ಕೋವಿಡ್‌ ಪ್ರಕರಣಗಳ ಹೆಚ್ಚಳ ಅಸಡ್ಡೆ ಖಂಡಿತ ಬೇಡ


Team Udayavani, Sep 7, 2020, 1:13 PM IST

ಕೋವಿಡ್‌ ಪ್ರಕರಣಗಳ ಹೆಚ್ಚಳ ಅಸಡ್ಡೆ ಖಂಡಿತ ಬೇಡ

ಕೋವಿಡ್‌-19 ಭಾರತದಲ್ಲಿ ವೇಗವಾಗಿ ಹರಡುತ್ತಿದೆ. 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 90 ಸಾವಿರದ ಗಡಿ ದಾಟಿರುವುದು ಆತಂಕದ ಸಂಗತಿಯೇ ಸರಿ. ಆದರೆ ಇದೇ ವೇಳೆಯಲ್ಲೇ ಚೇತರಿಕೆ ಪ್ರಮಾಣವೂ ಉತ್ತಮವಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ 41 ಲಕ್ಷದ ಗಡಿ ದಾಟಿದ್ದರೆ, ಇವರಲ್ಲಿ ಈಗಾಗಲೇ 32 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಎನ್ನುವುದು ಸಮಾಧಾನದ ವಿಷಯ. ಹಾಗೆಂದು ಇದನ್ನೇ ಆಧಾರವಾಗಿಟ್ಟುಕೊಂಡು ಯಾವುದೇ ಕಾರಣಕ್ಕೂ ದೇಶವಾಸಿಗಳು ಮೈಮರೆ ಯುವಂತೆಯೇ ಇಲ್ಲ.

ಕಟ್ಟುನಿಟ್ಟಿನ ಲಾಕ್‌ಡೌನ್‌ ಹಂತಗಳೆಲ್ಲ ಮುಗಿದು ಈಗ ಬಹುತೇಕ ವಲಯಗಳು ಬಾಗಿಲು ತೆರೆದಿವೆ. ಆರ್ಥಿಕ ಚಕ್ರಕ್ಕೆ ಮರುಚಾಲನೆ ನೀಡಲೇಬೇಕಾದ ಅನಿವಾರ್ಯವಿರುವುದರಿಂದ ಹೀಗೆ ಮಾಡಲೇಬೇಕಿತ್ತು. ಹಾಗೆಂದು ನಿರ್ಬಂಧಗಳು ಸಡಿಲವಾಗಿವೆಯೆಂದರೆ ಅಪಾಯದ ತೀವ್ರತೆ ಕಡಿಮೆಯಾಗಿದೆ ಎಂದರ್ಥವಲ್ಲ. ದಿನಕ್ಕೆ 90 ಸಾವಿರ ಸೋಂಕಿತರು ಪತ್ತೆಯಾಗುತ್ತಾರೆ ಎಂದರೆ, ಇನ್ನೂ ಪರೀಕ್ಷೆಗೊಳಪಡದ ಎಷ್ಟು ಸೋಂಕಿತರು ಇದ್ದಾರೋ, ಸೋಂಕಿತರ ಸಂಪರ್ಕಕ್ಕೆ ಎಷ್ಟು ಜನರು ಬಂದಿರುತ್ತಾರೋ ತಿಳಿಯದು. ಹೆಚ್ಚುತ್ತಿರುವ ಪ್ರಕರಣಗಳ ಕಾರಣದಿಂದಾಗಿ ಈಗ ಕಾಂಟ್ಯಾಕ್ಟ್ ಟ್ರೇಸಿಂಗ್‌ ಪ್ರಕ್ರಿಯೆಗೂ ಬಹಳ ಹಿನ್ನಡೆಯಾಗಿದೆ.

