ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ


Team Udayavani, Sep 7, 2020, 3:21 PM IST

ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ

ಕಲಾದಗಿ: ಮೂರು ತಾಲೂಕಿನ ಮೂವತ್ತು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆಗೆ ರಕ್ಷಣಾ ಬ್ಯಾರಿಕೇಡ್‌ ಅಳವಡಿಸದೇ ಇರುವುದರಿಂದ ವಾಹನ ಸವಾರರು ನಿತ್ಯವೂ ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ.

ಬಾಗಲಕೋಟೆ, ಬೀಳಗಿ, ಮುಧೋಳ ತಾಲೂಕಿನ ಹಲವು ಹಳ್ಳಿಗಳಿಗೆ ಸನಿಹ ಸಂಪರ್ಕ ರಸ್ತೆ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆ ರೈತರಿಗೆ ವ್ಯಾಪಾರಸ್ಥರಿಗೆ ಉಪಯೋಗಿ ಸಂಚಾರ ರಸ್ತೆಯಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಬ್ಯಾರೇಜ್‌ ಬಳಿಯ ಬಾಗಲಕೋಟೆ ತಾಲೂಕಿನ ಭಾಗದ ಮಣ್ಣು ಏರು ರಸ್ತೆಗೆ ಎರಡೂ ಕಡೆ ರಕ್ಷಣಾ ಬ್ಯಾರಿಕೇಡ್‌ ಇಲ್ಲ.

ಸವಾರರ ಆಕ್ರೋಶ: ಕಳೆದ ಆಗಸ್ಟ್‌ ಮೊದಲ ವಾರದಲ್ಲಿ ಉಂಟಾದ ನದಿಯ ಮಹಾಪ್ರವಾಹಕ್ಕೆ ಬ್ಯಾರೇಜ್‌ ಬಳಿಯ 200 ಮೀಟರ್‌ ರಸ್ತೆ ಸಮೇತ ಹಿಂದೆ ಅಳವಡಿಸಿದ್ದ ಕ್ರಾಸ್‌ ಬೇರಿಯರ್‌ ಕಿತ್ತು ಹೋಗಿದ್ದವು. ಪ್ರವಾಹ ಅಬ್ಬರ ಕಡಿಮೆಯಾದ ನಂತರ ತುರ್ತು ಕಾಮಗಾರಿಯಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು, ಸಂಚಾರ ರಸ್ತೆ ನಿರ್ಮಿಸಿ ವರ್ಷ ಕಳೆದರೂ ಇನ್ನೂ ಏರು ರಸ್ತೆಗೆ ಡಾಂಬರೀಕರಣ ಮಾಡಿಲ್ಲ,ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

15 ಅಡಿ ಆಳ: ಬ್ಯಾರೇಜ್‌ ಬಳಿ ಮಣ್ಣು ಏರು ರಸ್ತೆಯಲ್ಲಿ ನಿರ್ಮಿಸಲಾಗಿದೆ, ಎರಡೂ ಕಡೆ ಹದಿನೈದು ಅಡಿಯಿಂದ ಇಪ್ಪತ್ತು ಅಡಿ ಆಳ ಹೊಂದಿದೆ. ವಾಹನ ಸವಾರರು ಎಚ್ಚರ ತಪ್ಪಿದರೆ ಅನಾಹುತ ಖಚಿತ ಎಂಬಂತಾಗಿದೆ. ಹಳ್ಳಿಗಳ ಸನಿಹ ಸಂಪರ್ಕಕ್ಕೆ ಪ್ರಮುಖ ರಸ್ತೆಯಾಗಿರುವ ಈ ರಸ್ತೆ ಕೂಡಲೇ ಡಾಂಬರೀಕರಣ ಮತ್ತು ರಸ್ತೆ ಎರಡು ಬದಿ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡಬೇಕೆಂದು ವಾಹನ ಸವಾರರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬ್ಯಾರೇಜ್‌ ಬಳಿ ರಸ್ತೆಯ ಎರಡೂ ಬದಿ 20 ಅಡಿ ಆಳದ ತೆಗ್ಗುಗಳಿವೆ. ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಅಳವಡಿಸಲಿ ಹಾಗೂ ರಸ್ತೆಗೆ ಡಾಂಬರೀಕರಣ ಮಾಡಬೇಕು. – ಬಸವರಾಜ ಬಿಲಕೇರಿ, ಅಂಕಲಗಿ ಗ್ರಾಮಸ್ಥ

ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿಯ ರಸ್ತೆಗೆ ಸೈಡ್‌ ಕ್ರಾಸ್‌ ಬೇರಿಯರ್‌, ಪಿಚ್ಚಂಗಿ ಹಚ್ಚಿಕೊಳ್ಳುವಿಕೆ, ಡಾಂಬರೀಕರಣ ಕಾಮಗಾರಿಗೆ ಹಣಕಾಸು ಇಲಾಖೆಯ ಅನುಮೋದನೆ ದೊರೆಯದೆ ಇರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. – ರವೀಂದ ಕುಂಬಾರ, ಎಇಇ, ಸಣ್ಣ ನೀರಾವರಿ ಇಲಾಖೆ ಬಾಗಲಕೋಟೆ.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.