ಮನೆ ಬಾಗಿಲಿಗೆ ಜಾಬ್ ಕಾರ್ಡ್ ನೀಡಿ
Team Udayavani, Sep 7, 2020, 2:19 PM IST
ಶಿಡ್ಲಘಟ್ಟ: ಗ್ರಾಪಂ ವ್ಯಾಪ್ತಿಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಇಲಾಖೆಯ ಪಂಚತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕೆಂದು ತಾಪಂ ಇಒ ಬಿ.ಶಿವಕುಮಾರ್ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ರಾಪಂ ಗಣಕಯಂತ್ರ ನಿರ್ವಾಹಕರು (ಆಪರೇಟರ್)ಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರದ ಸೂಚನೆಯನ್ನು ಪಾಲಿಸಿ ಜಾಬ್ ಕಾರ್ಡ್ಗಳನ್ನು ತ್ವರಿತವಾಗಿ ವಿತರಿಸಬೇಕೆಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯನ್ನು ಪ್ರತಿಯೊಬ್ಬರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ, ಜಾಬ್ ಕಾರ್ಡ್ ಅಥವಾ ಇನ್ನಿತರೆ ಸೌಲಭ್ಯ ಪಡೆಯಲು ಬರುವ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ಸೂಚಿಸಿದರು. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿಕೈಗೊಂಡ ಯೋಜನೆಗಳಲ್ಲಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಡಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದ ಅವರು, ಸೆಪ್ಟೆಂಬರ್ ತಿಂಗಳಿನಲ್ಲಿ ಸೋಕ್ ಫಿಟ್ ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸಂಪೂರ್ಣವಾಗಿ ಸಹಕರಿಸಬೇಕಲ್ಲದೇ, ಪಿಡಿಒಗೆ ಪೂರಕವಾಗಿ ತೆರಿಗೆ ವಸೂಲಿ ಮಾಡಲುಹೆಚ್ಚಿನ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್