ಮತ್ತೂಂದು ದಾಖಲೆ ಬರೆದ ಬೆಳಗಾವಿ ವಿಮಾನ ನಿಲ್ದಾಣ

 ರಾಜ್ಯದ 3ನೇ "ಅತೀ ಹೆಚ್ಚು ಜನಸಾಂದ್ರತೆ ನಿಲ್ದಾಣ' ಹೆಗ್ಗಳಿಕೆ  ಲಾಕ್‌ಡೌನ್‌ ತೆರವಾದ ಬಳಿಕ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Team Udayavani, Sep 8, 2020, 5:08 PM IST

ಮತ್ತೂಂದು ದಾಖಲೆ ಬರೆದ ಬೆಳಗಾವಿ ವಿಮಾನ ನಿಲ್ದಾಣ

ಸಾಂದರ್ಭಿಕ ಚಿತ್ರ

ಬೆಳಗಾವಿ: ಕಳೆದ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಮೂಲಕ ಕೋವಿಡ್ ಹಾವಳಿ ಅವಧಿಯಲ್ಲಿ ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಜನಸಾಂದ್ರತೆ ಇರುವ ಎರಡನೇ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿದ್ದ ಬೆಳಗಾವಿ ವಿಮಾನ ನಿಲ್ದಾಣ ಈಗ ಮತ್ತೂಂದು ದಾಖಲೆಯ ಸಾಧನೆ ಮಾಡಿದೆ.

ಕೋವಿಡ್ ಕಷ್ಟದ ಸಮಯದಲ್ಲಿ ಅತೀ ಹೆಚ್ಚುಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ಬೆಳಗಾವಿವಿಮಾನ ನಿಲ್ದಾಣ ರಾಜ್ಯದಲ್ಲಿ ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತೀ ಹೆಚ್ಚು ಜನಸಾಂದ್ರತೆ ಇರುವ ನಿಲ್ದಾಣ ಎಂದು ಗುರುತಿಸಿಕೊಂಡಿದೆ. ಪ್ರಯಾಣಿಕರ ಸಂಚಾರದಿಂದ ವಿಮಾನ ನಿಲ್ದಾಣಗಳ ನಡುವೆ ಪೈಪೋಟಿ ಇದೆ ಎನ್ನಲಾಗದು. ಆದರೆ ಈ ಹಿಂದೆ ಪ್ರಯಾಣಿಕರಿಲ್ಲದೆ ನಷ್ಟದಲ್ಲಿದ್ದ ಬೆಳಗಾವಿ ವಿಮಾನ ನಿಲ್ದಾಣ ಈಗ ಅತೀ ಹೆಚ್ಚು ಪ್ರಯಾಣಿಕರ ಸಂಚಾರದ ಮೂಲಕ ರಾಜ್ಯದಲ್ಲಿ ಮಹತ್ವದ ಸ್ಥಾನ ಗಳಿಸಿರುವುದು ಹೆಮ್ಮೆ ಪಡುವಂತೆ ಮಾಡಿದೆ. ಈ ಭಾಗದ ಉದ್ಯಮಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ವಿಮಾನ ನಿಲ್ದಾಣ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ ಬೆಳಗಾವಿ ವಿಮಾನ ನಿಲ್ದಾಣದಿಂದ ಕಳೆದ ಆರು ತಿಂಗಳ ಅವಧಿಯಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಬೆಳಗಾವಿಯಿಂದ ಹೊರ ರಾಜ್ಯಗಳಿಗೆ ಹಾಗೂ ಬೇರೆ-ಬೇರೆ ರಾಜ್ಯಗಳಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಬೆಳಗಾವಿ ವಿಮಾನ ನಿಲ್ದಾಣ ತನ್ನ ಹಿಂದಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿದೆ. ಇದು ಗಡಿನಾಡಿಗೆ ಹೆಮ್ಮೆ ಉಂಟುಮಾಡುವ ಸಂಗತಿ.