ಕೋವಿಡ್‌ ಮಾರಣಾಂತಿಕವಲ್ಲ ಎನ್ನುವ ವಿಚಾರ ಯಾವ ಕಾರಣಕ್ಕೂ ಅಸಡ್ಡೆಗೆ ಕಾರಣವಾಗಬಾರದು. ಈ ಅಸಡ್ಡೆಯು ನಮ್ಮ ಸುತ್ತಲೂ ಇರುವ ಅನಾರೋಗ್ಯ ಪೀಡಿತರನ್ನು, ವಯಸ್ಸಾದವರನ್ನು ಅಪಾಯದಂಚಿಗೆ ತಳ್ಳಿಬಿಡಬಲ್ಲದು. ಪ್ರತಿಯೊಂದು ಜೀವವೂ ಅಮೂಲ್ಯವಾಗಿರುವುದರಿಂದ, ಅಂಕಿ ಸಂಖ್ಯೆಗಳಲ್ಲಿ ಸಾವುಗಳನ್ನು ಅಳೆಯುವುದು ಖಂಡಿತ ತಪ್ಪಾಗುತ್ತದೆ. ಅದೂ ಅಲ್ಲದೇ ಈಗಲೂ ಈ ವೈರಾಣುವಿನ ಪೂರ್ಣ ಜೀನೋಮಿಕ್‌ ಗುಣಗಳು ಅಪರಿಚಿತವೇ ಆಗಿವೆ. ಈ ರೋಗ ಶ್ವಾಸಕೋಶಗಳ ಮೇಲೆ, ಹೃದಯ ಸೇರಿ ದಂತೆ ಇತರ ಅಂಗಗಳ ಮೇಲೆ ಯಾವ ರೀತಿಯ ಪರಿಣಾಮವುಂಟುಮಾಡುತ್ತದೆ ಎನ್ನುವುದು ಈಗಲೂ ಸ್ಪಷ್ಟವಿಲ್ಲ. ಈ ಕಾರಣಕ್ಕಾಗಿಯೇ, ವಿಶ್ವ ಆರೋಗ್ಯ ಸಂಸ್ಥೆಯೂ ಸಹ ಇದನ್ನು ಕೇವಲ ಸಣ್ಣ ಫ್ಲ್ಯೂ ಎಂಬಂತೆ ನೋಡಬಾರದು ಎಂದು ಅನೇಕ ಬಾರಿ ಎಚ್ಚರಿಸಿದೆ. ರೋಗ ಲಕ್ಷಣ ಇಲ್ಲದವರ ಆರೋಗ್ಯದ ಮೇಲೂ ಈ ವೈರಾಣು ಪರಿಣಾಮಬೀರಬಲ್ಲದೇ ಎನ್ನುವ ಕುರಿತು ಈಗ ಅಧ್ಯಯನಗಳು ನಡೆದೇ ಇವೆ. ಬ್ರಿಟನ್‌ನಲ್ಲಿ ಈ ವೈರಸ್‌ನಿಂದ ಗುಣಮುಖರಾದವರಲ್ಲಿ ಹೃದಯ, ಶ್ವಾಸಕೋಶ ಸೇರಿದಂತೆ ಅನ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ.

ಯಾವುದೇ ದೇಶಕ್ಕಾಗಲಿ ದೀರ್ಘ‌ಕಾಲದವರೆಗೆ ಅರ್ಥವ್ಯವಸ್ಥೆಯ ಚಕ್ರವನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ. ದೇಶಾದ್ಯಂತ ಸರಕಾರಗಳು, ಆರೋಗ್ಯ ವ್ಯವಸ್ಥೆ ತಮ್ಮ ಪಾಲಿನ ಜವಾಬ್ದಾರಿಯನ್ನಂತೂ ನಿರ್ವಹಿಸಿವೆ, ನಿರ್ವಹಿಸುತ್ತಿವೆ. ಈಗ ಜನ ಸಾಮಾನ್ಯರು ಎಚ್ಚರಿಕೆ ವಹಿಸಲೇಬೇಕಾದ ಅಗತ್ಯವಿದೆ. ನನ್ನ ರೋಗ ನಿರೋಧಕ ಶಕ್ತಿ ಉತ್ತಮವಾಗಿದೆ, ನನಗೇನೂ ಆಗದು ಎಂಬ ಮನಃಸ್ಥಿತಿಯೇ ರೋಗ ಪ್ರಸರಣಕ್ಕೆ ಕಾರಣವಾಗುತ್ತಿದೆ. ನಮ್ಮಿಂದಾಗಿ ಇನ್ನೊಬ್ಬರಿಗೆ ಅಪಾಯ ಆಗಬಾರ ದಲ್ಲವೇ? ಈ ನಿಟ್ಟಿನಲ್ಲಿಯೇ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ ಸ್ವತ್ಛಗೊಳಿಸಿಕೊಳ್ಳುವಂಥ ವಿಚಾರದಲ್ಲಿ ಅಸಡ್ಡೆ ಸಲ್ಲದು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.