ಮತ್ತೆ ಮೊಳಗಿದ “ವಾಲ್ಮೀಕಿ ಸಮುದಾಯದ ಮೀಸಲಾತಿ ‘ ಧ್ವನಿ
Team Udayavani, Sep 7, 2020, 12:26 PM IST
ಹರಿಹರ: ವಾಲ್ಮೀಕಿ ಸಮುದಾಯದ ಮೀಸಲಾತಿ ಬೇಡಿಕೆ ಕೂಗು ಮತ್ತೆ ಪ್ರತಿಧ್ವನಿಸುತ್ತಿದೆ. ಈ ಹಿಂದೆ ಪಾದಯಾತ್ರೆ ನಡೆಸಿದ್ದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ರವಿವಾರ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಸಭೆ ನಡೆಸಲಾಗಿದೆ. ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮುಖಂಡರು ಪಾಲ್ಗೊಂಡು ಶೇ. 7.5ರಷ್ಟು ಮೀಸಲಾತಿಗಾಗಿ ಸರಕಾರವನ್ನು ಆಗ್ರಹಿಸಲು ನಿರ್ಣಯ ಕೈಗೊಳ್ಳಲಾಗಿದೆ.
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಮುಂಬರುವ ಅಧಿವೇಶನದಲ್ಲಿ ಸರಕಾರ ವಾಲ್ಮೀಕಿ ಸಮಾಜದ ಮೀಸಲಾತಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಹಲವು ದಶಕಗಳಿಂದ ಹೋರಾಡುತ್ತಿದ್ದರೂ ಸರಕಾರ ಸಮಾಜದ ನ್ಯಾಯಯುತ ಬೇಡಿಕೆ ಈಡೇರಿಸದಿರುವುದು ದುರದೃಷ್ಟಕರ. ಸಿಎಂ ಯಡಿಯೂರಪ್ಪ ಕೂಡಲೇ ಮೀಸಲಾತಿ ಬಗ್ಗೆ ಸರಕಾರದ ನಿಲುವು ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.
ಬಿಎಸ್ವೈ ಮಾತು ತಪ್ಪಲ್ಲ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಸಿಎಂ ಬಿಎಸ್ವೈ ಅವರು ಯಾವುದೇ ಕಾರಣಕ್ಕೂ ಕೊಟ್ಟ ಮಾತು ತಪ್ಪುವವರಲ್ಲ.
ನ್ಯಾ| ನಾಗಮೋಹನ್ದಾಸ್ ವರದಿ ತಿಂಗಳ ಹಿಂದೆಯಷ್ಟೇ ಸರಕಾರದ ಮುಂದೆ ಬಂದಿದ್ದು, ಕೋವಿಡ್ ಕಾರಣದಿಂದ ಮುಂದಿನ ಪ್ರಕ್ರಿಯೆ ನಡೆದಿಲ್ಲ ಎಂದರು.
ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಸುರಪುರ ಶಾಸಕ ರಾಜುಗೌಡ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಶಾಸಕರಾದ ಎಸ್.ವಿ. ರಾಮಚಂದ್ರ, ಟಿ. ರಘುಮೂರ್ತಿ, ಈ. ತುಕಾರಾಂ, ಅನಿಲ್ ಚಿಕ್ಕಮಾದು, ಕಂಪ್ಲಿ ಗಣೇಶ್, ವೆಂಕಟಪ್ಪ ನಾಯ್ಕ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮತ್ತಿತರರು ಮಾತನಾಡಿದರು.
ಸೆ.21ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಶಾಸಕರ ಭವನದಲ್ಲಿ ವಾಲ್ಮೀಕಿ ಶ್ರೀಗಳ ನೇತೃತ್ವ ದಲ್ಲಿ ಸಮಾಜದ ಶಾಸಕರು ಮತ್ತು ಸಂಸದರ ಸಭೆ ನಡೆಸಿ, ಬಳಿಕ ಸಿಎಂ ಬಳಿ ನಿಯೋಗ ತೆರಳಲಾಗುವುದು.
– ಬಿ. ಶ್ರೀರಾಮುಲು, ಆರೋಗ್ಯ ಸಚಿವ
ರಾಮನ ಹೆಸರಿನಲ್ಲಿ ಅ ಧಿಕಾರಕ್ಕೆ ಬಂದಿರುವ ಬಿಜೆಪಿ, ರಾಮನನ್ನು ವಿಶ್ವಕ್ಕೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಯ ಸಮಾಜದವರಿಗೆ ನ್ಯಾಯಯುತ ಮೀಸಲಾತಿ ನೀಡಲು ಜಾಣ ಕಿವುಡುತನ ತೋರಿದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ.
– ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!