ದೆಹಲಿ, ಚೆನ್ನೈಗೂ ಹಾರಲಿದೆ ವಿಮಾನ: ಈಗಾಗಲೇ ಬೆಂಗಳೂರು, ಮುಂಬೈ, ಹೈದರಾಬಾದ್‌, ಪುಣೆ, ಅಹ್ಮದಾಬಾದ್‌, ಮೈಸೂರು ಮತ್ತು ಇಂದೋರ್‌ ನಗರಗಳಿಗೆ ವಿಮಾನ ಸೇವೆ ನೀಡುತ್ತಿರುವ ಬೆಳಗಾವಿಯಿಂದ ದೆಹಲಿ ಹಾಗೂ ಚೆನ್ನೈಗೆ ವಿಮಾನ ಆರಂಭಿಸಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ದಾಖಲೆ ನೋಡಿದರೆ ಈ ಬೇಡಿಕೆಯೂ ಬಹಳ ಬೇಗ ಕಾರ್ಯರೂಪಕ್ಕೆ ಬರಲಿರುವ ಲಕ್ಷಣಗಳು ಕಾಣುತ್ತಿವೆ.

ಬೆಳಗಾವಿ ವಿಮಾನ ನಿಲ್ದಾಣ ಜನದಟ್ಟಣೆಯಿಂದ ಕೂಡಿರುವುದಕ್ಕೆ ಉಡಾನ್‌ ಯೋಜನೆ ಕಾರಣ ಎಂಬುದು ವಿಮಾನ ನಿಲ್ದಾಣದ ಅಧಿಕಾರಿಗಳ ಹೇಳಿಕೆ. ಇದೇ ಕಾರಣದಿಂದ ಈ ವಿಮಾನ ನಿಲ್ದಾಣ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿನ ಪ್ರಯಾಣಿಕರ ಸಂಖ್ಯೆಯ ದಾಖಲೆ ಮುರಿದಿದೆ. ಒಂದು ವರ್ಷದ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ. 2016-17ರಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ 421 ವಿಮಾನಗಳ ಮೂಲಕ 95 ಸಾವಿರ ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, 2017-18 ರಲ್ಲಿ 1.22 ಲಕ್ಷ ಪ್ರಯಾಣಿಕರು 2182 ವಿಮಾನಗಳ ಮೂಲಕ ಹಾಗೂ 2018-19ರಲ್ಲಿ 1026 ವಿಮಾನಗಳ ಮೂಲಕ 1.0  ಲಕ್ಷ ಪ್ರಯಾಣಿಕರು ಇದರ ಸೇವೆ ಪಡೆದುಕೊಂಡಿದ್ದರು. ಆದರೆ, 2019-20ರಲ್ಲಿ ಈ ಎಲ್ಲ ಅಂಕಿ-ಅಂಶಗಳ ದಾಖಲೆ ಮೀರಿ 2.78 ಲಕ್ಷ ಪ್ರಯಾಣಿಕರು ಈ ನಿಲ್ದಾಣವನ್ನು ಬಳಸಿಕೊಂಡಿದ್ದಾರೆ ಎನ್ನುತ್ತಾರೆ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ.

ಕೋವಿಡ್ ಸಂಕಷ್ಟದಲ್ಲಿ ಆರ್ಥಿಕ ಸ್ಥಿತಿ ಕುಸಿದಿರುವಾಗ ಪ್ರಯಾಣಿಕರು ಬರುವರೇ ಎಂಬ ಅನುಮಾನ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಕಾಡಿತ್ತು. ಆದರೆ ಜೂನ್‌ದಿಂದ ಆಗಸ್ಟ್‌ನಲ್ಲಿ ಕಂಡು ಬಂದ ಪ್ರಯಾಣಿಕರ ಸಂಖ್ಯೆ ಈ ಎಲ್ಲ ಅನುಮಾನಗಳನ್ನು ಪರಿಹರಿಸಿದೆ. ಮೇ 25ರಿಂದ ಲಾಕ್‌ಡೌನ್‌ ತೆರವಾಗಿ ವಿವಿಧ ರಾಜ್ಯಗಳಿಗೆ ವಿಮಾನ ಸಂಚಾರ ಆರಂಭವಾದ ನಂತರ ಮೇ 25ರಿಂದ 31ರವರೆಗೆ 445 ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, ಜೂನ್‌ ತಿಂಗಳಲ್ಲಿ 10,346 ಪ್ರಯಾಣಿಕರು 386 ವಿಮಾನಗಳ ಮೂಲಕ ಪ್ರಯಾಣ ಮಾಡಿದ್ದಾರೆ. ಈ ಸಂಖ್ಯೆ ಜುಲೈ ತಿಂಗಳಲ್ಲಿ ನಾಲ್ಕು ಸಾವಿರ ಹೆಚ್ಚಾಗಿದೆ. ಅಂದರೆ 14,500 ಪ್ರಯಾಣಿಕರು 443 ವಿಮಾನಗಳ ಮೂಲಕ ವಿವಿಧ ರಾಜ್ಯಗಳಿಗೆ ಪ್ರಯಾಣ ಮಾಡಿದ್ದಾರೆ ಹಾಗೂ ಅಲ್ಲಿಂದ ಬೆಳಗಾವಿಗೆ ಆಗಮಿಸಿದ್ದಾರೆ. ಆಗಸ್ಟ್‌ ತಿಂಗಳಲ್ಲಿ ಅತೀ ಹೆಚ್ಚು ಅಂದರೆ 18,280 ಪ್ರಯಾಣಿಕರು ಈ ನಿಲ್ದಾಣದ ಸೇವೆ ಬಳಸಿಕೊಂಡಿದ್ದಾರೆ. ಇದೇ ವಿಶ್ವಾಸದ ಮೇಲೆ ಬೆಳಗಾವಿ ವಿಮಾನ ನಿಲ್ದಾಣ ಸೆಪ್ಟೆಂಬರ್‌ ತಿಂಗಳಲ್ಲಿ 22 ಸಾವಿರ ಪ್ರಯಾಣಿಕರನ್ನು ನಿರೀಕ್ಷೆ ಮಾಡಿದೆ.

