ಮತ್ತೆ 195 ಜನರಿಗೆ ಸೋಂಕು
Team Udayavani, Sep 6, 2020, 3:25 PM IST
ಗದಗ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 195 ಜನರಿಗೆ ಕೋವಿಡ್ ಸೋಂಕು ಕಂಡುಬಂದಿದೆ. ಜೊತೆಗೆ 199 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 6303ಕ್ಕೆ ಏರಿಕೆಯಾಗಿದ್ದು, 4523 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನುಳಿದಂತೆ 1688 ಪ್ರಕರಣಗಳು ಸಕ್ರಿಯವಾಗಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಗದಗ-101, ಮುಂಡರಗಿ-27, ನರಗುಂದ-16, ರೋಣ-28, ಶಿರಹಟ್ಟಿ-10 ಹಾಗೂ ಹೊರ ಜಿಲ್ಲೆಯ 13 ಜನರಿಗೆ ಕೋವಿಡ್ ಸೋಂಕು ಖಚಿತವಾಗಿದೆ.
92 ಜನರು ಕೋವಿಡ್ಗೆ ಬಲಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ನಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಮತ್ತೆ ನಾಲ್ವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಈ ವರೆಗೆ 92 ಜನರು ಕೋವಿಡ್ ಗೆ ಬಲಿಯಾದಂತಾಗಿದೆ. ಗದಗ ನಗರದ ಪುಟ್ಟರಾಜನಗರ ನಿವಾಸಿ 62 ವರ್ಷದ ವೃದ್ಧ(ಪಿ-315299)ನಿಗೆ ಆ.26 ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಹೃದಯ ಸಂಬಂಧಿತ ಕಾಯಿಲೆ, ನಿಮೋನಿಯಾಯಿಂದಾಗಿ ಸೆ.1 ರಂದು ಮೃತಪಟ್ಟಿದ್ದಾರೆ. ನರಗುಂದ ತಾಲೂಕಿನ ಜಗಾಪುರ ಗ್ರಾಮದ ನಿವಾಸಿ 72 ವರ್ಷದ ವೃದ್ಧ(ಪಿ-374865)ನಿಗೆ ಸೆ. 2ರಂದು ಕೋವಿಡ್ ಸೋಂಕು ಖಚಿತವಾಗಿದ್ದು, ಹೃದಯ ಸಂಬಂಧಿ ಕಾಯಿಲೆ, ನಿಮೋನಿಯಾ, ಮಧುಮೇಹದಿಂದ ಸೆ. 2ರಂದು ಕೊನೆಯುಸಿರೆಳೆದರು.
ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿ 62 ವರ್ಷದ ವೃದ್ಧ(ಪಿ-361429)ನಿಗೆ ಸೆ.1 ರಂದು ಸೋಂಕು ಪತ್ತೆಯಾಗಿದ್ದು, ನಿಮೋನಿಯಾ, ಶ್ವಾಸಕೋಶ ತೊಂದರೆಯಿಂದಾಗಿ ಸೆ. 2ರಂದು ಸಾವನ್ನಪ್ಪಿದ್ದಾರೆ. ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ನಿವಾಸಿ 24 ವರ್ಷದ ವ್ಯಕ್ತಿ(ಪಿ-347664)ಗೆ ಆ.30 ರಂದು ಸೋಂಕು ಕಂಡು ಬಂದಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆ. 30ರಂದು ಕೋವಿಡ್-19 ಅಲ್ಲದ ಅನ್ಯ ಕಾರಣದಿಂದ ನಿಧನರಾದರು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?