ಡಾ| ರಾಧಾಕೃಷ್ಣನ್‌ ಆದರ್ಶ ಮೈಗೂಡಿಸಿಕೊಳ್ಳಿ: ಉದಾಸಿ


Team Udayavani, Sep 6, 2020, 3:34 PM IST

hv-tdy-1

ಹಾನಗಲ್ಲ: ಜೀವನದ ಪ್ರತಿಯೊಂದು ಕ್ಷಣವೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿಯೇ ಶ್ರಮಿಸಿದ ಡಾ| ಎಸ್‌.ರಾಧಾಕೃಷ್ಣನ್‌, ಒಬ್ಬ ಆದರ್ಶ ಶಿಕ್ಷಕನಲ್ಲಿರಬೇಕಾದ ಶಾಶ್ವತ ತತ್ವ, ಮೌಲ್ಯಗಳಿಗೆ ಚಿರಂತನ ಸಾಕ್ಷಿಯಾಗಿದ್ದಾರೆ. ಅವರ ತತ್ವದ ಅನುಷ್ಠಾನವೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗುರು ನಮನ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದ್ದಾರೆ.

ಶನಿವಾರ ಶಿಕ್ಷಕರ ದಿನಾಚರಣೆ ಪ್ರಯುಕ್ತ ಪತ್ರಿಕಾ ಹೇಳಿಕೆ ಮೂಲಕ ಶುಭಾಶಯ ಕೋರಿರುವ ಅವರು, ಸೆ.5 ನಮ್ಮ ದೇಶದ ಸರ್ವಶ್ರೇಷ್ಠ ವ್ಯಕ್ತಿ, ಶಕ್ತಿ, ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನ. ಗೌರವಾನ್ವಿತ ಶಿಕ್ಷಕರಿಗೆ ನಮನ ಸಲ್ಲಿಸುವ ಹಾಗೂ ಶಿಕ್ಷಕರನ್ನು ಸ್ಮರಿಸುವ ಸಂತಸದ ದಿನ. ನಮ್ಮ ಬಾಲ್ಯದಿಂದಲೂ ಪ್ರಭಾವ ಬೀರಿದ ವ್ಯಕ್ತಿ ಎಂದರೆ ಶಿಕ್ಷಕ ಎಂದು ಹೇಳುತ್ತೇವೆ. ಕಾರಣ ಅಂತಹ ಮಾಂತ್ರಿಕ ಶಕ್ತಿ ಶಿಕ್ಷಕರಲ್ಲಿದೆ. ಆ ಶಿಕ್ಷಕರ ನಡೆ-ನುಡಿ, ಶಿಸ್ತು, ವರ್ತನೆ, ಸಮಯ ಪ್ರಜ್ಞೆ, ಬೋಧನಾ ಕೌಶಲ್ಯ, ಹಾವ-ಭಾವ, ತಾಳ್ಮೆ, ಚಿಂತನೆ, ಪ್ರಾಮಾಣಿಕತೆ, ತತ್ವಜ್ಞಾನ ಇವುಗಳು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದವು. ಡಾ| ಎಸ್‌.ರಾಧಾಕೃಷ್ಣನ್‌ ಅವರು ಶಿಕ್ಷಕ ವರ್ಗಕ್ಕೆ ಸಮಾಜದಲ್ಲಿ ಗೌರವದ ಸ್ಥಾನಮಾನ ತಂದಿತ್ತ ಮಹಾನ್‌ ಶಿಕ್ಷಕರಾಗಿದ್ದರು ಎಂದು ತಿಳಿಸಿದ್ದಾರೆ.

ಶಿಕ್ಷಕರು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅವರ ಕೃತಿಗಳನ್ನು ಓದಿ ಅವರ ತತ್ವಗಳನ್ನು ಪಾಲಿಸುವ ಮೂಲಕ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಶ್ರದ್ಧೆ ಉಳ್ಳವನಿಗೆ ಜ್ಞಾನ ಲಭಿಸುತ್ತದೆ. ಮುಂದೆ ಗುರಿ ಇರಬೇಕು, ಹಿಂದೆ ಒಬ್ಬ ಗುರು ಇರಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಶಿಕ್ಷಕ ಜಾಗೃತನಾಗಿ ಶಿಕ್ಷಣ ವ್ಯವಸ್ಥೆಯನ್ನೇ ಅರ್ಥಪೂರ್ಣ ಮಾಡಬೇಕಾಗಿದೆ. ಶಿಕ್ಷಕನಾದವನಿಗೆ ಮಗು, ಶಾಲೆ, ಸಮಾಜ, ಪರಿಸರಗಳ ಬಗ್ಗೆ ಸರಿಯಾದ ಅರಿವು ಇರಬೇಕು. ಬದುಕಿನಲ್ಲಿ ಬದುಕುವ ದಾರಿಯ ಮಾರ್ಗದರ್ಶನ ನೀಡುವುದೇ ಶಿಕ್ಷಣ ಎಂದು ಶಾಸಕರು ತಿಳಿಸಿದ್ದಾರೆ.