ಶಿರಡಿ, ನಾಸಿಕ್‌ಗೂ ಸೇವೆ :  ಕಳೆದ ಜನವರಿಯಲ್ಲಿ ಉಡಾನ್‌-3ನೇ ಹಂತದ ಯೋಜನೆಯಲ್ಲಿ ಆಯ್ಕೆಯಾದ ಬೆಳಗಾವಿ ಈ ಯೋಜನೆಯಡಿ 18 ವಿಮಾನ ಸಂಸ್ಥೆಗಳ ಮೂಲಕ ಬೆಂಗಳೂರು, ಮುಂಬೈ, ಅಹ್ಮದಾಬಾದ್‌, ಹೈದರಾಬಾದ್‌ ಸೇರಿದಂತೆ ಒಟ್ಟು 13 ಮಾರ್ಗಗಳನ್ನು ಪಡೆದುಕೊಂಡಿತು. ನಂತರ ಫೆಬ್ರವರಿಯಲ್ಲಿ ಸ್ಟಾರ್‌ ಏರ್‌ಲೈನ್‌ ಬೆಂಗಳೂರಿಗೆ ತನ್ನ ಮೊದಲ ವಿಮಾನ ಸೇವೆ ಆರಂಭ ಮಾಡಿತು. ನಂತರ ಒಂದೊಂದೇ ಸಂಸ್ಥೆಗಳ ಮೂಲಕ ಬೆಳಗಾವಿ ದೇಶದ ಎಳು ನಗರಗಳಿಗೆ ತನ್ನ ಸೇವೆ ವಿಸ್ತರಿಸಿಕೊಂಡಿತು. ಈಗ ಸದ್ಯದಲ್ಲೇ ಸ್ಟಾರ್‌ ಏರ್‌ ಇಲ್ಲಿಂದ ಶಿರಡಿ, ನಾಸಿಕ್‌ ಮೊದಲಾದ ನಗರಗಳಿಗೆ ತನ್ನ ಸೇವೆ ಆರಂಭಿಸಲಿದೆ.

ಕೋವಿಡ್ ಸಮಸ್ಯೆ ಮಧ್ಯೆಯೂ ಬೆಳಗಾವಿ ವಿಮಾನ ನಿಲ್ದಾಣ ಸಾಕಷ್ಟು ನಿರೀಕ್ಷೆ ಹುಟ್ಟಿಸುವಂತಹ ಪ್ರಗತಿ ಸಾಧಿಸಿದೆ. ನಮ್ಮ ಸೇವೆ ಜನರಿಗೆ ಇಷ್ಟವಾಗಿದೆ. ನಮಗೆ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿಸಿದೆ. ಡಿಸೆಂಬರ್‌ನಲ್ಲಿ ಚೆನ್ನೈ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಿಗೆ ವಿಮಾನ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.- ರಾಜೇಶಕುಮಾರ ಮೌರ್ಯ, ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ

 

-ಕೇಶವ ಆದಿ

ಟಾಪ್ ನ್ಯೂಸ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.