ಸಂಯುಕ್ತಾ ಪ್ರಕರಣ: ಕವಿತಾ ರೆಡ್ಡಿ ವಿರುದ್ಧ ದೂರು ದಾಖಲು
Team Udayavani, Sep 7, 2020, 11:29 AM IST
ಬೆಂಗಳೂರು: ಉದ್ಯಾನವನದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಧರಿಸಿದ್ದ ಬಟ್ಟೆಗೆ ಕಾಂಗ್ರೆಸ್ ಪಕ್ಷದ ವಕ್ತಾರೆ ಕವಿತಾ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದ ವಿವಾದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
“ಕವಿತಾ ರೆಡ್ಡಿ ಹಾಗೂ ಇತರರು ತಮ್ಮ ಮೇಲೆ ಹಲ್ಲೆ ನಡೆಸಿ, ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಸಂಯುಕ್ತಾ ಹೆಗ್ಡೆ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸೆ. 4ರಂದು ಅಗರ ಕೆರೆಯ ಉದ್ಯಾನ ವನದಲ್ಲಿ ಸಂಯುಕ್ತಾ ತನ್ನ ಸ್ನೇಹಿತೆಯರ ಜತೆ ವ್ಯಾಯಾಮ ಮಾಡುತ್ತಿದ್ದಾಗ ಕೆಲವರು ಆಕೆ ಧರಿಸಿದ್ದ ಉಡುಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಕವಿತಾ ರೆಡ್ಡಿಯನ್ನು ಕರೆಸಿದ್ದರು. ಇದೇ ವಿಚಾರದಲ್ಲಿ ಬಳಿಕ ವಾಗ್ವಾದ ನಡೆದಿತ್ತು. ಇಡೀ ಘಟನೆಯನ್ನು ಸಂಯುಕ್ತಾ ತನ್ನ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಲೈವ್ ಮಾಡಿದ್ದು, ಕೆಲವರು ಸಂಯುಕ್ತಾ ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿದ್ದರು. ಇದನ್ನು ಸಂಯುಕ್ತಾ ನಿರಾಕರಿಸಿದ್ದರು. ಜತೆಗೆ ವೀಡಿಯೋದಲ್ಲಿ ಕವಿತಾ ರೆಡ್ಡಿ ಹಲ್ಲೆ ಮಾಡಲು ಮುಂದಾಗಿ ದ್ದುದು ಸೆರೆಯಾಗಿತ್ತು. ಇವೆಲ್ಲ ಪೊಲೀಸ್ ಸಿಬಂದಿ ಸಮ್ಮುಖದಲ್ಲಿಯೇ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