ಗುರು ವ್ಯಕ್ತಿಯಲ್ಲ-ಶಕ್ತಿ: ಸಂಸದ ಉದಾಸಿ : ಹಾನಗಲ್ಲ: ಯಾವುದೇ ಒಂದು ದೇಶದ ಪ್ರಗತಿ ಮತ್ತು ವಿಕಾಸ ಆ ದೇಶದ ಶಿಕ್ಷಣದ ಗುಣಮಟ್ಟವನ್ನು ಅವಲಂಬಿಸಿರುತ್ತದೆ. ತರಗತಿಯಲ್ಲಿ ಪಾಠದ ವಿಷಯವನ್ನು ಒಪ್ಪಿಸಿದವರು ಮಾತ್ರ ಶಿಕ್ಷಕರಲ್ಲ. ವ್ಯಕ್ತಿಗಳ ಅಪೇಕ್ಷಿತ ವರ್ತನೆಗಳಲ್ಲಿ ಬದಲಾವಣೆ ತಂದವರನ್ನೂ ನಾವು ಗುರುಗಳ ಸ್ಥಾನದಲ್ಲಿ ಕಾಣುತ್ತೇವೆ ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ಮೂಲಕ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿರುವ ಅವರು, ಗುರು ಎಂದರೆ ವ್ಯಕ್ತಿಯಲ್ಲ. ಅದೊಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೇ ಗುರು. ರಾಧಾಕೃಷ್ಣನ್‌ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸುವಂತೆ ತಿಳಿಸಿದ್ದರು. ಮನಸ್ಸು ಮತ್ತು ಆತ್ಮಗಳತರಬೇತಿಯೇ ಶಿಕ್ಷಣ. ವೈಜ್ಞಾನಿಕ ಪ್ರವೃತ್ತಿಯ ವಿಕಾಸವೇ ಶಿಕ್ಷಣ. ಪ್ರಜಾಪ್ರಭುತ್ವಕ್ಕಾಗಿ ಶಿಕ್ಷಣ ಮತ್ತು ಸ್ವಯಂ ಶಿಸ್ತು, ಸ್ತ್ರೀ-ಪುರುಷರಿಗೆ ಸಮಾನ ಶಿಕ್ಷಣ ರಾಧಾಕೃಷ್ಣನ್‌ ಅವರ ಶೈಕ್ಷಣಿಕ ವಿಚಾರವಾಗಿದ್ದವು ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಮೊದಲ ಗುರು ತಾಯಿಯಾದರೆ, ಶಿಕ್ಷಕ ಎರಡನೇ ಗುರುವಾಗಿದ್ದಾನೆ. ದೇಶದ ಪ್ರತಿ ವಿದ್ಯಾವಂತ ಸಾಧಕರ ಹಿಂದೆ ಶಿಕ್ಷಕರ ಶ್ರಮ ಅಡಗಿದೆ. ಶಿಕ್ಷಕರು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಬೋಧನೆ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು. ಮಕ್ಕಳು ವಿಷಯಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಪರೀಕ್ಷೆಯಲ್ಲಿ ಪ್ರಶ್ನೆಗಳಿಗೆ ಗೈಡುಗಳ ಸಹಾಯವಿಲ್ಲದೆ ಉತ್ತರಿಸಲು ಸಾಧ್ಯವಾಗುತ್ತದೆ. ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ಶಿಕ್ಷಕರು ವೃತ್ತಿಯ ಘನತೆ ಅರಿತುಕೊಂಡು ಕೆಲಸ ಮಾಡಬೇಕು. ಐಸೆನ್‌ ಹೋವರ್‌ ಹೇಳಿದಂತೆ, ಅಂಜಿಕೆ-ಅಪನಂಬಿಕೆಗಳು ತುಂಬಿರುವ ಈ ಜಗತ್ತಿನಲ್ಲಿ ಪರಸ್ಪರ ಗೌರವ ಹಾಗೂ ವಿಶ್ವಾಸಾರ್ಹ ಸ್ನೇಹಗಳನ್ನು ಬೆಳೆಸುವುದೇ ಶಿಕ್ಷಣದ ಗುರಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.