ವಾಹನೋದ್ಯಮಕ್ಕೆ ಉತ್ತೇಜನ ನೀಡಲು; ಮಾಸಾಂತ್ಯಕ್ಕೆ ಗುಜರಿ ನೀತಿ ಜಾರಿ: ಗಡ್ಕರಿ
Team Udayavani, Sep 6, 2020, 6:15 AM IST
ಹೊಸದಿಲ್ಲಿ: ದೇಶದಲ್ಲಿ ವಾಹನೋದ್ಯಮದ ಉತ್ತೇಜನಕ್ಕೆ ಪೂರಕವಾಗಿ ಹಳೆಯ, ಮಾಲಿನ್ಯಕಾರಕ ವಾಹನಗಳ ವಿಲೇವಾರಿಗೆ “ಗುಜರಿ ನೀತಿ’ ಈ ತಿಂಗಳಾಂತ್ಯದಲ್ಲಿ ಜಾರಿಗೆ ಬರಲಿದೆ. ಹಳೆಯ ವಾಹನಗಳನ್ನು ಗುಜರಿಗೆ ಹಾಕಿದರೆ ಅದಕ್ಕೆ ಹಣಕಾಸಿನ ನೆರವು ನೀಡುವುದರ ಜತೆಗೆ ಹೊಸ ವಾಹನದ ಖರೀದಿಗೆ ಉತ್ತೇಜಿಸುವುದು ಈ ಯೋಜನೆಯ ಮೂಲ ಉದ್ದೇಶ.
ಕಳೆದ ಒಂದೂವರೆ ವರ್ಷದಿಂದ ಈ ಗುಜರಿ ನೀತಿಯ ಬಗ್ಗೆ ಹೇಳುತ್ತಲೇ ಇದ್ದೇನೆ. ಈಗ ಅದು ಅಂತಿಮ ಗೊಂಡಿದ್ದು, ಈ ತಿಂಗಳ ಅಂತ್ಯಕ್ಕೆ ಜಾರಿಯಾಗಲಿದೆ. ವಾಹನೋದ್ಯಮ ಸಂಕಷ್ಟದಲ್ಲಿದೆ ಎನ್ನುವುದು ಸರಕಾರಕ್ಕೆ ಗೊತ್ತಿದೆ. ನಿಮ್ಮ ನೆರವಿಗೆ ಸರಕಾರ ಬರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಹಳೆಯ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಗುಜರಿಗೆ ಹಾಕಿದರೆ, ಹೊಸ ವಾಹನಗಳಿಗೆ ಬೇಡಿಕೆ ಬರುತ್ತದೆ. ಆಗ ತನ್ನಿಂತಾನೇ ವಾಹನೋದ್ಯಮ ಚೇತರಿಸಿಕೊಳ್ಳುತ್ತದೆ. ಅದಕ್ಕಾಗಿ ಅಂತಹ ವಾಹನಗಳನ್ನು ಗುಜರಿಗೆ ಹಾಕುವ ನೀತಿ ಜಾರಿ ಮಾಡಬೇಕೆನ್ನುವುದು ವಾಹನೋದ್ಯಮಿಗಳ ಒತ್ತಾಯ.
ಗುಜರಿ ನೀತಿ ಜಾರಿಗೆ ಬಂದರೆ, 2020-21ರ ವಿತ್ತೀಯ ವರ್ಷದಲ್ಲಿ 90 ಲಕ್ಷ ವಾಹನಗಳು, 2025ರೊಳಗೆ 2.8 ಕೋಟಿ ವಾಹನಗಳು ಸಂಚಾರ ನಿಲ್ಲಿಸಲಿವೆ. ಈ ಹಳೆಯ ವಾಹನಗಳ ಬಿಡಿ ಉಪಕರಣ ಗಳನ್ನು ಮರುಬಳಕೆ ಮಾಡಲು ಅಗತ್ಯ ಘಟಕಗಳಿಗೆ ಉತ್ತೇಜನ ನೀಡಲಾಗುವುದು.
ಸಂಕಷ್ಟದಲ್ಲಿ ವಾಹನೋದ್ಯಮ
ಕಳೆದ ಎರಡು ವರ್ಷಗಳಿಂದ ದೇಶೀಯ ವಾಹನೋದ್ಯಮ ಸಂಕಷ್ಟದಲ್ಲಿದೆ. 2019-20ರಲ್ಲಿ ವಾಹನ ಮಾರಾಟ ಶೇ. 18ರಷ್ಟು ಕುಸಿದಿದೆ. ಇದು ಕಳೆದ ಎರಡು ದಶಕಗಳಲ್ಲೇ ಅತೀ ಕಳಪೆ. ಪ್ರಸಕ್ತ ವಿತ್ತೀಯ ವರ್ಷದಲ್ಲಿ ಶೇ. 26ರಿಂದ ಶೇ. 45ರಷ್ಟು ಕುಸಿಯುವ ನಿರೀಕ್ಷೆಯಿದೆ. ಅದರಲ್ಲೂ ವಾಹನೋದ್ಯಮದ ಆರ್ಥಿಕತೆಯ ಸ್ವಾಸ್ಥ್ಯ ನಿರ್ಧರಿಸುವ ಟ್ರಕ್ಗಳು, ಬಸ್ಗಳ ಮಾರಾಟ ತೀವ್ರವಾಗಿ ಕುಸಿದಿದೆ.
ಅಮೆರಿಕ ಮಾದರಿ ಅಮೆರಿಕದಲ್ಲಿ ಜಾರಿಯಲ್ಲಿರುವ “ಕ್ಯಾಷ್ ಫಾರ್ ಕ್ಲಂಕರ್ಸ್’ನ ಭಾರತೀಯ ರೂಪ ಇದು. ಯಾವುದೇ ವಾಹನದ ಆಯಸ್ಸು 15 ವರ್ಷ ಪೂರ್ಣಗೊಂಡರೆ ಅವುಗಳ ಮರುಮಾರಾಟ ಬೆಲೆ ಪರಿಪೂರ್ಣ ಕುಸಿದಿರುತ್ತದೆ. ಅವುಗಳನ್ನು ಗುಜರಿಗೆ ಹಾಕುವ ಈ ಯೋಜನೆಯಿಂದ ಎರಡು ಲಾಭ- ವಾಹನ ಮಾಲಕರಿಗೆ ಹಣಕಾಸಿನ ನೆರವು ಸಿಗುತ್ತದೆ ಮತ್ತು ಹೊಗೆ ಉಗುಳುವ ಇಂಥ ವಾಹನಗಳ ನಿವಾರಣೆಯಿಂದ ಪರಿಸರ ಶುದ್ಧವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೊಸ ವಾಹನಗಳ ಖರೀದಿ ಹೆಚ್ಚುತ್ತದೆ.
2008-09ರಲ್ಲಿ ಅಮೆರಿಕ ಆರ್ಥಿಕ ಹಿಂಜರಿತದಿಂದ ಚೇತರಿಸಿಕೊಂಡ ಅನಂತರ ಈ ಯೋಜನೆ ಜಾರಿಗೊಳಿಸಿತ್ತು. ಹಳೆಯ ವಾಹನವನ್ನು ಗುಜರಿಗೆ ಹಾಕಿದರೆ 4,500 ಡಾಲರ್ ನೆರವನ್ನು ನೀಡುವುದರ ಜತೆಗೆ ಹೊಸ ವಾಹನ ಖರೀದಿಗೆ ಉತ್ತೇಜಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!