸಹಿತ ಯಾವುದೇ ತತ್‌ಕ್ಷಣದ ಚಿಕಿತ್ಸೆ ಅಗತ್ಯವಿರುವವರು ಬಂದರೂ ಸಾಮಾನ್ಯ ಐಸಿಯುವಿಗೆ ಸ್ಥಳಾಂತರಿಸುವ ಮುನ್ನ ಕೊರೊನಾ ಪರೀಕ್ಷೆ ಅಗತ್ಯ. ವರದಿಯ ಬಳಿಕ ನೆಗೆಟಿವ್‌ ಇದ್ದಲ್ಲಿ ಸಾಮಾನ್ಯ ಐಸಿಯುಗೆ, ಪಾಸಿಟಿವ್‌ ಬಂದಲ್ಲಿ ಕೋವಿಡ್‌ ಐಸಿಯುಗೆ ಸ್ಥಳಾಂತರಿಸಲಾಗುತ್ತದೆ. ವರದಿ ಬರುವ ಮೊದಲೇ ಸಾಮಾನ್ಯ ಐಸಿಯುಗೆ ಕಳುಹಿಸಿದರೆ ಬಳಿಕ ಪಾಸಿಟಿವ್‌ ಎಂದಾದಲ್ಲಿ ಆತನಿಂದ ಸಾಮಾನ್ಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುವರಿಗೂ ಕೊರೊನಾ ಹರಡುವ ಸಾಧ್ಯತೆ ಇರುವುದರಿಂದ ಈ ರೀತಿಯ ಮುನ್ನೆಚ್ಚರಿಕೆ ಅನಿವಾರ್ಯವೂ ಆಗಿದೆ. ಹೀಗಾಗಿ ಆಸ್ಪತ್ರೆ ಮಂದಿಯೂ ಅಸಹಾಯಕರಾಗಿದ್ದಾರೆ.

ರೋಗಿಯ ಪರದಾಟ
ವೆನ್ಲಾಕ್‌ನ ಐಸಿಯುವಿನಲ್ಲಿ ಹಾಸಿಗೆ ಲಭ್ಯವಿಲ್ಲ ಎಂಬುದಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ರೋಗಿ ಕಡೆಯವರಿಗೆ ಅಲ್ಲಿಯೂ ಐಸಿಯು ಫುಲ್‌ ಎಂಬ ಉತ್ತರ ಸಿಗುತ್ತಿದೆ. ಗಂಭೀರ ಸ್ಥಿತಿಯಲ್ಲಿರುವವರಿಗೆ ಪ್ರಾಣಾಪಾಯವೂ ಎದುರಾಗುತ್ತಿದೆ. ಹೊರ ಜಿಲ್ಲೆಯವರೂ ಮಂಗಳೂರಿಗೆ ಚಿಕಿತ್ಸೆಗೆ ಬರುವುದರಿಂದ ಹೆಚ್ಚಿನ ಒತ್ತಡ ಇಲ್ಲಿದೆ.

ಕೊನೆಯವರೆಗೆ ಕಾಯಬೇಡಿ
ಗರ್ಭಿಣಿಯರು, 60 ವರ್ಷ ಮೇಲ್ಪಟ್ಟವರು, 10 ವರ್ಷ ಕೆಳಗಿನ ಮಕ್ಕಳು, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕಿತರು ಆರಂಭಿಕ ಲಕ್ಷಣ ಕಂಡು ಬಂದಾಗಲೇ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಬೇಕು. ಕೊನೆಯವರೆಗೆ ಕಾದು ರೋಗ ಉಲ್ಬಣಗೊಂಡ ಮೇಲೆ ಆಸ್ಪತ್ರೆಗೆ ಧಾವಿಸಿದರೆ ಐಸಿಯು, ವೆಂಟಿಲೇಟರ್‌ ಸಮಸ್ಯೆ ಎದುರಾಗಿ ಪ್ರಾಣಕ್ಕೆರವಾಗುವ ಸಾಧ್ಯತೆ ಇರುತ್ತದೆ. ಜನರೇ ಜಾಗೃತರಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ಮನವಿ ಮಾಡಿದ್ದಾರೆ.

1077ಕ್ಕೆ ಕರೆ ಮಾಡಿ
ಗಂಭೀರ ಸ್ಥಿತಿಯಲ್ಲಿರುವ ರೋಗಿ ಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಅಗತ್ಯವಿದ್ದು, ದಾಖಲಾಗಲು ಏನೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ 1077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಐಸಿಯು ಕೊರತೆಯಿದೆ: ಡಿಸಿ
ಹೊರಜಿಲ್ಲೆಯ ರೋಗಿಗಳು ಬರುತ್ತಿರುವುದರಿಂದ ಸದ್ಯ ಐಸಿಯು ಸಮಸ್ಯೆ ಎದುರಾಗಿದೆ. ಸರಕಾರದ ಕಡೆಯಿಂದ 103 ವೆಂಟಿಲೇಟರ್‌ಗಳನ್ನು ಹೆಚ್ಚುವರಿಯಾಗಿ ತರಿಸಿದ್ದು, ಕೆಲವನ್ನು ಬಳಸಿಕೊಳ್ಳಲಾಗುತ್ತಿದೆ. ಉಳಿದವುಗಳನ್ನು ಶೀಘ್ರ ವಿತರಿಸಲಾಗುವುದು. ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸುಮಾರು 50 ಐಸಿಯು ಬೆಡ್‌, 5-8 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.
– ಡಾ| ಕೆ.ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.