ತಿಂಗಳ ಮೊದಲ 4 ದಿನದಲ್ಲಿ 74 ಸಾವಿರ ಪ್ರಕರಣ


Team Udayavani, Sep 7, 2020, 5:56 PM IST

ತಿಂಗಳ ಮೊದಲ 4 ದಿನದಲ್ಲಿ 74 ಸಾವಿರ ಪ್ರಕರಣ

ಸಾಂದರ್ಭಿಕ ಚಿತ್ರ

ಮುಂಬಯಿ, ಸೆ. 6: ಕೋವಿಡ್‌ ಪ್ರಕರಣಗಳಲ್ಲಿ ಮಹಾರಾಷ್ಟ್ರವು ಸೆಪ್ಟಂಬರ್‌ ತಿಂಗಳ ಮೊದಲ ನಾಲ್ಕು ದಿನಗಳಲ್ಲಿ 74 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ವರದಿ ಮಾಡಿದೆ. ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ ಸೆ. 1, 2 ಮತ್ತು 3ರಂದು ಮಹಾರಾಷ್ಟ್ರದಲ್ಲಿ ಕ್ರಮವಾಗಿ 15,765, 17,433ಮತ್ತು 18,105 ಕೋವಿಡ್ ಪ್ರಕರಣ ಪತ್ತೆಯಾಗಿದ್ದು ಇಲಾಖೆಯ ನಿದ್ದೆಗೆಡಿಸಿದೆ.

ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಪ್ರಕರಣಗಳು : ರಾಜ್ಯದ ಹಾಟ್‌ಸ್ಪಾಟ್‌ಗಳಲ್ಲಿ ಪ್ರಕರಣ ಹೆಚ್ಚಳವಾಗಿದ್ದು, ಇದರ ಜತೆ ಗ್ರಾಮೀಣ ಪ್ರದೇಶಗಳಲ್ಲಿ ಗಮನಾರ್ಹ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಜೂನ್‌ 3ರಂದು, ರಾಜ್ಯವು ತನ್ನ ಮಿಷನ್‌ ಬಿಗಿನ್‌ ಎಗೇನ್‌ ಯೋಜನೆಯಡಿಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಲು ಪ್ರಾರಂಭಿಸಿದಾಗ, ಹೆಚ್ಚಿನ ಪ್ರಕರಣಗಳು ನಗರಗಳಿಂದ ವರದಿಯಾಗಿದ್ದವು. ಮುಂಬಯಿ, ಥಾಣೆ, ನವಿಮುಂಬಯಿ, ಕಲ್ಯಾಣ್‌-ಡೊಂಬಿವಲಿ, ಉಲ್ಲಾಸ್‌ನಗರ, ಭಿವಂಡಿ-ನಿಜಾಂಪುರ, ಮೀರಾ-ಭಯಾಂದರ್‌, ವಸಾಯಿ-ವಿರಾರ್‌, ಪುಣೆ, ಸೋಲಾಪುರ, ಔರಂಗಾಬಾದ್‌, ನಾಸಿಕ್‌, ಮಾಲೆಗಾಂವ್‌, ಧುಲೆ, ಜಲ್ಗಾಂವ್‌, ಅಕೋಲಾ, ಅಮಾಲಾಇನ್ನಿತರ ನಗರಗಳಿಂದ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದವು.

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯ ದುರ್ಬಲ : ಆರೋಗ್ಯ ಮೂಲಸೌಕರ್ಯ ದುರ್ಬಲವಾಗಿರುವ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡಿದ್ದು, ಜನರಲ್ಲಿ ಜಾಗೃತಿ ಮೂಡಿಲ್ಲ ಎಂದು ಸಾರ್ವಜನಿಕ ಆರೋಗ್ಯ ತಜ್ಞ ಡಾ| ಸಂಜಯ್‌ ಪ್ಯಾಟಿವಾರ್‌ ಹೇಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡಿರುವುದರಿಂದ ಪ್ರಕರಣಗಳು ಹೆಚ್ಚುತ್ತಿದ್ದು, ಹೊಸ ಸ್ಥಳಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಆರೋಗ್ಯ ಮೂಲಸೌಕರ್ಯ ಇನ್ನೂ ದುರ್ಬಲವಾಗಿದ್ದು, ರೋಗದ ಗಂಭೀರತೆಯ ಬಗ್ಗೆ ಜನರಿಗೆ ಇನ್ನೂ ತಿಳಿದಿಲ್ಲ ಎಂದು ಪಟಿವಾರ್‌ ಹೇಳಿದ್ದಾರೆ.

ದೈನಂದಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವ ಮತ್ತು ವಿಶ್ಲೇಷಿಸುವಲ್ಲಿ ರಾಜ್ಯ ಸರಕಾರವು ವೈದ್ಯಕೀಯ ಕಾಲೇಜುಗಳನ್ನು ಸಹ ಒಳಗೊಳ್ಳಬೇಕು ಎಂದುಹೇಳಿದ ಅವರು, ಪ್ರತಿ ವೈದ್ಯಕೀಯ ಕಾಲೇಜಿನ ವೈದ್ಯರ ತಂಡವನ್ನು ಜಿಲ್ಲೆಗೆ ನಿಯೋಜಿಸಿ ಅವರು ಪರಿಸ್ಥಿತಿಯನ್ನು ವಿಶ್ಲೇಷಿಸುವಂತೆ ಮಾಡಬೇಕು. ಅವರು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ವಿಷಯಗಳನ್ನು ನಿಯಂತ್ರಣಕ್ಕೆ ತರಬಹುದು ಎಂದು ಸಲಹೆ ನೀಡಿದ್ದಾರೆ.

ನನ್ನ ಮನೆ-ನನ್ನ ಕುಟುಂಬ ಮನೆ ಮನೆ ಸಮೀಕ್ಷೆ  : ಈ ಮಧ್ಯೆ ಸೆಪ್ಟಂಬರ್‌ 15ರಿಂದ ನನ್ನಕುಟುಂಬ, ನನ್ನ ಜವಾಬ್ದಾರಿ ಮನೆ-ಮನೆಗೆ ಸಮೀಕ್ಷೆಯನ್ನು ಪ್ರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡ ತಂಡ ಪ್ರತಿಯೊಬ್ಬ ವ್ಯಕ್ತಿಯನ್ನು ಪರೀಕ್ಷಿಸುತ್ತದೆ ಮತ್ತು ಸೋಂಕಿತರಿಗೆ ಲಭ್ಯವಿರುವ ಸೇವೆಗಳನ್ನು ಸೂಚಿಸುತ್ತಾರೆ.

2.25 ಕೋಟಿ ಕುಟುಂಬಗಳ ಸಮೀಕ್ಷೆ : ಸಮೀಕ್ಷೆಯ ಸಂದರ್ಭ ರಾಜ್ಯವು ತಿಂಗಳಿಗೆ ಎರಡು ಬಾರಿ 2.25 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಲಿದೆ. ಮೊದಲ ಹಂತವನ್ನು ಸೆಪ್ಟಂಬರ್‌ 15 ಮತ್ತು ಅಕ್ಟೋಬರ್‌ 10ರ ನಡುವೆ ಮತ್ತು ಎರಡನೇ ಹಂತವನ್ನು ಅಕ್ಟೋಬರ್‌  12ರಿಂದ ಅಕ್ಟೋಬರ್‌ 24ರ ವರೆಗೆ ನಡೆಸಲಾಗುವುದು. ಈ ಸಮೀಕ್ಷೆಯು ಎಲ್ಲ ನಾಗರಿಕರ ಡೇಟಾವನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರಂಭಿಕ ಪತ್ತೆ ಮತ್ತು ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಇದು ರಾಜ್ಯಕ್ಕೆ ಕೋವಿಡ್‌ ಸಾವುಗಳನ್ನು ತಗ್ಗಿಸಲು ಸಾಧ್ಯವಾಗುತ್ತದೆ. ಸಮೀಕ್ಷೆಯ ಬಗ್ಗೆ ಪ್ರಸ್ತುತಿಯನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಶುಕ್ರವಾರ ನೀಡಿದ್ದಾರೆ.

 

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.