ಥ್ಯಾಂಕ್ಸ್ ಅಮಿತ್ ಶಾಜೀ: ಬಾಲಿವುಡ್ ನಟಿ ಕಂಗನಾಗೆ “ವೈ” ಕೆಟಗರಿ ಭದ್ರತೆ


Team Udayavani, Sep 7, 2020, 12:23 PM IST

Kangana Ranaut granted Y category security ahead of Mumbai visi

ಮುಂಬೈ:ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರ, ಪೊಲೀಸರ ವಿರುದ್ಧ ಬಾಲಿವುಡ್ ನಟಿ ಕಂಗನಾ ರಣೌತ್ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಏತನ್ಮಧ್ಯೆ ಕೇಂದ್ರ ಗೃಹ ಸಚಿವಾಲಯ “ವೈ” ಕೆಟಗರಿಯ ಭದ್ರತೆ ಒದಗಿಸಿರುವುದಾಗಿ ವರದಿ ತಿಳಿಸಿದೆ.

ನಟಿ ಕಂಗನಾ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ನಡುವೆ ಕಳೆದ ಕೆಲವು ದಿನಗಳಿಂದ ವಾಗ್ಯುದ್ಧ ಮುಂದುವರಿದಿದೆ. ಅಲ್ಲದೇ ಕಂಗನಾ ಆಕೆಯ ಹೇಳಿಕೆಗೆ ಸಂಬಂಧಿಸಿ ಮಹಾರಾಷ್ಟ್ರದ ಕ್ಷಮೆ ಕೇಳಿದರಷ್ಟೇ, ನಾನು ನನ್ನ ಹೇಳಿಕೆಗಾಗಿ ಕಂಗನಾ ಬಳಿ ಕ್ಷಮೆ ಕೇಳುತ್ತೇನೆ ಎಂದು ರಾವತ್ ಪ್ರತಿಕ್ರಿಯೆ ನೀಡಿದ್ದರು.

ಸೆಪ್ಟೆಂಬರ್ 9ರಂದು ಕಂಗನಾ ಮುಂಬೈಗೆ ಆಗಮಿಸಲಿದ್ದಾರೆ. ಶಿವಸೇನಾ ಸಂಸದ ರಾವತ್ ಜತೆಗಿನ ಜಟಾಪಟಿ ನಡುವೆಯೇ ಕಂಗನಾಗೆ “ವೈ” ಶ್ರೇಣಿಯ ಭದ್ರತೆ ನೀಡಲಾಗಿದೆ. ವಿಐಪಿಗಳಿಗೆ ನೀಡುವ ವೈ ಕೆಟಗರಿ ಭದ್ರತೆಯಲ್ಲಿ ಕಮಾಂಡೋಗಳು ಸೇರಿದಂತೆ 11 ಮಂದಿ ಭದ್ರತೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.

ಭದ್ರತೆ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಇಂತಹ ಫ್ಯಾಸಿಸ್ಟ್ ಪಡೆಗಳಿಂದ ರಾಷ್ಟ್ರೀಯವಾದಿ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದಕ್ಕೆ ಪುರಾವೆಯಾಗಿದೆ. ಅಮಿತ್ ಶಾ ಜೀಗೆ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಂಗನಾ ರಣೌತ್ ಮುಂಬೈ ನಗರಿಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದು, ಇದರಿಂದಾಗಿ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಶಿವಸೇನಾ ಮುಖಂಡರು, ಮಹಾರಾಷ್ಟ್ರ ಸರ್ಕಾರ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಾಗ್ದಾಳಿ ನಡೆಸಿದ್ದರು.

ನಟಿ ಕಂಗನಾ ರಣೌತ್ ಗೆ ಭದ್ರತೆ ನೀಡುವುದಾಗಿ ಭಾನುವಾರ ಹಿಮಾಚಲ ಪ್ರದೇಶ ಸರ್ಕಾರ ಕೂಡಾ ತಿಳಿಸಿದ್ದರು. ಮುಂಬೈ ಭೇಟಿ ನೀಡುವ ವೇಳೆ ಭದ್ರತೆಯನ್ನು ನೀಡುವುದಾಗಿ ಹಿಮಾಚಲ ಮುಖ್ಯಮಂತರಿ ಜೈರಾಮ್ ಠಾಕೂರ್ ತಿಳಿಸಿದ್ದರು.

ವಿವಾದಿತ ಹೇಳಿಕೆಗಾಗಿ ಕಂಗನಾ ವಿರುದ್ದ ಮುಂಬೈನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.  ಅಂಧೇರಿ ಪೊಲೀಸ್ ಠಾಣೆಯಲ್ಲಿ ವಕೀಲ ಅನಿಲ್ ಕಾಶೀಫ್ ಖಾನ್ ದೇಶ್ ಮುಖ್ ಕಂಗನಾ ವಿರುದ್ಧ ದೂರು ನೀಡಿದ್ದರು. ಆಝಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿತ್ತು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.