ಚರಂಡಿ ಅವ್ಯವಸ್ಥೆ: ಸಾಂಕಾ‹ಮಿಕ ರೋಗ ಭೀತಿ
Team Udayavani, Sep 7, 2020, 12:57 PM IST
ಅನಗೊಂಡನಹಳ್ಳಿ: ಸಮೇತನಹಳ್ಳಿ ಗ್ರಾಪಂ ವ್ಯಾಪ್ತಿಯಕೆ.ಮಲ್ಲಸಂದ್ರ ಗ್ರಾಮದ ಬಸವೇಶ್ವರ ದೇವಾಲಯದ ಮುಂಭಾಗದ ರಸ್ತೆಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಂತಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಳೆ ಬಂದರೆ ರಸ್ತೆಯ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ.
ಒಂದು ತಿಂಗಳಿನಿಂದ ಚರಂಡಿಯಲ್ಲಿ ರಸ್ತೆ ಬದಿಯ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು, ಮಳೆ ಬಂದರೆ ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ಕಸವು ಸೇರಿ ಕೊಳೆಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಸುತ್ತಮುತ್ತಲಿನ ಮನೆಗಳ ವೃದ್ಧರು ಹಾಗೂ ಮಕ್ಕಳು ಡೆಂಗ್ಯು ಜ್ವರದಿಂದ ಬಳಲುವಂತಾಗಿದೆ. ಇದಕ್ಕೆ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರ ಬೇಜವಾಬ್ದಾರಿ ತನವೇ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.
ಸಾಂಕ್ರಾಮಿಕ ರೋಗ ಭೀತಿ: ನಿತ್ಯ ಇದೇ ರಸ್ತೆ ಮೇಲೆ ಗ್ರಾಪಂ ಸದಸ್ಯರು ಓಡಾಡುತ್ತಾರೆ. ಆದರೆ ಅವರಿಗೆ ಈ ಸಮಸ್ಯೆಯನ್ನು ಬಗೆಹರಿಸುವ ಮನಸ್ಸಿಲ್ಲದಾಗಿದೆ. ನೂತನವಾಗಿ ಸಿಸಿ ಚರಂಡಿ ನಿರ್ಮಾಣ ಮಾಡಿದ್ದರೂ ಸಹ ಸರಿಯಾದ ನಿರ್ವಹಣೆ ಇಲ್ಲದೇ ಚರಂಡಿಯಲ್ಲಿ ಕಲುಷಿತ ನೀರು ಸೇರಿ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದಾಗಿ ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ.
ಔಷಧಿ ಸಿಂಪಡಣೆ ಮಾಡಿಲ್ಲ : ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛತಾ ಕಾರ್ಯ ಮಾಡಿಲ್ಲ. ಔಷಧಿ ಸಿಂಪಡಿಸಿಲ್ಲ. ದೇವಾಲಯದ ಬಳಿ ಹಳೆಯದಾದ ತಿಪ್ಪಾಳಕುಂಟೆ ಇದ್ದು ಗ್ರಾಮದ ಅರ್ಧದಷ್ಟು ಚರಂಡಿಯ ಕೊಳಚೆನೀರು ಈ ಕುಂಟೆ ಸೇರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ವೈದ್ಯಾಧಿಕಾರಿಗಳು ಸಹ ಆಸ್ಪತ್ರೆಗೆ ಹೋದ ರೋಗಿಗಳಿಗೆ ಮಲ್ಲಸಂದ್ರ ಗ್ರಾಮದಲ್ಲಿ ಡೆಂ à ಪ್ರಕರಣಗಳು ಹೆಚ್ಚಾಗಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.
ಸ್ವಚ್ಛ ಮಾಡಲು ಆಗುತ್ತಿಲ್ಲ : ಚರಂಡಿ ಸಮಸ್ಯೆ ವಿಚಾರವಾಗಿ ಪತ್ರಿಕೆಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಸದಸ್ಯ ರವಿ, ಗ್ರಾಮ ಪಂಚಾಯಿತಿಯಿಂದ ಬಂದ ಅನುದಾನದಲ್ಲಿ ಸಿಸಿ ಚರಂಡಿ ನಿರ್ಮಾಣ ಮಾಡಲಾಗಿದೆ. ಸರ್ಕಾರಿ ತಿಪ್ಪಾಳಕುಂಟೆ ಜಾಗ ಒತ್ತುವರಿ ಹಾಗೂ ಚರಂಡಿ ಮೇಲೆ ಹಲವಾರು ಮಂದಿ ಮನೆಗಳನ್ನು ನಿರ್ಮಿಸಿಕೊಂಡಿರುವುದರಿಂದ ಚರಂಡಿ ಸ್ವತ್ಛ ಮಾಡಲು ಆಗುತ್ತಿಲ್ಲ ಎಂದು ಹೇಳಿದರು.
–ಮಹೇಶ್ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